ದೆಹಲಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ: ಸಚಿವ ಕಪಿಲ್ ಮಿಶ್ರಾಗೆ ಪತ್ರ ಬರೆದ ವಿಎಚ್‌ಪಿ

Date:

ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಯ ಹೆಸರನ್ನು ದೆಹಲಿಯ ಬದಲಾಗಿ ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಒತ್ತಾಯಿಸಿದೆ. ಈ ಸಂಬಂಧ ದೆಹಲಿ ಸಂಸ್ಕೃತಿ ಸಚಿವ ಕಪಿಲ್ ಮಿಶ್ರಾ ಅವರಿಗೆ ಪತ್ರ ಬರೆದಿದೆ.

ವಿಎಚ್‌ಪಿಯ ದೆಹಲಿ ಘಟಕವು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದ್ರಪ್ರಸ್ಥ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ದೆಹಲಿ ರೈಲು ನಿಲ್ದಾಣವನ್ನು ಇಂದ್ರಪ್ರಸ್ಥ ರೈಲು ನಿಲ್ದಾಣ ಮತ್ತು ಶಹಜಹಾನಾಬಾದ್ ಅಭಿವೃದ್ಧಿ ಮಂಡಳಿಯನ್ನು ಇಂದ್ರಪ್ರಸ್ಥ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ನೆಹರು ಸ್ಮಾರಕದ ಮರುನಾಮಕರಣ : ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಧಾನಿಯ ಹೆಸರನ್ನು ಅದರ ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯೊಂದಿಗೆ ಸಂಪರ್ಕಿಸಿ ಇಟ್ಟುಕೊಳ್ಳಲು ದೆಹಲಿಯ ಹೆಸರನ್ನು ಇಂದ್ರಪ್ರಸ್ಥ ಎಂದು ಬದಲಾಯಿಸಬೇಕು” ಎಂದು ವಿಎಚ್‌ಪಿ ದೆಹಲಿ ಪ್ರಾಂತ್ ಕಾರ್ಯದರ್ಶಿ ಸುರೇಂದ್ರ ಕುಮಾರ್ ಗುಪ್ತಾ ಪತ್ರದಲ್ಲಿ ತಿಳಿಸಿದ್ದಾರೆ.

“ಹೆಸರುಗಳು ಕೇವಲ ಬದಲಾವಣೆಗಳಲ್ಲ. ಅವು ರಾಷ್ಟ್ರದ ಪ್ರಜ್ಞೆಯ ಪ್ರತಿಬಿಂಬವಾಗಿದೆ. ನಾವು ದೆಹಲಿ ಎಂದು ಹೇಳಿದಾಗ, ನಾವು 2,000 ವರ್ಷಗಳ ಅವಧಿಯನ್ನು ಮಾತ್ರ ನೋಡುತ್ತೇವೆ. ಆದರೆ ನಾವು ಇಂದ್ರಪ್ರಸ್ಥ ಎಂದು ಹೇಳಿದಾಗ, ನಾವು 5,000 ವರ್ಷಗಳಷ್ಟು ವಿಸ್ತಾರವಾದ ಅದ್ಭುತ ಇತಿಹಾಸದೊಂದಿಗೆ ಸಂಪರ್ಕ ಹೊಂದುತ್ತೇವೆ” ಎಂದು ಹೇಳಿದರು.

ಹಾಗೆಯೇ “ದೆಹಲಿಯ ಪಾರಂಪರಿಕ ಕೋಟೆಗಳು, ದೇವಾಲಯಗಳು ಮತ್ತು ಹಿಂದೂ ರಾಜರ ಸ್ಮಾರಕಗಳು ಇರಬೇಕು. ಮುಸ್ಲಿಂ ಆಕ್ರಮಣಕಾರರ ಸ್ಮಾರಕಗಳು ಇರುವಲ್ಲೆಲ್ಲಾ, ಪಾಂಡವರ ಕಾಲದ ಹಿಂದೂ ವೀರರು, ಋಷಿಗಳು ಮತ್ತು ಸ್ಥಳಗಳನ್ನು ಸಹ ಪರಿಚಯಿಸಬೇಕು. ಅವುಗಳ ಬಳಿ ಸ್ಮಾರಕಗಳನ್ನು ನಿರ್ಮಿಸಬೇಕು” ಎಂದು ವಿಎಚ್‌ಪಿ ಕಾರ್ಯಕಾರಿಣಿ ಒತ್ತಾಯಿಸಿದ್ದಾರೆ.

ಸ್ಥಳದ ಹೆಸರು ಬದಲಾಯಿಸಬೇಕು ಎಂಬ ಆಗ್ರಹವು ಜನರ ಗಮನವನ್ನು ನೈಜ ವಿಚಾರಗಳಿಂದ ಬೇರೆಡೆ ಸೆಳೆಯುವ ಯತ್ನವಾಗಿದೆ. ಹಾಗೆಯೇ ಈ ರೀತಿ ಜನಪ್ರಿಯ ಹೆಸರುಗಳನ್ನು ಬದಲಾಯಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಪಕ್ಷಗಳು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...