ಆಸ್ಪತ್ರೆಯ ‘ಪರಿಶೀಲನೆ’ ನಡೆಸಿದ ಜಾರ್ಖಂಡ್ ಸಚಿವರ ಮಗ: ವಿವಾದಕ್ಕೀಡಾದ ವಿಡಿಯೋ

Date:

ಜಾರ್ಖಂಡ್ ಆರೋಗ್ಯ ಸಚಿವ ಇರ್ಫಾನ್ ಅನ್ಸಾರಿ ಅವರ 19 ವರ್ಷದ ಮಗ ಕ್ರಿಶ್ ಅನ್ಸಾರಿ ರಾಂಚಿಯ ಆಸ್ಪತ್ರೆಯಲ್ಲಿ ‘ಪರಿಶೀಲನೆ’ ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ವಿವಾದಕ್ಕೀಡಾಗಿದೆ. ವಿಡಿಯೋದಲ್ಲಿ ಸಚಿವರ ಮಗ ಆಸ್ಪತ್ರೆಯನ್ನು ಪರಿಶೀಲಿಸುತ್ತಿರುವುದು, ರೋಗಿಗಳೊಂದಿಗೆ ಮಾತನಾಡುತ್ತಿರುವುದು, ಅವರಿಗೆ ಯಾವುದೇ ತೊಂದರೆಯಿದೆಯೇ ಎಂದು ಕೇಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಣ್ಣ ವಯಸ್ಸಿನ ಹುಡುಗ ಆಸ್ಪತ್ರೆಯಲ್ಲಿ ‘ಪರಿಶೀಲನೆ’ ನಡೆಸಲು ಮತ್ತು ಭೇಟಿ ನೀಡಲು ಯಾವ ಹಕ್ಕು ಮತ್ತು ಅಧಿಕಾರವನ್ನು ಹೊಂದಿದ್ದಾರೆ ಎಂದು ಬಿಜೆಪಿ ಪ್ರಶ್ನಿಸಿದೆ. ಆದರೆ ಸಚಿವರು ತಮ್ಮ ಮಗನ ಕಾರ್ಯವನ್ನು ಸಮರ್ಥಿಸಿಕೊಂಡಿದ್ದಾರೆ. “ಇದು ದಯೆಯ ಕಾರ್ಯ” ಎಂದಿದ್ದಾರೆ. ಬಿಜೆಪಿ ಮಾತ್ರ ಸಚಿವರ ಪುತ್ರ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಚಿವರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್‌ಸ್ಟಾಗ್ರಾಂನ ಈ ವಿಡಿಯೋದಲ್ಲಿ 19 ವರ್ಷದ ಕ್ರಿಶ್ ಅನ್ಸಾರಿ ತನ್ನ ಅಂಗರಕ್ಷಕ ಮತ್ತು ಸ್ನೇಹಿತರೊಂದಿಗೆ ಆಸ್ಪತ್ರೆ ಆವರಣದಲ್ಲಿ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಹಾಗೆಯೇ ಆಸ್ಪತ್ರೆಗೆ ದಾಖಲಾದ ಕೆಲವು ರೋಗಿಗಳೊಂದಿಗೆ ಮಾತನಾಡುವುದು, ಏನಾದರು ಸಮಸ್ಯೆ ಇದೆಯೇ ಎಂದು ಕೇಳುವುದು ಕಂಡುಬಂದಿದೆ.

ಕ್ರಿಶ್ ಅನ್ಸಾರಿ ಸ್ನೇಹಿತರು, “ಏನಾದರು ಸಮಸ್ಯೆಯಿದ್ದರೆ ಹೇಳಿ. ಸಚಿವರ ಹಿರಿಯ ಮಗ ಬಂದಿದ್ದಾರೆ” ಎಂದು ಹೇಳುತ್ತಿರುವುದೂ ವಿಡಿಯೋದಲ್ಲಿ ಕಾಣಬಹುದು. ಬಿಜೆಪಿ ಪ್ರತಿಕ್ರಿಯೆ ಬಳಿಕ ಅನ್ಸಾರಿ ಸಾಮಾಜಿಕ ಜಾಲತಾಣದಿಂದ ವಿಡಿಯೋವನ್ನು ತೆಗೆಯಲಾಗಿದೆ. ಆದರೆ ಸಚಿವರು ತಮ್ಮ ಮಗನನ್ನು ಸಮರ್ಥಿಸಿಕೊಂಡಿದ್ದಾರೆ. “ನನ್ನ ಮಗ ಕೇವಲ ಸಹಾಯ ಮಾಡುವ ಪ್ರಯತ್ನ ಮಾಡುತ್ತಿದ್ದಾನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದರು.

“ಬಿಜೆಪಿಯವರೇ ಸ್ವಲ್ಪ ಸಂಯಮವಿರಲಿ, ಸಕಾರಾತ್ಮಕ ಚಿಂತನೆಯಿರಲಿ. ನಮ್ಮೊಂದಿಗೆ ಜಗಳವಾಡಬೇಕೆಂದಿದ್ದರೆ ಜಗಳವಾಡಿ. ಕುಟುಂಬ ಅಥವಾ ಮಕ್ಕಳನ್ನು ಎಳೆದುತರಬೇಡಿ. ನಾನು ನನ್ನ ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ನೀಡಿದ್ದೇನೆ. ಅದು ನನ್ನ ಮಗನಾಗಿರಲಿ ಅಥವಾ ನನ್ನ ಕೆಲಸಗಾರನಾಗಿರಲಿ. ಅವರು ಮಾನವೀಯತೆಗೆ ಸಹಾಯ ಮಾಡುತ್ತಾರೆ. ಅವರು ಜನರಿಗೆ ಚಿಕಿತ್ಸೆ ಲಭಿಸುತ್ತಿದೆಯೇ ಎಂದು ನೋಡುತ್ತಾರೆ, ಅವರ ಜೀವಗಳನ್ನು ಉಳಿಸುತ್ತಾರೆ” ಎಂದು ಹೇಳಿದ್ದಾರೆ.

ತಮ್ಮ ಮಗನನ್ನು “ಪ್ರಸ್ತುತ ರಜೆಯಲ್ಲಿರುವ ವಿದ್ಯಾವಂತ ಮತ್ತು ಸೂಕ್ಷ್ಮ ಯುವ ವಿದ್ಯಾರ್ಥಿ” ಎಂದು ಕರೆದಿರುವ ಸಚಿವರು, “ಅಪ್ಪಾ, ಜನರಿಗೆ ಸಹಾಯ ಮಾಡುವುದು ಅಪರಾಧವೇ? ಎಂದು ಕ್ರಿಶ್ ನನ್ನನ್ನು ಕೇಳುತ್ತಲೇ ಇರುತ್ತಾನೆ. ಈ ಪ್ರಶ್ನೆ ನನ್ನನ್ನು ಒಳಗಿನಿಂದ ಕುಗ್ಗಿಸುತ್ತದೆ. ನನ್ನ ಮಗ ಯಾವುದೇ ಅಪರಾಧ ಮಾಡಿಲ್ಲ, ಅಥವಾ ದುರಹಂಕಾರ ಅಥವಾ ಅಧಿಕಾರದಿಂದ ವರ್ತಿಸಿಲ್ಲ. ಅವನು ಯಾರನ್ನು ಸಂಕಷ್ಟದಲ್ಲಿ ನೋಡಿದ್ದಾನೋ ಅವರಿಗೆ ಸಹಾಯ ಮಾಡಲು ಪ್ರಯತ್ನಿಸಿದ್ದಾನೆ” ಎಂದು ಸಚಿವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...