ಅಯೋಧ್ಯೆ | ಪೌರ ಕಾರ್ಮಿಕರು ದೀಪಗಳನ್ನು ಗುಡಿಸುತ್ತಿರುವ ವಿಡಿಯೋ ವೈರಲ್: ಎಸ್‌ಪಿ ನಾಯಕರಿಂದ ಖಂಡನೆ

Date:

ಅಯೋಧ್ಯೆಯಲ್ಲಿ ದೀಪಾವಳಿ ಹಿನ್ನೆಲೆ ದೀಪೋತ್ಸವ ಆಚರಣೆಯ ಬಳಿಕ ಪುರಸಭೆಯ ಪೌರ ಕಾರ್ಮಿಕರು ದೀಪಗಳನ್ನು ಗುಡಿಸಿ ನಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ರೀತಿ ದೀಪಗಳನ್ನು ಕಸದಂತೆ ಗುಡಿಸಿ ನಂದಿಸಿದಿರುವುದನ್ನು ಸಮಾಜವಾದಿ ಪಕ್ಷ(ಎಸ್‌ಪಿ) ನಾಯಕರು ಖಂಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಯೋಧ್ಯೆ ಪುರಸಭೆಯ ಪೌರ ಕಾರ್ಮಿಕರು ದೀಪೋತ್ಸವ ಆಚರಣೆಯ ನಂತರ ಪೊರಕೆಗಳಿಂದ ಉರಿಯುತ್ತಿರುವ ದೀಪಗಳನ್ನು ತಳ್ಳಿ ನಂದಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿದ್ದೀರಾ? ಪ್ರಧಾನಿಯಾಗಿ ನರೇಂದ್ರ ಮೋದಿ ಒಂಬತ್ತು ವರ್ಷದಲ್ಲಿ ಸಾಧಿಸಿದ್ದೇನು? ಭಾಗ-2

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಎಸ್‌ಪಿ ನಾಯಕ, ಉತ್ತರ ಪ್ರದೇಶದ ಮಾಜಿ ಸಚಿವ ಜೈ ಶಂಕರ್ ಪಾಂಡೆ, “ಪುರಸಭೆಯ ನೈರ್ಮಲ್ಯ ಕಾರ್ಮಿಕರ ಕ್ರಮವು ಜನರ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ” ಎಂದು ಹೇಳಿದ್ದಾರೆ.

“ರಾಮ ವನವಾಸದಿಂದ ಹಿಂದಿರುಗಿದರು ಎಂಬ ಭಕ್ತಿ ಮತ್ತು ನಂಬಿಕೆಯಿಂದ ಜನರು ಸರಯು ನದಿಯ ದಡದಲ್ಲಿ ಲಕ್ಷಾಂತರ ದೀಪಗಳನ್ನು ಬೆಳಗಿಸಿದರು. ಆದರೆ ಪೊರಕೆಗಳಿಂದ ಉರಿಯುತ್ತಿರುವ ದೀಪಗಳನ್ನು ನಂದಿಸಲಾಗಿದೆ. ದೀಪ ಬೆಳಗಿಸಿದ ಕೆಲವೇ ಕ್ಷಣಗಳಲ್ಲಿ ಅಗೌರವದಿಂದ ಅವುಗಳನ್ನು ತೆಗೆದುಹಾಕುವುದು ಖಂಡಿತವಾಗಿಯೂ ಹಿಂದೂ ಧರ್ಮದ ಮೇಲಿನ ದಾಳಿ” ಎಂದಿದ್ದಾರೆ.

ಇನ್ನು ಸ್ಥಳೀಯ ಎಸ್‌ಪಿ ನಾಯಕರು ಕೂಡಾ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಈ ಕ್ರಮವನ್ನು ಖಂಡಿಸಿದ್ದಾರೆ.

ಈ ವಿವಾದದ ಬಗ್ಗೆ ಅಯೋಧ್ಯೆ ಪುರಸಭೆ ಆಯುಕ್ತ ಜಯೇಂದ್ರ ಕುಮಾರ್ ಮಾತನಾಡಿ, “ಕೆಲವು ದೀಪಗಳು ಬಹುಶಃ ಉರಿಯುತ್ತಿದ್ದವು. ಆದರೆ ಪೌರ ಕಾರ್ಮಿಕರು ಹೆಚ್ಚಿನ ದೀಪಗಳು ಆರಿಹೋಗಿದ್ದವು” ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ದೀಪೋತ್ಸವ ಆಚರಣೆಯು ಭಾನುವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಮ್ಮುಖದಲ್ಲಿ ನಡೆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...