ವಿಧಾನ ಪರಿಷತ್ | ಚುನಾವಣಾ ಕಣದಿಂದ ರಘುಪತಿ ಭಟ್ ಹಿಂದೆ ಸರಿಯದಿದ್ದರೆ ಶಿಸ್ತುಕ್ರಮ: ಸುನಿಲ್ ಕುಮಾರ್

Date:

ವಿಧಾನ ಪರಿಷತ್ ಚುನಾವಣಾ ಕಣದಿಂದ ರಘುಪತಿ ಭಟ್ ಅವರು 24 ಗಂಟೆಯೊಳಗೆ ಹಿಂದೆ ಸರಿಯದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.

ಉಡುಪಿಯಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಘುಪತಿ ಭಟ್ ಆಗಲಿ ಯಾರೇ ಆಗಲಿ, ಪಕ್ಷಕ್ಕೆ ಮುಜುಗರ ತರುವ ಕೆಲಸವನ್ನು ಯಾರೇ ಮಾಡಿದರೂ ಪಕ್ಷ ಶಿಸ್ತುಕ್ರಮ ತೆಗೆದುಕೊಳ್ಳುತ್ತದೆ. ಅವರಿಗೆ ಇನ್ನೂ ಕಾಲಾವಕಾಶ ಇದೆ, ಕಣದಿಂದ ಕೂಡಲೇ ಹಿಂದೆ ಸರಿಯಲಿ” ಎಂದು ಆಗ್ರಹಿಸಿದರು.

“ರಘುಪತಿ ಭಟ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಏನು ಬೇಕೋ ಅದನ್ನೆಲ್ಲ ನಾವು ಪಕ್ಷದ ವತಿಯಿಂದ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಕ್ರಮದ ವಿಚಾರವಾಗಿ ಮಾತನಾಡಿ, “ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದ ಬಂಧನದ ಹುನ್ನಾರ ನಡೆಸಿದೆ. ಜನರಿಗೆ ರಕ್ಷಣೆ ಕೊಡುವುದು ಪೊಲೀಸರ ಜವಾಬ್ದಾರಿ. ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವ ಯಾವುದೇ ಘಟನೆ ನಡೆದಿಲ್ಲ” ಎಂದರು.

“ಶಾಂತಿಯನ್ನು ಕದಡುವ ಪ್ರಯತ್ನ ಪೊಲೀಸರಿಂದ ನಡೆಯುತ್ತಿದೆ. ಈ ಬಗ್ಗೆ ಗೃಹ ಸಚಿವರಿಂದ ಸ್ಪಷ್ಟನೆ ಕೇಳುತ್ತೇವೆ. ಅಧಿವೇಶನದಲ್ಲಿ ನಿಶ್ಚಿತವಾಗಿ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ. ಒಬ್ಬ ಶಾಸಕನನ್ನು ಬೆದರಿಸುವ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಮಟ್ಟ ಹಾಕುವ ಹುನ್ನಾರ ಇದು” ಎಂದು ಆರೋಪಿಸಿದರು.

ಪ್ರಜ್ವಲ್ ಪಾಸ್‍ಪೋರ್ಟ್ ಸೀಸ್ ಮಾಡಲು ಕೇಂದ್ರ ಸರ್ಕಾರ ನಿರಾಸಕ್ತಿ ಎಂದು ಗೃಹ ಸಚಿವರು ಆರೋಪಿಸಿದ್ದಾರಲ್ಲ ಎಂದು ಪ್ರಶ್ನಿಸಿದಾಗ, “ಇಷ್ಟೆಲ್ಲಾ ಘಟನೆಗಳಾಗುವಾಗ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಈ ಬಗ್ಗೆ ರಾಜ್ಯ ಗುಪ್ತಚರ ಇಲಾಖೆ ಏನೂ ಮಾಡಿಲ್ಲ. ವಿದೇಶಕ್ಕೆ ಪರಾರಿಯಾಗುವಾಗ ಕೈಕಟ್ಟಿ ಕುಳಿತಿದ್ದು ಯಾಕೆ” ಎಂದು ಪ್ರಶ್ನಿಸಿದರು.

ನೋಟಿಸ್ ಜಾರಿ

ಜೂನ್‌ 03ರಂದು ನಡೆಯುವ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುತ್ತೀರಿ. ಇದು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದಂತಾಗಿದೆ. ಆದುದರಿಂದ ಈ ಪತ್ರ ತಲುಪಿದ ಎರಡು ದಿನದ ಒಳಗಾಗಿ ಬಿಜೆಪಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಟೀಕರಣ ನೀಡಬೇಕು ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ರಘುಪತಿ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...