ಗೃಹ ಸಚಿವರಿಂದ ವಿಧಾನಸೌಧ ಭದ್ರತೆ ಪರಿಶೀಲನೆ; ಇನ್ಮುಂದೆ ಕೈಯಿಂದ ಪಾಸ್‌ ವಿತರಣೆ ಇಲ್ಲ

Date:

ವಿಧಾನಸೌಧದ ಪ್ರವೇಶ ದ್ವಾರಗಳಲ್ಲಿ ಹೊಸದಾಗಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್, ಬ್ಯಾಗ್ ಸ್ಕ್ಯಾನರ್‌ಗಳನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಯವರು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ‌ ಬಳಿಕ ಭದ್ರತೆಯನ್ನು ಪರಿಶೀಲನೆ ನಡೆಸಿ, ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಕರಿಬಸವನಗೌಡ ಅವರಿಂದ ಮಾಹಿತಿ ಪಡೆದರು. ಮೆಟಲ್ ಡಿಟೆಕ್ಟರ್, ಬ್ಯಾಗ್ ಸ್ಕ್ಯಾನರ್‌ಗಳ ಗುಣಮಟ್ಟತೆಯ ಬಗ್ಗೆ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್‌, “ವಿಧಾನಸೌಧ ಭದ್ರತಾ ವಿಭಾಗದ ವ್ಯಾಪ್ತಿಗೆ ಬರುವ ವಿಧಾನಸೌಧದ 4 ಗೇಟ್‌, ವಿಕಾಸಸೌಧದ 3 ಗೇಟ್, ಹೈಕೋರ್ಟ್‌ನ 6 ಗೇಟ್, ರಾಜಭವನ ಪ್ರವೇಶ ದ್ವಾರಗಳಲ್ಲಿ ಹೊಸದಾಗಿ ಉನ್ನತ ಗುಣಮಟ್ಟದ ಬ್ಯಾಗ್ ಸ್ಕ್ಯಾನರ್,‌ ಮೆಟಲ್ ಡಿಟೆಕ್ಟರ್‌, ಕ್ಯೂಆರ್ ಕೋಡ್ ಯಂತ್ರ ಸೇರಿದಂತೆ ಇನ್ನಿತರ ಉಪಕರಣಗಳನ್ನು ಭದ್ರತೆಗೆ ಅಳವಡಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ಮುಂದೆ ಆನ್‌ಲೈನ್ ಮೂಲಕ ವಿಧಾನಸೌಧ‌ ಪ್ರವೇಶದ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಪಾಸ್‌ ಮತ್ತು ಗುರುತಿನ ಕಾರ್ಡ್‌ಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ಆನ್‌ಲೈನ್ ಮೂಲಕ‌ ಪಡೆದ ಕ್ಯೂಆರ್ ಕೋಡ್ ಪಾಸ್‌ಗಳನ್ನು ಪರಿಶೀಲಿಸಲಿದ್ದಾರೆ. ಗುಣಮಟ್ಟದ ಉಪಕರಣಗಳನ್ನು ಅಳವಡಿಸಿರುವುದರಿಂದ, ಯಾರಾದರು ಅನುಮಾನಸ್ಪದ ವಸ್ತುಗಳನ್ನು ತೆಗೆದುಕೊಂಡು ಬಂದರೆ ಪತ್ತೆಹಚ್ಚಲು ಸುಲಭವಾಗುತ್ತವೆ” ಎಂದರು.

“ಈ ಎಲ್ಲ ಉಪಕರಣಗಳು ಮೂರು ವರ್ಷದ ಹಿಂದೆಯೇ ಹಾಳಾಗಿದ್ದವು. ನಾವು ಈಗ ಅಳವಡಿಸಿದ್ದೇವೆ. ಸುರಕ್ಷತೆ ದೃಷ್ಟಿಯಿಂದ ಅವಶ್ಯಕತೆ ಇತ್ತು. ಇನ್ಮುಂದೆ ಕೈಯಿಂದ ಪಾಸ್‌ಗಳನ್ನು ವಿತರಿಸುವುದಿಲ್ಲ” ಎಂದು ಹೇಳಿದರು.

“ಸಾರ್ವಜನಿಕರು ಪೂರ್ವಭಾಗದ ಗೇಟ್‌ನಿಂದ ಬರಬೇಕು. ಪಶ್ಚಿಮ ದ್ವಾರದಿಂದ ಗಣ್ಯರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಧಾನಸೌಧಕ್ಕೆ ಭದ್ರತೆಯನ್ನು ಇನ್ನಷ್ಟು ಕಠಿಣ ಮಾಡಬೇಕು ಎಂದು ನಗರ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ಈಗಾಗಲೇ ಕೆಎಸ್ಐಎಸ್ಎಫ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ವಿಧಾನಸೌಧದ ಭದ್ರತೆಯಲ್ಲಿ ಮತ್ತಷ್ಟು ಮಾರ್ಪಾಡು ತರಲಾಗುವುದು” ಎಂದರು.

“ಅಧಿವೇಶನದಲ್ಲಿ ಬೇಕಾಬಿಟ್ಟಿ ಜನಗಳನ್ನು ಬಿಡುವುದಿಲ್ಲ. ಯಾರೋ ಪಾಸ್ ಪಡೆದು ಸಂಸತ್‌ ಭವನ ಪ್ರವೇಶಿಸಿ, ದಾಂಧಲೆ ಎಬ್ಬಿಸಿದ್ದರು. ಆ ರೀತಿಯ ಘಟನೆಗಳು ನಡೆಯಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ, ಸಚಿವರು, ಸಚಿವಾಲಯ, ಅಸೆಂಬ್ಲಿ ಇದೆ.‌ ಇದೆಲ್ಲವನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...