ತಮಿಳುನಾಡು ಚುನಾವಣೆ | ಭಾರೀ ಒತ್ತಡವಿತ್ತು, ವಿಜಯ್ ಮಣಿಯಲಿಲ್ಲ; ಬಿಜೆಪಿ ಜೊತೆ ಮೈತ್ರಿ ತಳ್ಳಿಹಾಕಿದ ಟಿವಿಕೆ

Date:

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶುಕ್ರವಾರ ತಳ್ಳಿಹಾಕಿದೆ. ಪಕ್ಷದ ಮುಖ್ಯಸ್ಥ ವಿಜಯ್ ಮೇಲೆ ಮೈತ್ರಿ ಮಾಡಿಕೊಳ್ಳುವಂತೆ ಭಾರೀ ಒತ್ತಡ ಹೇರಲಾಗಿತ್ತು. ಆದರೆ, ಅವರು ಒತ್ತಡಕ್ಕೆ ಮಣಿಯಲಿಲ್ಲ. ದೃಢವಾಗಿ ನಿಂತರು ಎಂದು ಟಿವಿಕೆ ಹೇಳಿದೆ.

ಬಿಜೆಪಿ ಜೊತೆಗಿನ ಮೈತ್ರಿ ಕುರಿತು ಮಾತನಾಡಿರುವ ಟಿವಿಕೆ ಪ್ರಧಾನ ಕಾರ್ಯದರ್ಶಿ ಅರುಣ್ ರಾಜ್, “ಸಿಬಿಐ ವಿಚಾರಣೆಗಳು ಮತ್ತು ಚಲನಚಿತ್ರ ಸಂಬಂಧಿತ ವಿಷಯಗಳ ಮೂಲಕ ಬಿಜೆಪಿಯಿಂದ ವಿಜಯ್ ಮೇಲೆ ಒತ್ತಡ ತೀವ್ರಗೊಂಡಿವೆ. ಈ ಎಲ್ಲ ಒತ್ತಡಗಳ ಹೊರತಾಗಿಯೂ, ಕೋಮುವಾದಿ ಶಕ್ತಿಗಳೊಂದಿಗೆ ಮೈತ್ರಿ ಇಲ್ಲವೆಂದು ವಿಜಯ್ ಸ್ಪಷ್ಟವಾಗಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಇನ್ನೇನು ಹೇಳಬೇಕು?” ಎಂದು ಹೇಳಿದ್ದಾರೆ.

“ವಿಜಯ್ ಅವರು ಮಾಮಲ್ಲಪುರಂನಲ್ಲಿ ನಡೆದ ಸಮಾವೇಶದಲ್ಲಿ ‘ಕೋಮುವಾದಿ ಶಕ್ತಿಗಳೊಂದಿಗೆ ಮೈತ್ರಿ ಇರುವುದಿಲ್ಲ’ವೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಂತಹ ನಿಲುವನ್ನು ವಿಜಯ್ ಸ್ಪಷ್ಟಪಡಿಸಿರುವಾಗ ಬಿಜೆಪಿ ವಿರುದ್ಧ ಅವರು ಮಾತನಾಡುತ್ತಿಲ್ಲ ಎಂಬ ತರ್ಕಕ್ಕೆ ಅವಕಾಶವಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲ ಸಮ್ಮೇಳನದಲ್ಲಿಯೇ, ವಿಜಯ್ ಅವರು ಬಿಜೆಪಿಯನ್ನು ಸೈದ್ಧಾಂತಿಕ ಎದುರಾಳಿ ಎಂದು ಸ್ಪಷ್ಟವಾಗಿ ಘೋಷಿಸಿದರು. ರಾಜ್ಯದಲ್ಲಿನ ಆಡಳಿತ ಪಕ್ಷ ಮತ್ತು ಕೇಂದ್ರದಲ್ಲಿನ ಆಡಳಿತ ಪಕ್ಷ ಎರಡನ್ನೂ ತಮ್ಮ ವಿರೋಧಿಗಳು ಎಂದು ಬಹಿರಂಗವಾಗಿ ಘೋಷಿಸಲು ಬಹಳ ಧೈರ್ಯ ಬೇಕು. ಹಲವು ಸಂದರ್ಭಗಳಲ್ಲಿ ಕೇಂದ್ರದ ಆಡಳಿತ ಪಕ್ಷವು ಒತ್ತಡ ಹೇರಿತು. ಆದರೆ, ನಮ್ಮ ನಾಯಕನ ನಿಲುವು ತುಂಬಾ ಸ್ಪಷ್ಟವಾಗಿದೆ” ಎಂದು ರಾಜ ಹೇಳಿದ್ದಾರೆ.

ತಮಿಳುನಾಡು ಈ ವರ್ಷ ಚುನಾವಣೆ ಎದುರಿಸಲು ಸಜ್ಜಾಗಿದೆ. ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಪ್ರಮುಖ ಸ್ಪರ್ಧೆ ಇರಲಿದೆ. ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಕಾಂಗ್ರೆಸ್, ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಹಾಗೂ ಇತರ ಪಕ್ಷಗಳು ಸೇರಿವೆ. ಎಐಎಡಿಎಂಕೆ ನೇತೃತ್ವದಲ್ಲಿ ಬಿಜೆಪಿ, ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಇತರ ಪಕ್ಷಗಳ ಎನ್‌ಡಿಎ ಸ್ಪರ್ಧೆಯಲ್ಲಿದೆ. ವಿಜಯ್ ಅವರ ಟಿವಿಕೆ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಏಕಾಂಗಿ ಸ್ಪರ್ಧೆಗೆ ನಿರ್ಧರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...