ವಿಜಯ್ ತಾತಾ ಒಬ್ಬ ವಂಚಕ, ಆತನ ವಿರುದ್ಧ ತನಿಖೆಗೆ ಎಸ್‌ಐಟಿ ರಚಿಸಲಿ: ಹೆಚ್ ಎಂ ರಮೇಶ್ ಗೌಡ ಒತ್ತಾಯ

Date:

ವಂಚಕ ವಿಜಯ್ ತಾತಾನಿಂದ ಅನೇಕರಿಗೆ ಮೋಸವಾಗಿದ್ದು, ಮೋಸ ಹೋದವರಿಗೆ ನ್ಯಾಯ ಕೊಡಿಸಲು ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕ ಹೆಚ್‌ ಎಂ ರಮೇಶ್ ಗೌಡ ಆಗ್ರಹಿಸಿದರು.

ಪಕ್ಷದ ಕಚೇರಿಯಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಕೆ ಎನ್ ತಿಪ್ಪೇಸ್ವಾಮಿ, ಟಿ.ಎ
ಶರವಣ, ಜವರಾಯಿಗೌಡ ಸೇರಿ ಪಕ್ಷದ ವಿವಿಧ ಮುಖಂಡರ ಜತೆ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, “ಅನೇಕರಿಗೆ ವಿಜಯ್ ತಾತಾ ಮೋಸ ಮಾಡಿದ್ದಾನೆ. ಆತನ ವಿರುದ್ಧ ನೂರಾರು ಪ್ರಕರಣಗಳು ದಾಖಲಾಗಿವೆ. ವಂಚನೆಯೇ ಆತನ ಪ್ರವೃತ್ತಿ ಆಗಿದ್ದು, ವಿಶೇಷ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದರು.

“ಅಲ್ಲದೆ; ರಾಜ್ಯದ ಆಂತರಿಕ ಭದ್ರತಾ ವಿಭಾಗದಿಂದ ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ. ಪೊಲೀಸ್ ಆಯುಕ್ತರಿಗೆ ನಾನು ದೂರು ನೀಡುತ್ತೇನೆ. ಈ ಬಗ್ಗೆಯೂ ತನಿಖೆ ನಡೆಯಬೇಕು” ಎಂದು ರಮೇಶ್ ಗೌಡ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸ್ ಠಾಣೆಯಲ್ಲಿ ಸ್ವತಃ ವಿಜಯ್ ತಾತಾನೇ ನನಗೆ ಹೇಳಿದ್ದಾರೆ. ಕುಮಾರಸ್ವಾಮಿ ಮತ್ತು ನಿಮ್ಮ ಮೇಲೆ ಕೇಸು ದಾಖಲಿಸಲು ನನ್ನ ಮೇಲೆ‌ ಸಿಎಂ‌‌ ಕಚೇರಿ ಹಾಗೂ ಕೆಲ ಸಚಿವರ ಒತ್ತಡ ಇದೆ ಎಂದು ಹೇಳಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಲಿ” ಎಂದರು.

“ವಿಜಯ್ ತಾತಾ ಮೇಲೆ ಕರ್ನಾಟಕದಲ್ಲಿ ಮಾತ್ರವಲ್ಲ,; ನಾಗಪುರ, ಪುಣೆ ಮುಂಬಯಿಯಲ್ಲೂ ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳು ನನ್ನ ಬಳಿ ಇವೆ. ನೂರಾರು ಎಫ್ಐಆರ್ ಗಳು ಆಗಿವೆ.
ನಾನು ಮನೆಗೆ ಹೋಗಿ ದೂರವಾಣಿ ಕರೆ ಮಾಡಿಕೊಟ್ಡಿದ್ದರೆ ಸಿಸಿ ಟಿವಿ ಇದೆಯಲ್ಲ ಅದನ್ನು ತೋರಿಸಲಿ” ಎಂದು ಸವಾಲು ಹಾಕಿದರು.

“ನಾನು ದೂರು ಕೊಟ್ಟರೆ ಎಫ್ಐಆರ್ ಆಗಲ್ಲ. ಆತ ದೂರು ಕೊಟ್ಟರೆ ಆಗುತ್ತದೆ. ಪೊಲೀಸ್ ಠಾಣೆ ಮುಂದೆ ಧರಣಿ ಕೂರುತ್ತೇನೆ. ನಾಳೆಯಿಂದ ಎಲ್ಲಾ ಸಚಿವರ ಮೇಲೆ ದೂರು ಕೊಟ್ಟರೆ ಎಫ್ಐಆರ್ ಸಚಿವರುಗಳ ಹಾಕುತ್ತಾರಾ? ಧರ್ಮಸ್ಥಳದ ಮಂಜುನಾಥ ಸ್ವಾಮಿ, ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ವಿಜಯ್ ತಾತಾ ಬಳಿ ಯಾವುದೇ ಹಣ ಕೇಳಿಲ್ಲ” ಎಂದು ಹೇಳಿದರು.

ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ

ವಿಜಯ್ ತಾತಾ ವಿರುದ್ಧ ನಾನು ದೂರು ಕೊಟ್ಟಿದ್ದರೂ ಎಫ್ಐಆರ್ ಮಾಡದಿರುವ ಪೊಲೀಸರ ಕ್ರಮ ಖಂಡಿಸಿ ರಮೇಶ್ ಗೌಡ ಮತ್ತಿತರೆ ಮುಖಂಡರು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ ನಡೆಸಿದರು. ಪೊಲೀಸ್ ಇಲಾಖೆ ಸಹಜ ನ್ಯಾಯ ಪಾಲನೆ ಮಾಡುತ್ತಿಲ್ಲ. ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದೆ ಎಂದು ಅವರು ಆರೋಪ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...