ವಿಜಯಪುರ | ಕಾಂಗ್ರೆಸ್‌ನಿಂದ ಲೋಕಸಭಾ ಟಿಕೆಟ್‌ ಪಡೆದ ಬಲಗೈ ಸಮುದಾಯದ ಮೊದಲ ಅಭ್ಯರ್ಥಿ ಪ್ರೊ. ರಾಜು

Date:

ದಲಿತ ಸಂಘರ್ಷ ಸಮಿತಿ ಮೂಲಕ ಹೋರಾಟ, ಉಪನ್ಯಾಸಕ ವೃತ್ತಿ ಹೀಗೆ ಹಲವಾರು ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರೊ. ರಾಜು ಆಲಗೂರ ಈಗ ಲೋಕಸಭೆ ಚುನಾವಣೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಮೊದಲ ಬಾರಿಗೆ ಬಲಗೈ ಸಮುದಾಯಕ್ಕೆ ಅವಕಾಶ ನೀಡಿದ್ದು, ಪ್ರೊ. ರಾಜು ಆಲಗೂರ ಅವರನ್ನು ಕಣಕ್ಕಿಳಿಸಿದೆ.

ಈ ಕ್ಷೇತ್ರವು 2009ರಲ್ಲಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟ ನಂತರದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಹಿರಿಯ ಸಂಸದ ರಮೇಶ ಜಿಗಜಿಣಗಿ ಸುಲಭದ ಗೆಲುವು ಸಾಧಿಸುತ್ತ ಬಂದಿದ್ದು, ಈ ಬಾರಿ ಪ್ರಬಲ ಪೈಪೋಟಿ ಎದುರಿಸುತ್ತಿದ್ದಾರೆ.

ಬಳ್ಳೊಳ್ಳಿ ಮತ್ತು ನಾಗಠಾಣ ವಿಧಾನಸಭಾ ಕ್ಷೇತ್ರದಿಂದ ಕ್ರಮವಾಗಿ 1999 ಮತ್ತು 2018 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಪ್ರೊ. ರಾಜು ಆಲಗೂರ ಜನಾನುರಾಗಿಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ತಮ್ಮ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಸಂಘರ್ಷ ಸಮಿತಿ ಮೂಲಕ ಹೋರಾಟ, ಉಪನ್ಯಾಸಕ ವೃತ್ತಿ ಹೀಗೆ ಹಲವಾರು ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರೊ. ರಾಜು ಆಲಗೂರ ಈಗ ಲೋಕಸಭೆ ಚುನಾವಣೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ

ದಲಿತ ಸಂಘರ್ಷ ಸಮಿತಿಯ “ಯುವ ಹುಲಿ” ಎಂದೇ ಹೆಸರಾಗಿದ್ದ ರಾಜು ದಲಿತ ಹೋರಾಟದ ಮುಂಚೂಣಿ ನಾಯಕರಾಗಿದ್ದರು.

1985ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಬಿಎಲ್​ಡಿಇ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ ರಾಜು ಅಲಗೂರ ಅವರು, 1987ರಲ್ಲಿ ವಿಜಾಪುರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ದಲಿತ ಸಂಘರ್ಷ ಸಮಿತಿಯ ಉತ್ತರ ಕರ್ನಾಟಕ ಸಮಾವೇಶದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ, ಆಗಿನ ಜಿಲ್ಲಾ ಸಂಚಾಲಕ ಅಭಿಷೇಕ್‌ ಚಕ್ರವರ್ತಿಯವರ ಜೊತೆಗೂಡಿ ಸಮಾವೇಶದ ಅಭೂತಪೂರ್ವ ಯಶಸ್ಸಿಗೆ ಕಾರಣರಾಗಿದ್ದರು. 1989ರಲ್ಲಿ ಅವಿಭಜಿತ ಜಿಲ್ಲೆಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾಗಿ ಸಮರ್ಥವಾಗಿ ಸಂಘಟನೆಯನ್ನು ಮುನ್ನಡೆಸಿದರು.

ಪ್ರೊ. ರಾಜು ಅವರ ಸಂಘಟನಾ ಸಾಮರ್ಥ್ಯವನ್ನು ಗುರುತಿಸಿದ ಕಾಂಗ್ರೆಸ್ ಪಕ್ಷವು ಅವರಿಗೆ 1999ರ ವಿಧಾನಸಭೆ ಚುನಾವಣೆಯಲ್ಲಿ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿತು. ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡಿ ಅವರ ಗೆಲುವಿಗೆ ಕಾರಣರಾದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ಸಾಬೂನು ಮಾರ್ಜಕ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ ರಾಜು ಆಲಗೂರ ಅವರು ರಾಜಕೀಯ ಅನುಭವವನ್ನು ಗಳಿಸಿದ್ದಾರೆ.

ತಮ್ಮ ಅಧಿರಾವಧಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಕ್ಷೇತ್ರಕ್ಕೆ ತಂದುಕೊಟ್ಟ ಪ್ರೊ. ರಾಜು ಆಲಗೂರ ಅವರು ಸಮಾಜದ ಎಲ್ಲ‌ ಜನವರ್ಗಗಳ ಪ್ರೀತಿಗೆ ಪಾತ್ರರಾಗಿದ್ದು, ಎಲ್ಲ ಸಮುದಾಯಗಳ ಜೊತೆಯಲ್ಲಿ ಸೌಹಾರ್ದ ಸಂಬಂಧ ಹೊಂದಿ, ಜನಾನುರಾಗಿ ನಾಯಕರಾಗಿ ಹೊರಹೊಮ್ಮಿದ್ದಾರೆ.

ಮೀಸಲು ಕ್ಷೇತ್ರವಾದ ನಂತರ 2009 ಮತ್ತು 2014ರ ಲೋಕಸಭಾ ಚುನಾವಣೆಗಳಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಬಂಜಾರಾ ಸಮಾಜಕ್ಕೆ ಮಣೆ ಹಾಕಿದ ಕಾಂಗ್ರೆಸ್ ಪಕ್ಷವು 2019ರಲ್ಲಿ ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಡಿತ್ತು.

ಜಿಲ್ಲೆಯಲ್ಲಿ ಅತಿ ಹೆಚ್ಚು ಚಲವಾದಿ ಸಮುದಾಯದ ಮತದಾರರನ್ನು ಹೊಂದಿರುವ ಈ ಕ್ಷೇತ್ರದಲ್ಲಿ ತಮ್ಮ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಚಲವಾದಿ ಮುಖಂಡರು ಮುಂಚಿನಿಂದಲೂ ಕಾಂಗ್ರೆಸ್ ಪಕ್ಷದ ವರಿಷ್ಠರ ಮೇಲೆ ಒತ್ತಡ ಹಾಕುತ್ತಲೇ ಬಂದಿದ್ದರು. ಅದು ಈ ಚುನಾವಣೆಯಲ್ಲಿ ಕೈಗೂಡಿದೆ.

ಕಳೆದ 25 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ವಿಜಯಪುರ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಪಕ್ಷವು ಈ ಸಲ ಪ್ರೊ. ರಾಜು ಆಲಗೂರ ಮೂಲಕ ಈ ಕೋಟೆಯನ್ನು ಭೇದಿಸಲು ಮುಂದಾಗಿದೆ.

ಅನಿಲ ಹೊಸಮನಿ 300x372 1
ಅನಿಲ ಹೊಸಮನಿ, ವಿಜಯಪುರ
+ posts

ಹಿರಿಯ ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಅನಿಲ ಹೊಸಮನಿ, ವಿಜಯಪುರ
ಅನಿಲ ಹೊಸಮನಿ, ವಿಜಯಪುರ
ಹಿರಿಯ ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...