‘ವಿಜಯೇಂದ್ರ ಕಲೆಕ್ಷನ್ ಮಾಸ್ಟರ್’

Date:

“ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬರೇ ಕಲೆಕ್ಷನ್ ಮಾಸ್ಟರ್. ಅವನು ರಾಜ್ಯಾಧ್ಯಕ್ಷನಾಗುವ ಮೊದಲು ಪಕ್ಷಕ್ಕಾಗಿ ಏನನ್ನೂ ಮಾಡಿಲ್ಲ. ಯಾವ ಸುಡುಗಾಡೂ ಮಾಡಿಲ್ಲ. ತನ್ನ ಅಪ್ಪ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ ಮಹಾನ್ ನಾಯಕ ವಿಜಯೇಂದ್ರ” ಎಂದು ವಿಜಯೇಂದ್ರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, “ರಮೇಶ್ ಜಾರಕಿಹೊಳಿಗೆ ನಾಲಿಗೆ ಬಿಗಿಹಿಡಿದು ಮಾತನಾಡುವಂತೆ ವಿಜಯೇಂದ್ರ ಹೇಳಿದ್ದಾರೆ. ಇದೇ ರಮೇಶ್ ಜಾರಕಿಹೊಳಿ 17 ಶಾಸಕರನ್ನು ಬಿಜೆಪಿಗೆ ಕರೆದುಕೊಂಡು ಬರದಿದ್ದರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ರಮೇಶ್ ಜಾರಕಿಹೊಳಿ ಕಾರಣ. ವಿಜಯೇಂದ್ರ ಇಷ್ಟೆಲ್ಲ ದುಡ್ಡು ಮಾಡಲು ಕೂಡ ರಮೇಶ್ ಜಾರಕಿಹೊಳಿ ಕಾರಣ” ಎಂದು ಹೇಳಿದ್ದಾರೆ.

“ರಮೇಶ್ ಜಾರಕಿಹೊಳಿ ಚೆನ್ನಾಗಿ ಕೆಲಸ ಮಾಡತ್ತಿದ್ದರು. ಅವರನ್ನು ಬಲಿಕೊಟ್ಟವರು ಯಾರು? ಇದರಲ್ಲಿ ವಿಜಯೇಂದ್ರ ಪಾತ್ರವೇನು ಅಂತ ಚೆನ್ನಾಗಿ ಗೊತ್ತಿದೆ. ಪಕ್ಷ ಕಟ್ಟಲು ಯಡಿಯೂರಪ್ಪ ಒಬ್ಬರೇ ಸೈಕಲ್ ತಿಳಿದಿಲ್ಲ. ನಾವೂ ಸೈಕಲ್ ಹೊಡೆದಿದ್ದೇವೆ” ಎಂದು ಯತ್ನಾಳ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...