ಮುಂದಾಲೋಚನೆಯಿಂದ ವಿಜಯೇಂದ್ರ ಪದಾಧಿಕಾರಿಗಳ ಪಟ್ಟಿ ರಚಿಸಿದ್ದಾರೆ: ಯಡಿಯೂರಪ್ಪ

Date:

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಮುಂದಾಲೋಚನೆಯಿಂದಲೇ ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಸಿದ್ದಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ಪುತ್ರನ ಕಾರ್ಯ ವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪ್ರಧಾನಿ ಮೋದಿ, ಅಮಿತ್ ಷಾ ಹಾಗೂ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಜೊತೆ ಮಾತನಾಡಿ ಚರ್ಚೆ ನಡೆಸಿಯೇ ಪಟ್ಟಿ ಬಿಡುಗಡೆ ಮಾಡಿದ್ದಾರೆ. ನಿರೀಕ್ಷೆಯಂತೆ ಹೊಸಬರಿಗೆ ಹೆಚ್ಚು ಅವಕಾಶ ನೀಡಲಾಗಿದೆ. ಅವರೆಲ್ಲರ ಶಕ್ತಿ ಉಪಯೋಗ ಮಾಡಿಕೊಂಡು ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಮುಂದಿನ ನಮ್ಮ ಗುರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಾಗಿದೆ ಆದ್ದರಿಂದ ಎಲ್ಲರನ್ನೂ ಭೇಟಿಯಾಗಿ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದೇನೆ” ಎಂದರು.

“ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಯುವಕರಲ್ಲಿ ಉತ್ಸಾಹ ಹೆಚ್ಚಾಗಿದೆ. ಅಲ್ಲದೇ ರಾಜ್ಯದಲ್ಲಿ ವಾತಾವರಣ ನಿರೀಕ್ಷೆ ಮೀರಿ ನಮ್ಮ ಪರವಾಗಿದೆ.ಯುವಕರ ಉತ್ಸಾಹ ಲೋಕಸಭಾ ಚುನಾವಣೆಗೆ ಪ್ಲಸ್ ಆಗಲಿದೆ. ಪ್ರಧಾನಿ ಮೋದಿ ಆಡಳಿತ ಜಗತ್ತೇ ಮೆಚ್ಚಿದೆ. ಆದ್ದರಿಂದ ಈ ಬಾರಿ ನಮ್ಮ ಗೆಲುವು ನಿಶ್ಚಿತ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಜಾಬ್ ಆದೇಶದ ಬಗ್ಗೆ ಮಾತನಾಡಿದ ಯಡಿಯೂರಪ್ಪ, “ನಮ್ಮೆಲ್ಲರ ಒತ್ತಾಯಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆ ಹಿಂಪಡೆದಿದ್ದಾರೆ. ಈಗಲಾದರೂ ಅವರಿಗೆ ಸದ್ಭುದ್ದಿ ಬರಲಿ. ನಾವು ಅಲ್ಪಸಂಖ್ಯಾತರ ವಿರೋಧಿ ಅಲ್ಲ. ಜಾತಿ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ನಿಲ್ಲಿಸಬೇಕು. ಇದರಿಂದ ಯಾವ ಲಾಭ ಆಗುವುದಿಲ್ಲ” ಎಂದರು.

“ವೀರಶೈವ ಲಿಂಗಾಯತ ಸಮುದಾಯದ ಜಾತಿಗಣತಿ ಸರಿಯಾಗಿ ನಡೆದಿಲ್ಲ. ಸಮೀಕ್ಷೆ ಸರಿಯಾಗಿಲ್ಲ. ಆದ್ದರಿಂದ ಮತ್ತೊಮ್ಮೆ ವಾಸ್ತವಾಂಶವುಳ್ಳ ಸಮೀಕ್ಷೆ ನಡೆಸಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...