ಬಿಜೆಪಿ ಮುಖಂಡನ ಕೊಲೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು: ಮತ್ತೆ ಬಂಧನ ಭೀತಿ

Date:

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೀಗ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರನ್ನು ಧಾರವಾಡದಲ್ಲಿ ಹತ್ಯೆ ಮಾಡಲಾಗಿತ್ತು. ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ಹತ್ಯೆಯ ಹಿಂದೆ ಆಗ ಸಚಿವರಾಗಿದ್ದ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಆರೋಪಪಟ್ಟಿ ಸಲ್ಲಿಸಿತ್ತು. 2020ರ ನೆವೆಂಬರ್‌ನಲ್ಲಿ ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ 9 ತಿಂಗಳು ಸೆರೆವಾಸ ಅನುಭವಿಸಿದ್ದ ಕುಲಕರ್ಣಿ ಅವರಿಗೆ 2021ರ ಆಗಸ್ಟ್‌ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಧಾರವಾಡ ಜಿಲ್ಲಾ ವ್ಯಾಪ್ತಿಯನ್ನು ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು.

ಇದೀಗ, ವಿನಯ್ ಕುಲಕರ್ಣಿ ಅವರು ಜೈಲಿನಿಂದ ಹೊರಗಿದ್ದರೆ, ಸಾಕ್ಷಿಗಳ ಮೇಲೆ‌ ಪ್ರಭಾವ ಬೀರುವ, ಬೆದರಿಕೆ, ಒತ್ತಡ ಹಾಕುವ ಸಾಧ್ಯತೆಗಳಿವೆ. ಹೀಗಾಗಿ, ಅವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೋರಿ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಅಲ್ಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಸಿಬಿಐ ಅರ್ಜಿಯನ್ನು ಪುರಸ್ಕರಿಸಿದೆ‌. ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿದೆ. ಹೀಗಾಗಿ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

ವಿನಯ್ ಕುಲಕರ್ಣಿ ಅವರು ಧಾರವಾಡ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಧಾರವಾಡ ಜಿಲ್ಲೆಗೆ ಪ್ರವೇಅಸ ನಿರ್ಬಂಧಿಸಿದ್ದರ ಹೊರತಾಗಿಯೂ 2023ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರ ಪರಿವಾಗಿ ಅವರ ಪತ್ನಿ ಪ್ರಚಾರ ನಡೆಸಿದ್ದರು. ಆ ವೇಳೆ, ಧಾರವಾಡ ಪ್ರವೇಶ ಕೋರಿ ಕುಲಕರ್ಣಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರವೇಶ ನೀಡಲು ಹೈಕೋರ್ಟ್ ನಿರಾಕರಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...