ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Date:

ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. “ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ವಾಗಬೇಕು” ಎಂದರು.

“ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕು. ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ. ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರ ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ ವಿಶ್ವಕರ್ಮ ಸಮಾಜದಲ್ಲಿ ಹುಟ್ಟಿದವರು. ಅವರು ಬೆಳೆದ ಎತ್ತರ ಜನರಿಗೆ ತಿಳಿಯಬಾರದೆಂದು ಇತಿಹಾಸ ತಿರುಚುವ ಪ್ರಯತ್ನ ಮಾಡಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳು ಈ ಕೆಲಸ ಮಾಡಿದ್ದರೂ ಮಾಡಿರಬಹುದು. ಅಮರ ಶಿಲ್ಪಿ ಜಕಣಾಚಾರಿ ಇತಿಹಾಸ ನಮ್ಮ ಮುಂದಿದೆ” ಎಂದು ಸಿದ್ದರಾಮಯ್ಯ ಹೇಳಿದರು.

ಜಾತ್ಯಾತೀತ ಸಮಸಮಾಜ ನಿರ್ಮಾಣ

“ನಮ್ಮ ಸಂವಿಧಾನ ಜಾತಿ ರಹಿತ, ವರ್ಗರಹಿತ, ಜಾತ್ಯಾತೀತ ಸಮಸಮಾಜ ನಿರ್ಮಾಣ ಮಾಡಬೇಕೆಂದು ಹೇಳಿದೆ. ಸ್ವಾರ್ಥಕ್ಕಾಗಿ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಶತಶತಮಾನಗಳಿಂದ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಸಮಾನತೆಗೆ ಬಲಿಯಾಗಿರುವ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರು ಮುಖ್ಯವಾಹಿನಿಗೆ ಸೇರುವಂತಾಗಬೇಕು. ಎಲ್ಲರಿಗೂ ಅವಕಾಶ ಒದಗಿಸುವುದು ಸರ್ಕಾರದ ಜವಾಬ್ದಾರಿ ಹಾಗೂ ಕರ್ತವ್ಯ” ಎಂದರು.

“ಚಲನಶೀಲತೆ ಇಲ್ಲದ ಸಮಾಜದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿಯೇ ಸಂವಿಧಾನದ ಪೀಠಿಕೆವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆಯಬೇಕು. ಸಂವಿಧಾನದ ವಿರೋಧಿಗಳು ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಸಂವಿಧಾನದ ಆಶಯಗಳನ್ನು ಈಡೇರಿಸಬೇಕು. ಇದಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು” ಎಂದರು.

ಇದೇ ಸಂದರ್ಭದಲ್ಲಿ ನಾಲ್ಕು ಶಿಲ್ಪಿಗಳಿಗೆ ಜಕಣಾಚಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹಾಸನದ ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಡಾ. ಎನ್. ಮಂಜುಳಾ, ಡಾ. ಧರಣಿದೇವಿ ಮಾಲಗತ್ತಿ ಸೇರಿ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...