ಕಣದಿಂದ ಹಿಂದೆ ಸರಿದ ಇಂದೋರ್‌ ಕಾಂಗ್ರೆಸ್ ಅಭ್ಯರ್ಥಿ; ನೋಟಾದತ್ತ ಜನರ ಚಿತ್ತ!

Date:

ಇಂದೋರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಜಿ ಲೋಕಸಭಾ ಸ್ಪೀಕರ್ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸುಮಿತ್ರಾ ಮಹಾಜನ್ ಅಚ್ಚರಿ ವ್ಯಕ್ತಪಡಿಸಿದ್ದು, “ನನಗೆ ಇಂದೋರ್‌ನ ಹಲವಾರು ಜನರು ಕರೆ ಮಾಡಿ ನೋಟಾಕ್ಕೆ ಮತ ಹಾಕುವುದಾಗಿ ತಿಳಿಸಿದ್ದಾರೆ” ಎಂದಿದ್ದಾರೆ.

1989 ಮತ್ತು 2014 ರ ನಡುವೆ ಸತತ ಎಂಟು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಇಂದೋರ್‌ನಲ್ಲಿ ಗೆಲುವು ಸಾಧಿಸಿರುವ 81 ವರ್ಷದ ಸುಮಿತ್ರಾ ಮಹಾಜನ್ ಅವರಿಗೆ ಈಗ ಇಂದೋರ್‌ನ ಪ್ರಮುಖ ವ್ಯಕ್ತಿಗಳು ಕರೆ ಮಾಡಿ ಮೇ 13ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಬದಲಾಗಿ ನೋಟಾಕ್ಕೆ ಮತ ಹಾಕುವುದಾಗಿ ಹೇಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಸೂರತ್- ಇಂದೋರಿನಲ್ಲಿ ಬಿಜೆಪಿ ಸಫಲ- ಮೋದಿಯುಗದ ಆಪರೇಷನ್ ಕಮಲ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಘಟನೆ ಯಾಕೆ ನಡೆದಿದೆ ಎಂದು ನನಗೆ ಈವರೆಗೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ. ನನಗೆ ಆಶ್ಚರ್ಯವಾಗಿದೆ. ಇಂದೋರ್‌ನಲ್ಲಿ ನನ್ನ 35 ವರ್ಷಗಳ ಚುನಾವಣಾ ರಾಜಕೀಯದಲ್ಲಿ ಇಂತಹ ಘಟನೆ ನಡೆದಿಲ್ಲ” ಎಂದು ಮಹಾಜನ್ ಮಾಧ್ಯಮಗಳಿಗೆ ಉತ್ತರಿಸುತ್ತಾ ಹೇಳಿದ್ದಾರೆ.

ಬಿಜೆಪಿಗೆ ಪಾಠ ಕಲಿಸಲು ನೋಟಾಗೆ ಮತ ಹಾಕುವಂತೆ ಇಂದೋರ್‌ನ ಜನರಿಗೆ ಕಾಂಗ್ರೆಸ್ ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮಹಾಜನ್ ಅವರು, “ನನಗೆ ಇಂದೋರ್‌ನ ಪ್ರಮುಖ ನಾಗರಿಕರಿಂದ ಕರೆಗಳು ಬರುತ್ತಿದೆ. ನಡೆದಿರುವ ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

ಹಾಗೆಯೇ “ಜನರು ಬಿಜೆಪಿಗೆ ಮತ ಹಾಕುವುದಿಲ್ಲ, ಬದಲಿಗೆ ಇವಿಎಂನಲ್ಲಿ ನೋಟಾ ಆಯ್ಕೆಯನ್ನು ಒತ್ತುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯೇ ಮನಸ್ಸು ಬದಲಾಯಿಸಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರಿರುವುದು, ಬಿಜೆಪಿ ಅಭ್ಯರ್ಥಿ ಆ ರೀತಿ ಮಾಡಿರುವುದಲ್ಲ ಎಂದು ನಾನು ಜನರ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದೇನೆ” ಎಂದರು.

ಇದನ್ನು ಓದಿದ್ದೀರಾ?  ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

“ನಮ್ಮ ಅಭ್ಯರ್ಥಿ ಮತ್ತು ಸಂಸದರು ಹೆಚ್ಚಿನ ಅಂತರದಿಂದ ಗೆಲ್ಲಲು ಸಿದ್ಧವಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ಬಾಮ್ ಪ್ರಬಲ ನಾಯಕರೇನಲ್ಲ. ಹಾಗಿರುವಾಗ ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಹಿಂಪಡೆಸಿಕೊಳ್ಳುವ ಅಗತ್ಯ ಏನಿತ್ತು” ಎಂದು ಪ್ರಶ್ನಿಸಿದ ಮಹಾಜನ್, ನಾಮಪತ್ರ ಹಿಂಪಡೆದ ಕೆಲವೇ ಗಂಟೆಗಳಲ್ಲಿ ಬಾಮ್ ಬಿಜೆಪಿ ಸೇರಿರುವುದನ್ನು ಕೂಡಾ ಪ್ರಶ್ನಿಸಿದ್ದಾರೆ.

“ಪಕ್ಷಕ್ಕೆ ಯಾರಾದರೂ ಸೇರಲು ಬಯಸಿದರೆ ನಾವು ನಿರಾಕರಿಸಲಾಗದು. ಆದರೆ ಹೊಸ ವ್ಯಕ್ತಿಗಳಿಂದಾಗಿ ಪಕ್ಷವು ದೊಡ್ಡದಾಗಿ ಬೆಳೆಯುತ್ತಾ ಹೋದಂತೆ ಅದರ ಗುಣಮಟ್ಟ ಮತ್ತು ಸಂಘಟನೆಯ ರಚನೆ ಹಾಗೆಯೇ ಉಳಿಯುತ್ತದೆಯೇ ಎಂಬುವುದನ್ನು ನಾವು ಎಂದಿಗೂ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಬಿಜೆಪಿ ಹಿರಿಯ ನಾಯಕಿ ತನ್ನ ಪಕ್ಷಕ್ಕೆ ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...