ಮೋದಿಗೆ ಮತ ಹಾಕಿ ಸೆಕೆಂಡ್‌ ಸ್ಟೇಜ್‌ ಕ್ಯಾನ್ಸರ್‌ನಲ್ಲಿದ್ದೇವೆ, ಜನರು ಈ ಬಾರಿ ಮತ ಹಾಕಲ್ಲ: ಕೆ ವಿ ಗೌತಮ್‌

Date:

ಮೋದಿ ಮೋಡಿಗೆ ಮರುಳಾಗಿ ಮತ ಹಾಕಿದ್ದರಿಂದ ನಾವು ಸೆಕೆಂಡ್‌ ಸ್ಟೇಜ್‌ ಕ್ಯಾನ್ಸರ್‌ನಲ್ಲಿದ್ದೇವೆ. ಜನರು ಮೂರನೇ ಬಾರಿ ವೋಟ್‌ ಹಾಕೋ ಸಾಹಸ ಮಾಡಲ್ಲ ಎಂದು ಮಾರ್ಮಿಕವಾಗಿ ಕೋಲಾರ ಕಾಂಗ್ರೆಸ್‌ ಅಭ್ಯರ್ಥಿ ಕೆ ವಿ ಗೌತಮ್ ಹೇಳಿದರು.

ಲೋಕಸಭೆ ಚುನಾವಣೆಗೆ ಮುಳಬಾಗಲು ತಾಲೂಕಿನ ಕುರುಡುಮಲೆಯಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

“ಬಿಜೆಪಿ ಅವಧಿಯ 10 ವರ್ಷದಲ್ಲಿ ದೇಶ ಯಾವುದೇ ಅಭಿವೃದ್ಧಿ ಸಾಧಿಸಿಲ್ಲ. ಮತ್ತೆ 3ನೇ ಬಾರಿಯೂ ಬಿಜೆಪಿಗೆ ಮತ ಹಾಕುವ ಸಾಹಸಕ್ಕೆ ಜನ ಕೈ ಹಾಕುವುದಿಲ್ಲ. ಈಗಲೇ ನಾವು ಸೆಕೆಂಡ್ ಸ್ಟೇಜ್ ಕ್ಯಾನ್ಸರ್ ನಲ್ಲಿದ್ದೇವೆ. 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಕಥೆ ಮುಗೀತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರಿಗೂ ಒಂದು ರೂಪಾಯಿ ದುಡ್ಡು ಬಂದಿಲ್ಲ. ಶ್ರೀಮಂತರು ಶ್ರೀಮಂತರಾಗಿಯೇ ಇದ್ದಾರೆ. ಕರೋನಾ ಸಮಯದಲ್ಲಿ ರಾಜ್ಯದ ಬಿಜೆಪಿ ಶಾಸಕರು ಯಾವ ರೀತಿ ದುಡ್ಡು ಹೊಡೆದಿದ್ದಾರೆ ಅಂತ ಗೊತ್ತಿದೆ. ಜನ ರಸ್ತೆಗಳಲ್ಲಿ ಸಾಯ್ತಾ ಇದ್ರು, ಆ್ಯಂಬುಲೆನ್ಸ್ ಗಳು ಇರಲಿಲ್ಲ. ಆಕ್ಸಿಜನ್ ಇಲ್ಲ ಅಂತೇಳಿ ಹಣವನ್ನು ದೇಣಿಗೆ ಪಡೆದರು. ಈ ಹಣವನ್ನೂ ಆರ್‌ಟಿಐ ವ್ಯಾಪ್ತಿಗೆ ಬರಲ್ಲ ಅಂತೇಳಿ ಮುಚ್ಚಿಡುವ ಕೆಲಸ ಮಾಡಿದ್ದಾರೆ” ಎಂದು ಕಿಡಿಕಾರಿದರು.

“ಬಿಜೆಪಿಯವರು ವಿರೋಧ ಪಕ್ಷದ ನಾಯಕರನ್ನು ಸುಖಾ ಸುಮ್ಮನೆ ಜೈಲಿಗೆ ಹಾಕುತ್ತಿದ್ದಾರೆ. ಏನೇ ಅನ್ಯಾಯವಾದರೂ ಯಾರೂ ಮಾತನಾಡಬಾರದು ಅನ್ನುವ ರೀತಿ ಮಾಡಿದ್ದಾರೆ. ಏನಾದರೂ ಮಾತಾಡಿದರೆ ಜೈಲಿಗೆ ಹಾಕುತ್ತಾರೆ, ಇಲ್ಲ ಕೊಂಡುಕೊಂಡು ಬಿಡುತ್ತಾರೆ” ಎಂದು ಹರಿಹಾಯ್ದರು.

ಕೋಲಾರ ಅಭಿವೃದ್ಧಿ ಹೊಂದಿಲ್ಲ

“ಕೋಲಾರ ಜಿಲ್ಲೆ ತುಂಬಾ ಅಭಿವೃದ್ಧಿಯಾಗಬೇಕಿದೆ. ಕೆ ಎಚ್ ಮುನಿಯಪ್ಪ ಅವರ ಅವಧಿಯಲ್ಲಿ ಹೈವೆ ರಸ್ತೆಗಳಾಗಿದ್ದವು. ನಂತರ ಮುನಿಸ್ವಾಮಿ ಬಂದಾಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಕೋಲಾರ ಅಭಿವೃದ್ಧಿಯಾಗಿಲ್ಲ. ಹಾಗಾಗಿ ಕೋಲಾರ ಅಭಿವೃದ್ಧಿ ಮಾಡಲು ನನಗೆ ಈ ಬಾರಿ ಅವಕಾಶ ಸಿಕ್ಕಿದೆ. ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ಜಿಲ್ಲೆ ಕೋಲಾರ. ನಾನು ಸಿವಿಲ್ ಇಂಜಿನಿಯರಿಂಗ್ ಮಾಡಿದ್ದೇನೆ.‌ ಅಭಿವೃದ್ಧಿ ವಿಚಾರದಲ್ಲಿ ನನ್ನದೇ ಆದ ಕನಸುಗಳಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಸುನಿಲ್ ಬೋಸ್ ಗೆಲುವು ನನ್ನನ್ನು ಇನ್ನಷ್ಟು ಗಟ್ಟಿಯಾಗಿಸಿ, ನನ್ನ ಶಕ್ತಿ ಹೆಚ್ಚಿಸುತ್ತದೆ: ಸಿದ್ದರಾಮಯ್ಯ

ಬಣ ಜಗಳ ಇಲ್ಲ

ಅಭ್ಯರ್ಥಿ ವಿಚಾರದಲ್ಲಿ ನಮ್ಮ ಪಕ್ಷದ ಎರಡು ಬಣಗಳ ನಡುವೆ ಕಿತ್ತಾಟ ಇತ್ತು. ಆದರೆ, ನನ್ನ ವಿಚಾರದಲ್ಲಿ ಅವರಿಗೆ ಯಾವುದೇ ವೈಮನಸ್ಸು ಇಲ್ಲ. ನಮ್ಮ ಎರಡೂ ಬಣದ ನಾಯಕರ ಜೊತೆ ಮಾತನಾಡಿದ್ದೇನೆ. ನನ್ನನ್ನು ಎರಡೂ ಬಣದ ನಾಯಕರು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದರು.

“ಕೋಲಾರದಲ್ಲಿ ಸ್ಪರ್ಧೆ ಮಾಡುವಂತೆ ನನಗೆ ಹೈಕಮಾಂಡ್‌ ಹೇಳಿದೆ. ನೀನು ಅಭ್ಯರ್ಥಿಯಾದರೆ ಎಲ್ಲರೂ ಒಪ್ಪಿಕೊಳ್ಳುತ್ತಾರೆ ಎಂದು ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಆ ಪ್ರಕಾರ ಎರಡೂ ಬಣದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ” ಎಂದು ತಿಳಿಸಿದರು.

ಹೊರಗಿನವರು ಮತ್ತು ಸ್ಥಳೀಯರು ವಿಚಾರಕ್ಕೆ ಪ್ರತಿಕ್ರಿಯಿಸಿದ ಕೆ ವಿ ಗೌತಮ್, “ಬೆಂಗಳೂರಿನಲ್ಲಿ ಮನೆ ಮಾಡಿಕೊಂಡು ಇಲ್ಲಿಗೆ ಚುನಾವಣೆಗೋಸ್ಕರ ಎಲ್ಲರೂ ಬಂದಿರೋರೆ. ನನಗೂ ಕೋಲಾರ ಹೊಸದಲ್ಲ. ಬೆಂಗಳೂರಿನಲ್ಲಿ ಕೋಲಾರದವರೇ ಶೇ.75 ಜನ ಇದ್ದಾರೆ. ಮತದಾರರ ಮುಂದೆ ಹೋಗಿ ಕಾಂಗ್ರೆಸ್ ಪಕ್ಷ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುತ್ತೇವೆ. ಗ್ಯಾರಂಟಿ ಯೋಜನೆಗಳ ಶ್ರೀರಕ್ಷೆಯೇ ನಮಗೆ ಆಶೀರ್ವಾದ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...