ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

Date:

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳ ಬಗ್ಗೆ ಹೇಳಿಕೆ ನೀಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, “ನಾವು ಬಾಯಿ ಮುಚ್ಚಿಕೊಂಡೇ ಇದ್ದರೆ ನಮ್ಮ ಮತದಾನದ ಹಕ್ಕನ್ನು ಇವರು ಸಂಪೂರ್ಣವಾಗಿ ಕಸಿದುಕೊಳ್ಳುವ ದಿನ ದೂರವಿಲ್ಲ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಆಪರೇಷನ್ ಮಹದೇವಪುರ ಭಾರತೀಯ ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನವನ್ನು ಕಗ್ಗೊಲೆ ಮಾಡಿದ ದೇಶದೊಳಗಿನ ಭಯೋತ್ಪಾದಕರನ್ನು ಬಯಲಿಗೆಳೆದಿದೆ” ಎಂದು ಜರೆದಿದ್ದಾರೆ.

“ಎಲ್ಲಾ ಭಾರತೀಯರ ಪರವಾಗಿ, ಡಿಜಿಟಲ್ ಡೇಟಾ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸದ ಚುನಾವಣಾ ಆಯೋಗದ ಎಲ್ಲಾ ಮೋಸದ ತಂತ್ರಗಳನ್ನು ಮೀರಿಸಿ, ಟನ್ನುಗಟ್ಟಲೆ ಮೋಸದ ದಾಖಲೆಗಳನ್ನು ಪರಿಶೀಲಿಸಿ ಪ್ರಜಾಪ್ರಭುತ್ವದ ಅಡಿಪಾಯವಾದ ನಮ್ಮ ಮತದ ಅಧಿಕಾರವನ್ನು ನಾಶಮಾಡುವ, ಅತಿದೊಡ್ಡ ದೇಶದ್ರೋಹವನ್ನು ಸಾಬೀತುಪಡಿಸಲು ಶ್ರಮಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ವಂದನೆಗಳು. ಇದು ರಾಹುಲ್ ಗಾಂಧಿ ಅಥವಾ ವಿರೋಧ ಪಕ್ಷದ ಹೋರಾಟವಲ್ಲ. ನಮ್ಮ ಹೋರಾಟ. ನಮ್ಮ ಹಕ್ಕನ್ನು ಕಗ್ಗೊಲೆ ಮಾಡಲಾಗಿದೆ” ಎಂದು ನಟ ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಲೂ ನಾವು ಎದ್ದು ನಿಲ್ಲುವುದಿಲ್ಲವೇ? ಈಗಲೂ ಯಾವುದೇ ತನಿಖೆ ಇರುವುದಿಲ್ಲವೇ? ಇದು ಹೊಸ ಸಾಮಾನ್ಯವಾಗುತ್ತದೆಯೇ? ಉಪರಾಷ್ಟ್ರಪತಿಯ ಹುದ್ದೆಯಂತಹ ಉನ್ನತ ಹುದ್ದೆಯ ರಾಜೀನಾಮೆಯಂತೆ. ಚುನಾವಣಾ ಬಾಂಡ್‌ಗಳಂತಹ ದೊಡ್ಡ ಮತ್ತು ಅಸಾಂವಿಧಾನಿಕ ಹಗರಣದಂತೆ ? ಹಾಗಿದ್ದರೆ ನಮ್ಮ ಆರ್ಥಿಕತೆ ಸತ್ತಿದೆಯೋ ಇಲ್ಲವೋ, ಆದರೆ ನಮ್ಮ ಪ್ರಜಾಪ್ರಭುತ್ವ ಖಂಡಿತವಾಗಿಯೂ ಸತ್ತಿದೆ” ಎಂದು ಪೋಸ್ಟ್‌ನಲ್ಲಿ ಬಹುಭಾಷಾ ನಟ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಪ್ಪಳ | ರಸಗೊಬ್ಬರ ಅಭಾವ: ಎರಡನೇ ದಿನವೂ ದಿಢೀರ್ ರಸ್ತೆಗಿಳಿದು ಪ್ರತಿಭಟಿಸಿದ ರೈತರು

ನಾವು ಬಾಯಿ ಮುಚ್ಚಿಕೊಂಡೇ ಇದ್ದರೆ ನಮ್ಮ ಮತದಾನದ ಹಕ್ಕನ್ನು ಇವರು ಸಂಪೂರ್ಣವಾಗಿ ಕಸಿದುಕೊಳ್ಳುವ ದಿನ ದೂರವಿಲ್ಲ. ದೇಶದ ಜನ, ಮಾಧ್ಯಮಗಳು, ನ್ಯಾಯಾಂಗ, ಅಧಿಕಾರಶಾಹಿ ಮತ್ತು ರಾಜಕಾರಣಿಗಳು ಈ ದೇಶದ್ರೋಹದ ಭಾಗವಾಗಲು ನಿರಾಕರಿಸಿ ಈ ದೇಶದ್ರೋಹಿಗಳ ವಿರುದ್ಧ ನಿಲ್ಲಬೇಕು ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...