ಬಿಹಾರ ಚುನಾವಣೆಯಲ್ಲಿ ಮತಗಳ್ಳತನ; ಚುನಾವಣಾ ಆಯುಕ್ತರು ಪ್ರಮುಖ ಅಪರಾಧಿಗಳು: ರಾಹುಲ್ ಗಾಂಧಿ

Date:

ನಿನ್ನೆಯಷ್ಟೇ ಮೊದಲ ಹಂತದ ಚುನಾವಣೆ ನಡೆದಿರುವ ಬಿಹಾರದಲ್ಲಿಯೂ ಮತಗಳ್ಳತನ ನಡೆದಿದೆ. ಈ ಸಂಬಂಧ ಪುರಾವೆಗಳನ್ನು ಬಲಪಡಿಸುವ ವರದಿಗಳು ಬಂದಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಹಾಗೆಯೇ “ಪ್ರಜಾಪ್ರಭುತ್ವದ ಕೊಲೆಯ ಪ್ರಮುಖ ಅಪರಾಧಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು ಆಗಿದ್ದಾರೆ. ಅವರು ಸಂವಿಧಾನದ ವಿರುದ್ಧದ ಅತಿದೊಡ್ಡ ದ್ರೋಹ ಮಾಡುತ್ತಿದ್ದಾರೆ” ಎಂದಿದ್ದಾರೆ.

ಗುರುವಾರ, “ಎನ್‌ಡಿಎ ಹರಿಯಾಣದಲ್ಲಿ ಮಾಡಿದಂತೆ ಬಿಹಾರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ತಯಾರಿ ನಡೆಸುತ್ತಿದೆ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ದೂರಿದ್ದರು. ಈ ವಿಡಿಯೋ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ರಾಹುಲ್ ಗಾಂಧಿ ಬಿಹಾರದಲ್ಲಿ ಮತಗಳ್ಳತನದ ಆರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಮತಗಳ್ಳತನ | ಹರಿಯಾಣ ಮತದಾರರ ಪಟ್ಟಿಯಲ್ಲಿ 22 ಬಾರಿ ಬ್ರೆಝಿಲ್ ರೂಪದರ್ಶಿ ಫೋಟೋ ಬಳಕೆ: ರಾಹುಲ್ ಗಾಂಧಿ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ರಾತ್ರಿ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಇತರ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತ ಚಲಾಯಿಸಿದ ಅನೇಕ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿಹಾರದಲ್ಲಿಯೂ ಮತ ಚಲಾಯಿಸುತ್ತಿದ್ದಾರೆ. ಮತದಾನದ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು ವಹಿಸಿಕೊಂಡವರು ಜನರ ಭವಿಷ್ಯವನ್ನು ಕದಿಯುವಲ್ಲಿ ಪಾಲುದಾರರಾಗಿದ್ದಾರೆ” ಎಂದು ದೂರಿದ್ದಾರೆ.

“ಭಾರತದ ನನ್ನ ಯುವ ಮತ್ತು Gen Z ಸ್ನೇಹಿತರೇ, ನಿನ್ನೆಯಷ್ಟೇ, ಹರಿಯಾಣದಲ್ಲಿ ಹೇಗೆ ಮತ ಕಳ್ಳತನದಿಂದ ಅಧಿಕಾರ ಪಡೆಯಲಾಗಿದೆ ಮತ್ತು ಇಡೀ ರಾಜ್ಯದ ಸಾರ್ವಜನಿಕ ಅಭಿಪ್ರಾಯವನ್ನು ಕಸಿದುಕೊಳ್ಳಲಾಗಿದೆ ಎಂಬುದನ್ನು ನಾನು ಸಾಕ್ಷ್ಯಾಧಾರಗಳೊಂದಿಗೆ ಪ್ರದರ್ಶಿಸಿದೆ. ಕೆಲವು ದಿನಗಳ ಹಿಂದೆ, ನಾನು SIR ಮೂಲಕ ಮತದಾರರ ಪಟ್ಟಿಗಳ ಅಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಬಿಹಾರದಲ್ಲಿ ‘ಮತದಾರರ ಹಕ್ಕುಗಳ ಯಾತ್ರೆ’ಯನ್ನು ಸಹ ನಡೆಸಿದ್ದೆ. ಇಂದು, ಬಿಹಾರದ ಪ್ರತಿಯೊಂದು ಮೂಲೆಯಿಂದ ಬರುವ ಸುದ್ದಿಗಳು ಮತ್ತು ವೀಡಿಯೊಗಳು ಮತಗಳ್ಳತನದ ಪುರಾವೆಗಳನ್ನು ಮತ್ತಷ್ಟು ಬಲಪಡಿಸುತ್ತಿವೆ” ಎಂದು ಹೇಳಿದ್ದಾರೆ.

“ಲಕ್ಷಾಂತರ ಮತದಾರರನ್ನು ಈಗಾಗಲೇ ಪಟ್ಟಿಯಿಂದ ತೆಗೆದುಹಾಕಲಾಗಿದೆ ಮತ್ತು ಈಗ ಜನರು ಮತಗಟ್ಟೆಗಳಲ್ಲಿ ಮತ ಚಲಾಯಿಸುವುದನ್ನು ತಡೆಯಲಾಗುತ್ತಿದೆ. ಅದೇ ಸಮಯದಲ್ಲಿ, ಇತರ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಮತ ಚಲಾಯಿಸಿದ ಅನೇಕ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿಹಾರದಲ್ಲಿಯೂ ಮತ ಚಲಾಯಿಸುತ್ತಿದ್ದಾರೆ” ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.

“ನೆನಪಿಡಿ, ಮತ ಕಳ್ಳತನದ ಮೂಲಕ ರಚನೆಯಾದ ಸರ್ಕಾರವು ಯುವಕರು, Gen Z ಮತ್ತು ಸಾರ್ವಜನಿಕರ ಹಿತಾಸಕ್ತಿಗಾಗಿ ಎಂದಿಗೂ ಕೆಲಸ ಮಾಡದು. ಮತ್ತು ಇದನ್ನೂ ತಿಳಿದುಕೊಂಡಿರಿ, ನಿಮ್ಮ ಪ್ರಜಾಪ್ರಭುತ್ವದ ಈ ಕೊಲೆಯ ಪ್ರಮುಖ ಅಪರಾಧಿಗಳು: ಜ್ಞಾನೇಶ್ ಕುಮಾರ್(ಮುಖ್ಯ ಚುನಾವಣಾ ಅಧಿಕಾರಿ), ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ. ಇವರು ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು, ಆದರೆ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರುದ್ಧ ದೊಡ್ಡ ವಿಶ್ವಾಸಘಾತುಕತನವನ್ನು ಎಸಗುತ್ತಿದ್ದಾರೆ. ಮತದಾನದ ಹಕ್ಕನ್ನು ರಕ್ಷಿಸಬೇಕಾದವರು ನಿಮ್ಮ ಭವಿಷ್ಯವನ್ನು ಕದಿಯುವಲ್ಲಿ ಪಾಲುದಾರರಾಗಿದ್ದಾರೆ” ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬುಧವಾರ, ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ, ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯನ್ನು ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು. ಹಾಗೆಯೇ ಒಂದೇ ಭಾವಚಿತ್ರವನ್ನು ಹೊಂದಿರುವ ಪಟ್ಟಿಯಲ್ಲಿದ್ದ ಹಲವು ಮತದಾರರ ವಿವರಗಳನ್ನು ಬಹಿರಂಗಪಡಿಸಿದ್ದರು.

ಬಿಹಾರ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ನಡೆದರೆ, ಎರಡನೇ ಮತ್ತು ಅಂತಿಮ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ. 243 ಸದಸ್ಯ ಬಲದ ವಿಧಾನಸಭೆಯ ಮತ ಎಣಿಕೆ ನವೆಂಬರ್ 14ರಂದು ನಡೆಯಲಿದೆ. ಮೊದಲ ಹಂತದಲ್ಲಿ ಶೇ.64.66ರಷ್ಟು ಮತದಾನ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...