ಬಿಹಾರ ಮತ್ತು ಯುಪಿಯಲ್ಲಿ ‘ಇಂಡಿಯಾ’ದತ್ತ ಮತದಾರರ ಚಿತ್ತ; ರಾಹುಲ್ ಪ್ರತಿಪಾದನೆ

Date:

ಲೋಕಸಭಾ ಚುನಾವಣೆಯ ನಂತರ ಕೈಗಾರಿಕೋದ್ಯಮಿಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಕೇಳುವ ಪ್ರಶ್ನೆಗಳ ಬಗೆಗಿನ ವಿಚಾರವನ್ನು ಉದ್ದೇಶಪೂರ್ವಕವಾಗಿ ತಪ್ಪಿಸಲು ಪ್ರಧಾನಿ ಮೋದಿ, ‘ದೇವರು ನನ್ನನ್ನು ಕಳುಹಿಸಿದ್ದಾನೆ’ ಎಂಬ ಹೇಳಿಕೆ ನೀಡಿದ್ದಾರೆ ಎಂದು ಮೋದಿ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚೆಗೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಮೋದಿ, “ನನ್ನ ತಾಯಿ ಜೀವಂತವಾಗಿದ್ದಾಗ, ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ನಾನು ನಂಬುತ್ತಿದ್ದೆ. ಅವಳು ತೀರಿಕೊಂಡ ನಂತರ, ನನ್ನ ಎಲ್ಲ ಅನುಭವಗಳನ್ನು ಗಮನಿಸಿದಾಗ, ‘ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಕಳುಹಿಸಿದ್ದಾನೆ’ ಎಂಬುದು ನನಗೆ ಮನವರಿಕೆಯಾಯಿತು. ಅದಕ್ಕಾಗಿಯೇ ನಾನು ನನ್ನನ್ನು ಸಂಪೂರ್ಣವಾಗಿ ದೇವರಿಗೆ ಅರ್ಪಿಸಿಕೊಂಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮೋದಿ ಹೇಳಿಕೆಯನ್ನು ಪ್ರಸ್ತಾಪಿಸಿದ ರಾಹುಲ್‌ ಗಾಂಧಿ, “ಅವರು (ಮೋದಿ) ಈ ದೇವರ ಕಥೆಯನ್ನು ಏಕೆ ತಂದರು ಎಂಬುದು ನಿಮಗೆ ತಿಳಿದಿದೆಯೇ? ಏಕೆಂದರೆ, ಲೋಕಸಭೆ ಚುನಾವಣೆಯ ನಂತರ ನರೇಂದ್ರ ಮೋದಿಯವರಿಗೆ ಕೈಗಾರಿಕೋದ್ಯಮಿಗಳ ಬಗ್ಗೆ ಇಡಿ ಪ್ರಶ್ನೆಗಳನ್ನು ಕೇಳಬಹುದು ಎಂಬ ವಿಚಾರವನ್ನು ಪ್ರಸ್ತಾಪಿಸಿದಾಗ, ಮೋದಿ, ‘ನನಗೆ ಗೊತ್ತಿಲ್ಲ, ನನ್ನನ್ನು ‘ಪರಮಾತ್ಮ’ ಕಳುಹಿಸಿದ್ದಾನೆ’ ಎಂದಿದ್ದಾರೆ. ಇದು ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವ ಯತ್ನ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಭಾಷಣಗಳನ್ನು ನಿಲ್ಲಿಸಿ. ಮೊದಲು, ಕಳೆದ ಹತ್ತು ವರ್ಷಗಳಲ್ಲಿ ಬಿಹಾರ ಮತ್ತು ದೇಶದ ಜನರಿಗೆ ನೀವು (ಮೋದಿ) ಎಷ್ಟು ಉದ್ಯೋಗಗಳನ್ನು ಒದಗಿಸಿದ್ದೀರಿ ಎಂಬುದರ ಬಗ್ಗೆ ಮಾತನಾಡಿ” ಎಂದು ರಾಹುಲ್ ಹೇಳಿದ್ದಾರೆ.

“ನರೇಂದ್ರ ಮೋದಿ ಮುಂದಿನ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂಬುದನ್ನು ನೀವು ಗಮನಿಸಬಹುದು. ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ‘ಇಂಡಿಯಾ’ ಬಣದ ಪರವಾಗಿ ‘ಅಲೆ’ ಇದೆ” ಎಂದು ಅವರು ಪ್ರತಿಪಾದಿಸಿದರು.

“ಎರಡು ಜಾತಿಗಳು ಮಾತ್ರ ಇವೆ ಎಂದು ಹೇಳಿಕೊಳ್ಳುವ ಪ್ರಧಾನಿ ತನ್ನನ್ನು ತಾನು ಒಬಿಸಿ ಎಂದು ಏಕೆ ಗುರುತಿಸಿಕೊಳ್ಳುತ್ತಾರೆ. ನಾನು ಜಾತಿ ಗಣತಿ ವಿಷಯವನ್ನು ಪ್ರಸ್ತಾಪಿಸಿದಾಗ ಮೋದಿ ಹೇಳಿದರು, ಭಾರತದಲ್ಲಿ ಕೇವಲ ಎರಡು ಜಾತಿಗಳಿವೆ-ಶ್ರೀಮಂತ ಮತ್ತು ಬಡವ. ಕೇವಲ ಎರಡು ಜಾತಿಗಳಿದ್ದರೆ, ಅವರು (ಮೋದಿ) ಹೇಗೆ ಒಬಿಸಿ ಆಗುತ್ತಾರೆ. ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿಯನ್ನು ನಡೆಸುತ್ತದೆ” ಎಂದರು.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...