ವಕ್ಫ್ ವಿವಾದ | ರೈತರ ಸಮಸ್ಯೆ ಆಲಿಸಲೆಂದೇ ಕರ್ನಾಟಕಕ್ಕೆ ಬಂದಿದ್ದೇನೆ: ಜಗದಂಬಿಕಾ ಪಾಲ್

Date:

ಕರ್ನಾಟಕದಲ್ಲಿ ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಪರಿಶೀಲನೆಗಾಗಿ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಗುರುವಾರ ರಾಜ್ಯಕ್ಕೆ ಆಗಮಿಸಿದ್ದಾರೆ.

ರಾಜ್ಯದ ಹಲವೆಡೆ ವಕ್ಸ್ ನೋಟಿಸ್ ಸೃಷ್ಟಿಸಿರುವ ಆತಂಕದ ಬಗ್ಗೆ ಗಮನ ಸೆಳೆದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ವಕ್ಸ್(ತಿದ್ದುಪಡಿ) ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಂಬಿಕಾ ಪಾಲ್ ಇಂದು ರಾಜ್ಯಕ್ಕೆ ಆಗಮಿಸಿರುವ ಅವರು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.

ಗುರುವಾರ ಬಳಿಗ್ಗೆ ಹುಬ್ಬಳ್ಳಿಗೆ ಬಂದ ಅವರು ಮಾಧ್ಯಮಗಳ ಜೊತೆ ಮಾತನಾಡಿ, “ರಾಜ್ಯದ ರೈತರ ಸಮಸ್ಯೆಗಳನ್ನು ಆಲಿಸುವುದಕ್ಕೆಂದೇ ಕರ್ನಾಟಕಕ್ಕೆ ಬಂದಿದ್ದೇನೆ. ಇಲ್ಲಿನ ರೈತರು ದಶಕಗಳ ಕಾಲ ಉಳಿಮೆ ಮಾಡಿದ ಜಮೀನುಗಳನ್ನು ವಕ್ಫ್ ಬೋರ್ಡ್ ಏಕಾಏಕಿ ತನ್ನದೆಂದು ಹೇಳುತ್ತಿದೆ. ರೈತರು ತಮ್ಮ ಆಸ್ತಿ ಪತ್ರದ ವಿವರಗಳನ್ನು ತಂದಿದ್ದಾರೆ. ರೈತರ ಹೆಸರಲ್ಲಿರುವ ಭೂ ದಾಖಲೆ ವಿವರ ನೀಡುತ್ತಿದ್ದಾರೆ. ರೈತರ ಅಹವಾಲು ಸ್ವೀಕರಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 60-70 ವರ್ಷಗಳಿಂದ ಕೃಷಿ ಮಾಡುತ್ತಿರುವ ಭೂಮಿ ಮೇಲೆ ವಕ್ಫ್ ಬೋರ್ಡ ಹಕ್ಕು ಸಾಧಿಸಲು ಹೊರಟಿದೆ. ಹೀಗಾಗಿ ರೈತರು ಪ್ರತಿಭಟಿಸುತ್ತಿದ್ದಾರೆ. ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದು, ವಿಜಯಪುರ ಜಿಲ್ಲೆಗೂ ಭೇಟಿ ನೀಡುತ್ತಿದ್ದೇನೆ. ಕೇವಲ ರೈತರ ಕೃಷಿ ಭೂಮಿ ಮಾತ್ರವಲ್ಲ, ಪ್ರಾಚ್ಯವಸ್ತು ಇಲಾಖೆಯ ಪಾರಂಪರಿಕ ತಾಣಗಳನ್ನು ಸಹ ವಕ್ಫ್ ತನ್ನದೆಂದು ಪ್ರತಿಪಾದಿಸುತ್ತಿದೆ. ಈ ಬಗ್ಗೆ ಸಹ ಮಾಹಿತಿ ಪಡೆಯಲಿದ್ದೇನೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸತ್ಯಾಸತ್ಯತೆ ತಿಳಿದು ವರದಿ ನೀಡುತ್ತೇನೆ” ಎಂದು ಹೇಳಿದರು.

ಹುಬ್ಬಳ್ಳಿಯ ಖಾಸಗಿ ಹೋಟೆಲ್​​ನಲ್ಲಿ ಅಹವಾಲು ಸ್ವೀಕಾರ ನಡೆಯಲಿದೆ. ಮನವಿ ಸ್ವೀಕಾರ ಮಾಡಿ ರೈತರ ಜೊತೆ ಸಭೆ ನಡೆಸುವ ನಿರೀಕ್ಷೆ ಇದೆ. ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಕೂಡ ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...