ವಕ್ಫ್ ವಿವಾದ | ಯತ್ನಾಳ್ ನೇತೃತ್ವದ ಬಿಜೆಪಿಯ ಬಂಡಾಯ ತಂಡದಿಂದ ಬೀದರ್ ಜಿಲ್ಲೆಗೆ ಭೇಟಿ

Date:

ಇತ್ತೀಚೆಗೆ ಬಾಗಲಕೋಟೆಯಲ್ಲಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ವಕ್ಫ್ ಬಗ್ಗೆ ಪ್ರಸ್ತಾಪಿಸಿ ಜನರ ಛೀಮಾರಿ ಎದುರಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈಗ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ಬೀದರ್ ತಲುಪಿದ್ದಾರೆ. ವಕ್ಫ್ ವಿವಾದದ ಬಗ್ಗೆ ಜನಜಾಗೃತಿ ಮೂಡಿಸಲು ಬೀದರ್ ಜಿಲ್ಲೆಗೆ ಇಂದು ಭೇಟಿ ನೀಡಲಾಗಿದೆ ಎಂದು ನಾಯಕರುಗಳು ಹೇಳಿಕೊಂಡಿದ್ದಾರೆ.

ಆದರೆ ಬಿಜೆಪಿಯ ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್ ಹೊರತುಪಡಿಸಿ ಬಿಜೆಪಿಯ ಯಾವುದೇ ಮುಖಂಡರು ಕೂಡಾ ಯತ್ನಾಳ್ ತಂಡದ ಜೊತೆ ಇಲ್ಲ. ಜಿಲ್ಲೆಯಲ್ಲಿರುವ ಬಿಜೆಪಿಯ ನಾಲ್ವರು ಶಾಸಕರುಗಳು ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರು ಯತ್ನಾಳ್ ತಂಡದ ಬಳಿ ಕಾಣಿಸಿಕೊಂಡಿಲ್ಲ.

ಇದನ್ನು ಓದಿದ್ದೀರಾ? ಬಾಗಲಕೋಟೆ | ದೇವಸ್ಥಾನದ ಕಾರ್ಯಕ್ರಮದಲ್ಲಿ ‘ವಕ್ಫ್‌’ ವಿಚಾರ: ಶಾಸಕ ಯತ್ನಾಳ್‌ಗೆ ಸಾರ್ವಜನಿಕರಿಂದ ಛೀಮಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಜಿಎಂ ಸಿದ್ಧೇಶ್ವರ, ಮಾಜಿ ಶಾಸಕ ಕುಮಾರ ಬಂಗಾರಪ್ಪ, ಶಾಸಕ ಬಿ ಪಿ ಹರೀಶ್, ಬಿಜೆಪಿ ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್ ತಂಡವನ್ನು ಭೇಟಿಯಾದರು.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ, “ವಕ್ಫ್ ವಿವಾದದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ನಾವು ಬೀದರ್‌ ಜಿಲ್ಲೆಯಿಂದ ಪ್ರಾರಂಭಿಸಿದ್ದೇವೆ. ವಾರ್‌ ರೂಂ ಆರಂಭಿಸಿದ ಬಳಿಕ ಹಲವು ಕರೆಗಳು ಬರುತ್ತಿವೆ. ವಕ್ಫ್ ವಿವಾದ ಗಮನಕ್ಕೆ ಬಂದ ಕೂಡಲೇ ವಿಜಯಪುರದಲ್ಲಿ ಯತ್ನಾಳ್ ಅವರು ಹೋರಾಟ ನಡೆಸಿದ್ದಾರೆ. ನಾವು ಈಗ ಮಾಡುತ್ತಿರುವ ಕೆಲಸ ಧರ್ಮದ ಕೆಲಸ” ಎಂದು ಹೇಳಿದರು.

“ಕೇಂದ್ರ ಸಂಸದೀಯ ಸಮಿತಿ ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಕಳುಹಿಸಲು ತಿಳಿಸಿದೆ. ಸಮಿತಿ ಸೂಚನೆಯಂತೆ ನಾವು ಮಾಹಿತಿ ಸಂಗ್ರಹಿಸಿ, ಜನಜಾಗೃತಿ ಮೂಡಿಸಲು ನಿರ್ಧರಿಸಿದ್ದೇವೆ. ಬೀದರ್‌ನ ಚಟನಳ್ಳಿ, ಧರ್ಮಾಪೂರ ಗ್ರಾಮದಲ್ಲಿ ರೈತರ ಆಸ್ತಿಯನ್ನು ವಕ್ಫ್ ಎಂದು ನಮೂದಿಸಲಾಗಿದೆ. ಅಲ್ಲಿಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತೇವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...