ಜನರು ದಂಗೆ ಏಳುವ ಮುನ್ನವೇ ವಕ್ಫ್‌ ಮಂಡಳಿ ರದ್ದಾಗಬೇಕು: ಆರ್‌ ಅಶೋಕ್‌ ಆಗ್ರಹ

Date:

ಜನರು ದಂಗೆ ಏಳುವ ಮುನ್ನವೇ ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ವಕ್ಫ್‌ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್‌ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್‌ಬಾಗ್‌ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ” ಎಂದು ದೂರಿದರು.

“ಬೌರಿಂಗ್‌ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ ಮಾಡಿ ಆಸ್ತಿ ಉಳಿಸಿದೆ. ವಕ್ಫ್‌ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗುತ್ತಿದೆ. ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರೀಗ ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ. ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ ಬಳಿಕ ರೇಷನ್‌ ಕಾರ್ಡ್‌ ಜಿಹಾದ್‌ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್‌ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮರಳಿ ಅರ್ಜಿ ಹಾಕಿ ಎನ್ನುತ್ತಿದೆ. ಸರ್ಕಾರ ತಪ್ಪು ಮಾಡಿದರೆ, ಜನರು 10-15 ಸಾವಿರ ಲಂಚ ಕೊಟ್ಟು ರೇಷನ್‌ ಕಾರ್ಡ್‌ ಮಾಡಿಸಿಕೊಳ್ಳಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಇಲ್ಲ. ಅದಕ್ಕಾಗಿ ಪ್ರತಿಯೊಂದಕ್ಕೂ ಶುಲ್ಕ ಏರಿಕೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಿಎಂ ಸಿದ್ದರಾಮಯ್ಯ ತೆರಿಗೆ ವಿಧಿಸದ ವಸ್ತುಗಳೇ ಇಲ್ಲ. ಹರಿಯುವ ನದಿಗೂ ತೆರಿಗೆ ವಿಧಿಸಿದ್ದಾರೆ. ಇನ್ನು ಗಾಳಿಗೂ ತೆರಿಗೆ ವಿಧಿಸಬಹುದು. ಸರ್ಕಾರ ಪಾಪರ್‌ ಆಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಡ.‌ ಸಿಎಂ ಸಿದ್ದರಾಮಯ್ಯ ಬಡವರ ಪರ ಎಂದು ಹೇಳಿಕೊಳ್ಳುತ್ತಾರೆ. ಹಾಲು ಹಾಗೂ ಆಲ್ಕೋಹಾಲ್‌ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ, ಅನ್ನ ಪಡೆಯುವವರಿಗೆ ಕನ್ನ, ಔಷಧಿಗೆ ಕನ್ನ ಮೊದಲಾದ ಕ್ರಮಗಳ ಮೂಲಕ ಸಿಎಂ ಸಿದ್ದರಾಮಯ್ಯನವರು ಕನ್ನರಾಮಯ್ಯ ಎಂದು ಹೆಸರಾಗಿದ್ದಾರೆ” ಎಂದು ವ್ಯಂಗ್ಯವಾಡಿದರು.

ತಿದ್ದುಪಡಿ ಮಸೂದೆ ಬರಲಿದೆ

“ಮಂತ್ರಾಲಯ, ವಿಧಾನಸೌಧ, ವಿಶ್ವೇಶ್ವರಯ್ಯನವರ ಶಾಲೆ, ಬಡವರ ಭೂಮಿ ಉಳಿಯಲು ಸೂಪರ್‌ಮ್ಯಾನ್‌ ಆಗಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ. ಅವರು ತರಲಿರುವ ತಿದ್ದುಪಡಿ ಮಸೂದೆಯಿಂದ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ. ಅಲ್ಲಿಯವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...