ಕಾಂಗ್ರೆಸ್‌ ನಾಯಕರಿಂದ ವಕ್ಫ್ ಆಸ್ತಿ ಲೂಟಿ, ಹೀಗಾಗಿ ಆಸ್ತಿ ಸಂರಕ್ಷಿಸುತ್ತೇವೆ ಎಂದಿದ್ದೆವು: ಪ್ರಲ್ಹಾದ್‌ ಜೋಶಿ

Date:

ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.

ಸಂಡೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, “ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ. ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ. ಇದ್ದ ವಕ್ಫ್ ಆಸ್ತಿಯನ್ನು ಕಾಂಗ್ರೆಸ್ಸಿನ ಹಿರಿಯ ನಾಯಕರು ಲೂಟಿ ಮಾಡಿದ್ದರು. ಬಾಡಿಗೆ, ಲೀಸ್ ಮೂಲಕ ಸಾವಿರಾರು ಕೋಟಿ ಹಣ ಪಡೆಯುತ್ತಿದ್ದರು. ಇರುವ ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ನಾವು ಹೇಳಿದ್ದೆವು” ಎಂದರು.

“ಈಗ ವಕ್ಫ್ ಛೂ ಬಿಟ್ಟಿದ್ದಾರೆ. ನೂರಾರು ವರ್ಷಗಳ ಮಂದಿರ, ಮಠ ಹೊಡೆಯಲು ಮುಂದಾಗಿದ್ದಾರೆ. ವಿಜಯಪುರ ಜಿಲ್ಲೆಯ ಪಡಗಾನೂರು ಗ್ರಾಮದಲ್ಲಿ ಚಾಲುಕ್ಯರು ಕಟ್ಟಿದ 1500 ವರ್ಷಗಳ ಹಿಂದಿನ ದೇವಸ್ಥಾನ ವಕ್ಫ್ ಎಂದು ಘೋಷಿಸಿದ್ದಾರೆ. ಕೇವಲ ಕಾಲಂ ನಂಬರ್ 11ರಲ್ಲಿ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು. ಕೇಳಿದರೆ ಸಮರ್ಪಕ ಉತ್ತರ ಸಿಗಲಿಲ್ಲ” ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೇಲ್ ಡೀಡ್ ಇಲ್ಲದೆ ವಕ್ಫ್ ಷಡ್ಯಂತ್ರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ಹೊಂದಿದೆ. ಫಾರೂಕ್ ಅಬ್ದುಲ್ಲ ಭಯೋತ್ಪಾದಕರನ್ನು ಕೊಲ್ಲಬಾರದು ಎನ್ನುತ್ತಿದ್ದಾರೆ. ಪಾಕ್ ಜೊತೆ ಮಾತುಕತೆ ಮಾಡಲು ಕೋರುತ್ತಾರೆ. ಅವರ ಜೊತೆ ಇಂಡಿ ಒಕ್ಕೂಟ ಇದೆ. ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಭ್ರಮಣೆ ಆಗಿದೆಯೇ” ಎಂದು ಪ್ರಶ್ನೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

“ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರು ಅರ್ಥಾತ್ ಮುಸಲ್ಮಾನರ ತುಷ್ಟೀಕರಣವನ್ನೇ ಧ್ಯೇಯವನ್ನಾಗಿ ಮಾಡಿಕೊಂಡಿದೆ. ಸಿದ್ದರಾಮಯ್ಯನವರು ಮೊದಲನೇ ಅವಧಿಯಲ್ಲಿ 2013-18ರಲ್ಲಿ ನಿರ್ಬಂಧಿತ ಪಿಎಫ್‍ಐ, ಎಸ್‍ಡಿಪಿಐ, ಕೆಎಫ್‍ಡಿ ಸಿಮಿಯ ಪೂರ್ವಾವತಾರವಾದ 175 ಕೇಸುಗಳನ್ನು ವಾಪಸ್ ಪಡೆದಿದ್ದರು. ಬಳಿಕ ಈಚೆಗೆ ಅನೇಕ ಬಾರಿ ಹಿಂದೂ ಸಂಘಟನೆಗಳು, ಮಂದಿರಗಳ ಮೇಲೆ ದಾಳಿ ಆಗಿದೆ. ಆದರೆ, ಕಾಂಗ್ರೆಸ್ಸಿಗರಿಗೆ ಏನೂ ಅನಿಸುತ್ತಿಲ್ಲ. ಸೌಮ್ಯವಾಗಿ ಅವರನ್ನು ನೋಡಿಕೊಂಡಿದ್ದರು” ಎಂದು ಟೀಕಿಸಿದರು.

“ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ಆದ ದಾಳಿ ವೇಳೆ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಹಲವಾರು ಪೊಲೀಸ್ ಅಧಿಕಾರಿಗಳ ಜೀವಹಾನಿ ಆಗುತ್ತಿತ್ತೆಂದು ಪೊಲೀಸ್ ಅಧಿಕಾರಿಗಳೇ ತಿಳಿಸಿದ್ದರು. ಯುಎಪಿಎ ಕಾನೂನಿನಡಿ ಇದ್ದ ಕೇಸುಗಳನ್ನು ಹಿಂತೆಗೆದುಕೊಂಡಿದ್ದಾರೆ. ಕಾಂಗ್ರೆಸ್ಸಿನ ದಲಿತ ಶಾಸಕನ ಮನೆಯನ್ನು ಸುಟ್ಟು ಹಾಕಿದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಕೇಸುಗಳನ್ನು ಹಿಂಪಡೆಯಲು ಮುಂದಾಗಿದ್ದಾರೆ” ಎಂದು ದೂರಿದರು.

ಕೇಂದ್ರ ಸಚಿವ ವಿ.ಸೋಮಣ್ಣ, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಮಾಜಿ ಸಂಸದ ಪ್ರತಾಪಸಿಂಹ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಮೊದಲಾದ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...