ಯಾರೇ ವಿರೋಧ ಮಾಡಿದರೂ ನೀರಿನ ದರ ಏರಿಕೆ ಅನಿವಾರ್ಯ: ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

Date:

ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂಎಸ್ಎಸ್‌ಬಿ ಕಷ್ಟ ಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

“ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆಗೆ ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ

“14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ” ಎಂದು ಹೇಳಿದರು.

ನಾನಿರುವ ತನಕ ಖಾಸಗೀಕರಣ ಆಗುವುದಿಲ್ಲ

“ಬಿಡಬ್ಲ್ಯೂಎಸ್ಎಸ್‌ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೇ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ” ಎಂದರು.

ಮೇಕೆದಾಟು: ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಂಬಿಕೆ ಇದೆ

“ನಾನು ಅಧಿಕಾರವಹಿಸಿಕೊಂಡ ತಕ್ಷಣ 6 ಎಂಎಲ್ ಡಿ ನೀರು ಸರಬರಾಜನ್ನು ಹೆಚ್ಚಳ ಮಾಡಲಾಗಿದೆ. ತಮಿಳುನಾಡಿಗೆ ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ಕಾವೇರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ನಮ್ಮಲ್ಲಿ ಮತ್ತೊಂದು ಅಣೆಕಟ್ಟು ಇದ್ದಿದ್ದರೆ ಅವರಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಮೇಕೆದಾಟು ಯೋಜನೆ ನ್ಯಾಯಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ”ಎಂದರು.

“ಕೆಆರ್‌ಎಸ್ ಯಿಂದಲೇ ನೇರವಾಗಿ ನಗರಕ್ಕೆ ನಿಗದಿಯಾದ ನೀರನ್ನು ತರಬಹುದು ಎಂದು ಒಂದಷ್ಟು ಜನ ವರದಿ ಕೊಟ್ಟಿದ್ದಾರೆ. ಶರಾವತಿಯಿಂದ ನೀರು ತರಬೇಕು ಎನ್ನುವ ಆಲೋಚನೆಯಿದೆ. ಅಲ್ಲಿನ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆ ರಾಜಕಾರಣದಿಂದ ಅಲ್ಲಲ್ಲಿ ಬೇರೆ, ಬೇರೆ ಕಡೆ ತಿರುವು ಪಡೆದುಕೊಂಡಿದೆ. ಇದನ್ನೂ ಸಹ ಒಂದು ಹಂತಕ್ಕೆ ತಲುಪಿಸಿದ್ದೇನೆ. ಕಾವೇರಿ 5 ನೇ ಹಂತದ ಕಾಮಗಾರಿಗೆ ನಿಂತಿದ್ದು ಮತ್ತೆ ಚಾಲನೆ ಮಾಡಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...