ಸಿಂಧೂ ಜಲ ಒಪ್ಪಂದ | ನೀರು ಸಂಘರ್ಷವಲ್ಲ, ಶಾಂತಿಯ ಸೇತುವೆಯಾಗಿರಬೇಕು: ಮೆಹಬೂಬಾ ಮುಫ್ತಿ

Date:

ಪಹಲ್ಗಾಮ್ ಭಯೋತ್ಪಾದಕ ದಾಳಿ ಬೆನ್ನಲ್ಲೇ ಭಾರತವು ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿದಿದೆ. ಇದು ಜಮ್ಮು ಕಾಶ್ಮೀರದಲ್ಲಿ ಮಿಶ್ರ ಪ್ರತಿಕ್ರಯೆಯನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನ್ಯಾಷನಲ್ ಕಾನ್ಫೆರೆನ್ಸ್ ಎಂದಿಗೂ ಒಪ್ಪಂದವನ್ನು ಬೆಂಬಲಿಸಿಲ್ಲ ಎಂದು ಹೇಳಿಕೊಂಡಿದ್ದಾರೆ. ಇನ್ನೊಂದೆಡೆ “ನೀರು ಸಂಘರ್ಷವಲ್ಲ, ಶಾಂತಿಯ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು” ಎಂದು ವಿರೋಧ ಪಕ್ಷದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಈ ಒಪ್ಪಂದ ಅಮಾನತುಗೊಂಡ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಸಿಎಂ, “ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಾವು ಎಂದಿಗೂ ಸಿಂಧೂ ಜಲ ಒಪ್ಪಂದದ ಪರವಾಗಿರಲಿಲ್ಲ. ಅಮಾನತುಗೊಂಡಿರುವ ಈ ಒಪ್ಪಂದವು ಜಮ್ಮು ಕಾಶ್ಮೀರದ ಜನರಿಗೆ ಅತ್ಯಂತ ಅನ್ಯಾಯ ಮಾಡಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಕಾಶ್ಮೀರದ ಪಕ್ಷಗಳು, ಸಂಘಟನೆಗಳಿಂದ ಖಂಡನೆ; ಸಂವೇದನೆ ಮರೆತ ಮಾಧ್ಯಮಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಮೆಹಬೂಬಾ ಮುಫ್ತಿ ಅವರು, “ನಮ್ಮ ಜಲ ಸಂಪನ್ಮೂಲಗಳನ್ನು ಸಂಪೂರ್ಣವಾಗಿ ಬಳಸಲು ಸಾಧ್ಯವಾಗದ ಕಾರಣ ನಾವು ಒಪ್ಪಂದದ ಕೆಟ್ಟ ಸಂತ್ರಸ್ತರು. ಅದಕ್ಕಾಗಿಯೆ ಪಿಡಿಪಿ ಈ ನಷ್ಟಗಳಿಗೆ ಪರಿಹಾರ ಮತ್ತು ನಮ್ಮ ವಿದ್ಯುತ್ ಯೋಜನೆಗಳ ವರ್ಗಾವಣೆಯನ್ನು ಒತ್ತಾಯಿಸುತ್ತದೆ” ಎಂದು ಹೇಳಿದರು.

“ಆದರೂ ನಮ್ಮ ಸಂಪನ್ಮೂಲಗಳು ಶಾಂತಿಯನ್ನು ತರಬೇಕೆಂದು ನಾವು ಬಯಸುತ್ತೇವೆ. ಯಾಕಂದರೆ ಅದು ಭಿನ್ನಾಭಿಪ್ರಾಯ ಅಥವಾ ಯುದ್ಧಕ್ಕೆ ಕಾರಣವಾಗಬಾರದು ಎಂದು ನಾನು ಭಾವಿಸುತ್ತೇನೆ. ಉಳಿದದ್ದು ಭಾರತ ಸರ್ಕಾರಕ್ಕೆ ಬಿಟ್ಟದ್ದು. ಆದರೆ ನಮ್ಮ ದೇಶ ಮತ್ತು ಪಾಕಿಸ್ತಾನದ ನಡುವಿನ ದ್ವೇಷದ ಅತ್ಯಂತ ಕೆಟ್ಟ ಬಲಿಪಶುವಾಗಿರುವ ಕಾಶ್ಮೀರಿಯಾಗಿ ಇದು ನಮ್ಮ ಅಭಿಪ್ರಾಯ” ಎಂದು ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಒಟ್ಟು 28 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಇದಾದ ಬೆನ್ನಲ್ಲೇ ಉಭಯ ದೇಶಗಳ ನಡುವೆ ಉದ್ವಿಗ್ನತೆ ಇನ್ನಷ್ಟೂ ಹೆಚ್ಚಾಗಿದೆ.

ಭಾರತ ಬುಧವಾರ 1960ರ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ನಡೆದ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಇದು ದೀರ್ಘಕಾಲದ ಒಪ್ಪಂದವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...