ವಯನಾಡ್ ಉಪಚುನಾವಣೆ | ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ಸ್ಮೃತಿ ಇರಾನಿ ಕಣಕ್ಕೆ?

Date:

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ರಾಯ್‌ ಬರೇಲಿಯನ್ನು ಉಳಿಸಿಕೊಂಡಿರುವ ರಾಹುಲ್, ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರಿಂದ ತೆರವಾದ ವಯನಾಡ್‌ನಲ್ಲಿ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಿಂದ ರಾಹುಲ್ ಸಹೋದರಿ, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿದಿದ್ದಾರೆ. ಇದೀಗ, ಪ್ರಿಯಾಂಕಾ ವಿರುದ್ಧ ಅಮೇಥಿಯಲ್ಲಿ ಸೋಲುಂಡ ಮಾಜಿ ಸಚಿವೆ ಸ್ಮೃತಿ ಇರಾನಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

1978ರಲ್ಲಿ, ಇಂದಿರಾ ಗಾಂಧಿಯವರು ಕರ್ನಾಟಕದ ಚಿಕ್ಕಮಗಳೂರಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ರಾಜಕೀಯ ಮರುಜನ್ಮ ಪಡೆದಿದ್ದರು. ನಂತರ 1980ರಲ್ಲಿ ಆಂಧ್ರಪ್ರದೇಶದ ಮೇದಕ್ ಕ್ಷೇತ್ರದಿಂದ ಅವರು ಗೆಲುವು ಸಾಧಿಸಿದ್ದರು. ಅದೇ ರೀತಿ, 1999ರಲ್ಲಿ ಸೋನಿಯಾ ಗಾಂಧಿ ಉತ್ತರ ಪ್ರದೇಶದ ಅಮೇಥಿ ಮತ್ತು ಬಳ್ಳಾರಿಯಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ದಕ್ಷಿಣದಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. ಬಳಿಕ, ಬಳ್ಳಾರಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅಮೇಥಿ ಮತ್ತು ವಯನಾಡ್‌ನಲ್ಲಿ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಅವರು ಸೋತರೂ, ವಯನಾಡ್‌ ಜನರು ರಾಹುಲ್ ಕೈಹಿಡಿದ್ದರು. ದಕ್ಷಣದ ರಾಜ್ಯಗಳು ಗಾಂಧಿ ಕುಟುಂಬದ ಸದಸ್ಯರಿಗೆ ರಾಜಕೀಯವಾಗಿ, ಸಂಸತ್‌ನಲ್ಲಿ ಅಸ್ವಿತ್ವವನ್ನು ಉಳಿಸಿಕೊಳ್ಳಲು ನೆರವಾಗುತ್ತಿವೆ.

ಈವರೆಗೆ ಚುನಾವಣೆಗೆ ಸ್ಪರ್ಧಿಸದಿದ್ದ ಪ್ರಿಯಾಂಕಾ ಗಾಂಧಿ ಈಗ ಮೊದಲ ಬಾರಿಗೆ ಚುನಾವಣಾ ಅಭ್ಯರ್ಥಿಯಾಗಿ ರಾಜಕೀಯ ಅಖಾಡದಲ್ಲಿದ್ದಾರೆ. ಅವರು ವಯನಾಡ್‌ನಲ್ಲಿ ತಮ್ಮ ಚುನಾವಣಾ ರಾಜಕೀಯ ಪ್ರಾರಂಭಿಸಲು ಮುಂದಾಗಿದ್ದಾರೆ. ಅವರ ವಿರುದ್ಧ ಬಿಜೆಪಿ ಸಂಭಾವ್ಯ ಅಭ್ಯರ್ಥಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಊಹಾಪೋಹಗಳು ಚರ್ಚೆಯಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಲ್ಲೂ, ಗಮನಾರ್ಹವಾಗಿ, ಕೇಂದ್ರ ಸಚಿವೆಯಾಗಿ ಸ್ಪರ್ಧಿಸಿದರೂ ಅಮೇಥಿಯನ್ನು ಉಳಿಸಿಕೊಳ್ಳಲಾಗದೆ, ಪರಾಜಿತಗೊಂಡಿದ್ದ ಸ್ಮೃತಿ ಇರಾನಿ ಹೆಸರು ಮುನ್ನೆಲೆಯಲ್ಲಿದೆ.

ಅಂದಹಾಗೆ, ಬಿಜೆಪಿ ಆಶ್ಚರ್ಯಕರವಾಗಿ ಮುಖ್ಯಮಂತ್ರಿಗಳನ್ನು ಬದಲಿಸುವುದು, ಅಭ್ಯರ್ಥಿಗಳನ್ನು ಬದಲಿಸುವುದನ್ನು ನಿರಂತವಾಗಿ ಮಾಡುತ್ತಲೇ ಬಂದಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಎಲ್ಲಿಂದಲೋ, ಯಾರನ್ನೋ ತಂದು ಕಣಕ್ಕಿಳಿಸುವ ನಿರ್ಧರಗಳನ್ನು ಹಲವು ಬಾರಿ ಬಿಜೆಪಿ ತೆಗೆದುಕೊಂಡಿದೆ. 1999ರಲ್ಲಿ ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಸ್ಪರ್ಧಿಸಿದ್ದಾಗ, ಅವರ ವಿರುದ್ಧ ಸುಷ್ಮಾ ಸ್ವರಾಜ್ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಆದರೆ, ಸುಷ್ಮಾ ಸ್ವರಾಜ್ ಸೋಲುಂಡಿದ್ದರು.

ಅದೇ ರೀತಿ, ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಗೋವಿಂದರಾಜ ನಗರದಿಂದ ವಿ ಸೋಮಣ್ಣ ಅವರನ್ನು ಹೊತ್ತೊಯ್ದು ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲೂ, ಆರ್ ಅಶೋಕ್ ಅವರನ್ನು ಪದ್ಮನಾಭನಗರದ ಜೊತೆಗೆ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರದಲ್ಲೂ ಕಣಕ್ಕಿಳಿಸಿತ್ತು. ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳೇ ತಮ್ಮ ಮತಗಳನ್ನು ಬದಲಿಸುವಂತೆ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿಸಿತ್ತು.

ಬಿಜೆಪಿಯ ಇಂತಹ ತಂತ್ರಗಳು ಹೆಚ್ಚಿನ ಬಾರಿ ಸೋತಿದ್ದರೂ, ಕೆಲವು ಬಾರಿ ಯಶಸ್ಸು ಕಂಡಿವೆ. ಹೀಗಾಗಿ, ತಮಗೆ ಸರಿಯಾದ ನೆಲೆಯೇ ಇಲ್ಲದ ಕೇರಳದಲ್ಲಿ ಬಿಜೆಪಿ, ಉತ್ತರ ನಾಯಕಯನ್ನು ತಂದು ಕಣಕ್ಕಿಳಿಸಿದರೂ, ಕಾಂಗ್ರೆಸ್ ವಿರುದ್ಧ ಗೆಲುವು ಸುಲಭವಲ್ಲ ಎಂಬುದು ಸ್ಪಷ್ಟವಾಗಿದೆ. ಅದಾಗ್ಯೂ, ಕಾಂಗ್ರೆಸ್‌/ಪ್ರಿಯಾಂಕಾ ಅವರನ್ನು ಸೋಲಿಸಲು, ಮತಗಳನ್ನು ವಿಭಜಿಸಲು ಯಾವುದೇ ರೀತಿಯ ತಂತ್ರವನ್ನು ಬಿಜೆಪಿ ಎಣೆಯಬಹುದು. ಅದಾಗ್ಯೂ, ಸ್ಮೃತಿ ಇರಾನಿ ವಯನಾಡ್‌ಗೆ ಬಂದರೆ, ಕಾಂಗ್ರೆಸ್‌ಗೆ ಯಾವುದೇ ಪೆಟ್ಟಾಗಲಾರದು ಎಂಬುದು ಕೂಡ ಚರ್ಚೆಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...