ನಮ್ಮ ಪಕ್ಷದವರಿಂದಲೇ ನಮ್ಮ ತೇಜೋವಧೆಯಾಗುತ್ತಿದೆ; ಡಿವಿಎಸ್‌ ಆಕ್ರೋಶ

Date:

  • ಸ್ವಪಕ್ಷೀಯರ ವಿರುದ್ದವೇ ಕಿಡಿ ಕಾರಿದ ಮಾಜಿ ಸಿಎಂ ಸದಾನಂದಗೌಡ
  • ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಕ್ಕೆ ಆಗ್ರಹ

ನನ್ನನ್ನೂ ಒಳಗೊಂಡಂತೆ ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸ ನಮ್ಮ ಪಕ್ಷದವರಿಂದಲೇ ಆಗುತ್ತಿರುವುದು ಬೇಸರದ ಸಂಗತಿ ಎಂದು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದರು.

ಇಂದು (ಜೂನ್‌ 6) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿದೆ. ಈ ಹಂತದಲ್ಲಿರುವಾಗಲೇ ಸಂಸದರನ್ನು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಮಾನಹಾನಿ ಹಿಂದೆ ಯಾರಿದ್ದಾರೋ ಗೊತ್ತಿಲ್ಲ” ಎಂದರು.

“ಆಯ್ಕೆಯಾಗಿರುವ 25 ಸಂಸದರ ಪೈಕಿ 13 ಮಂದಿ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಮಾಡಿಲ್ಲ. ಇನ್ನೂ ಕೆಲ ಸಂಸದರು ಅನಾರೋಗ್ಯ ಪೀಡಿತರಾಗಿದ್ದಾರೆ.‌ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬ ರೀತಿಯಲ್ಲಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ಮತದಾರರಿಂದ ಆಯ್ಕೆಗೊಂಡ ಸಂಸದರನ್ನು ತೇಜೋವಧೆ ಮಾಡುವ ಕೆಲಸ‌ ಎಷ್ಟು ಸರಿ? ಈ ಬಗ್ಗೆ ನನಗೆ 12 ಮಂದಿ ಸಂಸದರು ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯ ಬಿಜೆಪಿ ನಾಯಕರು‌ ಈ ಬಗ್ಗೆ ಇತಿಶ್ರೀ ಹಾಡಬೇಕಿದೆ” ಎಂದು ಒತ್ತಾಯಿಸಿದ್ದಾರೆ.ಡಿವಿಎಸ್‌ ಲೆಟರ್“ಹಲವು ವಿಚಾರಗಳ ಬಗ್ಗೆ ತ್ವರಿತವಾಗಿ ಪ್ರಕಟಣೆ ಅಥವಾ ಸ್ಪಷ್ಟನೆ ನೀಡುವ ಬಿಜೆಪಿ ನಾಯಕರು, 13 ಮಂದಿ ಸಂಸದರ ಮಾನಹಾನಿ ಆಗುತ್ತಿರುವುದು ನೋಡಿಯೂ ಸ್ಪಷ್ಟನೆ ನೀಡದಿರುವುದು ತರವಲ್ಲ. ಇದರಿಂದ ರಾಜ್ಯಕ್ಕೆ ಬೇರೆ ರೀತಿಯ ಸಂದೇಶ ಹೋಗಲಿದೆ. ಆಗುತ್ತಿರುವ ಗೊಂದಲವನ್ನು ಕೂಡಲೇ ಪರಿಹರಿಸುವ ಕೆಲಸವನ್ನು ಸಂಬಂಧಪಟ್ಟ ನಾಯಕರು ಮಾಡಬೇಕಿದೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ಸೋಲು ನಮಗೇನು ಹೊಸದಲ್ಲ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕೂಡ ಸೋಲು ಕಂಡಿದ್ದರು. ಅನಂತರ ಗೆದ್ದಿದ್ದು ಇತಿಹಾಸ. ಸೋಲಿನಿಂದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ನಮಗೆ ತಾತ್ಕಾಲಿಕ ಹಿನ್ನೆಡೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? : ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ

“ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಮತದಾರರು ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ. ಆಗಿರುವ‌ ಲೋಪ ಸರಿಪಡಿಸಿಕೊಳ್ಳಬೇಕಿದೆ. ಸೋಲು ಕಂಡಾಗ ಆತ್ಮಾವಲೋಕನ ಮಾಡಿಕೊಳ್ಳುವುದು ವಾಡಿಕೆಯಿದೆ. ಇಂದಿನ ದಿನಗಳಲ್ಲಿ ಆತ್ಮಾಲೋಕನ ಮಾಡಿಕೊಳ್ಳುವುದಕ್ಕೆ ಆತ್ಮಗಳೇ ಇಲ್ಲದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕಾರ್ಯಕರ್ತರ ಮನೋಬಲ ಕುಸಿಯದಂತೆ ನೋಡಿಕೊಳ್ಳುವುದು ರಾಜ್ಯ ಬಿಜೆಪಿ ನಾಯಕರ ಕೆಲಸವಾಗಿದ್ದು, ಅದನ್ನು ಮಾಡುವ ಕೆಲಸ ಆಗಬೇಕಿದೆ. ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಕಾರ್ಯವೈಖರಿ ಬಗ್ಗೆ ಕಾದು ನೋಡಿ ಅನಂತರವಷ್ಟೇ ಮುಂದಿನ ಹೋರಾಟಗಳಿಗೆ ಕಾರ್ಯಕರ್ತರನ್ನು ಅಣಿಗೊಳಿಸುವ ಕೆಲಸ ಮಾಡಬೇಕಿದೆ. ಅಲ್ಲಿಯವರೆಗೂ ತಾಳ್ಮೆಯಿಂದ‌ ಇರುಬೇಕು” ಎಂದು ಡಿವಿಎಸ್ ಕಿವಿಮಾತು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...