ಆರ್‌ಎಸ್‌ಎಸ್‌ ಅನ್ನು ಎದುರಿಸಲು ನಾವು ಸಿದ್ಧ: ಸಿ.ಎಂ ಸಿದ್ದರಾಮಯ್ಯ

Date:

ಆ‌ರ್‌ಎಸ್ಎಸ್ ಹೇಳಿದಂತೆ ಬಿಜೆಪಿ ಕೇಳುತ್ತದೆ. ನಾವು ಆರ್‌ಎಸ್‌ಎಸ್‌ನವರಿಗೆ ಹೆದರುವವರಲ್ಲ. ನಮ್ಮ ಪಕ್ಷ ಅವರನ್ನು ಎದುರಿಸಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಪ್ರತಿಪಕ್ಷದ ನಾಯಕರ ವಿರುದ್ಧ ಗುಡುಗಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುತ್ತ, “ದಲಿತರ, ಹಿಂದುಳಿದವರ ಏಳಿಗೆ ಸಹಿಸದ ಬಿಜೆಪಿಗೆ ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎನ್ನುವ ದುರುದ್ದೇಶವಿದೆ.1942 ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು ನೀವು. ನೀವು ಬ್ರಿಟಿಷರ ಏಜೆಂಟರು” ಎಂದು ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ಸದಸ್ಯರು ಯಾವಾಗ ರಾಜೀನಾಮೆ ನೀಡುತ್ತಾರೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಯ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಸೋಲಿಗೆ ಸಾವರ್ಕರ್ ಕಾರಣರಾದರು ಎಂದು ಸಾಬೀತುಪಡಿಸುವ ದಾಖಲೆಯನ್ನು ನಾವು ಹಾಜರುಪಡಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಘೋಷಿಸಿದರು.

ಸಚಿವ ಪ್ರಿಯಾಂಕ್‌ ಖರ್ಗೆ ಎದ್ದು ನಿಂತು, “ಜನವರಿ 18, 1952ರಂದು, ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಪರಿಚಯಸ್ಥರಿಗೆ ಪತ್ರ ಬರೆದು, ವಿನಾಯಕ ದಾಮೋದರ್ ಸಾವರ್ಕರ್ ತಮ್ಮ ಚುನಾವಣಾ ಸೋಲಿಗೆ ಹೇಗೆ ಪಾತ್ರ ವಹಿಸಿದ್ದಾರೆ ಎಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ತಮ್ಮ ಪತ್ರದಲ್ಲಿ, ಡಾ. ಅಂಬೇಡ್ಕರ್ ಅವರು ಸಾವರ್ಕರ್‌ ತಮ್ಮ ಸೋಲಿಗೆ ಕಾರಣವೆಂದು ನಂಬಿದ ಅಂಶಗಳನ್ನು ವಿವರಿಸಿದರು, ಸಾವರ್ಕರ್ ಅವರ ಪ್ರಭಾವ ಮತ್ತು ರಾಜಕೀಯ ಕುಶಲತೆಯನ್ನು ತಮ್ಮ ಪತ್ರದಲ್ಲಿ ಎತ್ತಿ ತೋರಿಸಿದ್ದರು. ಆ ಪತ್ರ ಇಲ್ಲಿದೆ. ಬಿಜೆಪಿ ಸದಸ್ಯರು ಯಾವಾಗ ರಾಜೀನಾಮೆ ನೀಡುತ್ತಾರೆ” ಎಂದು ಸವಾಲು ಹಾಲಿದರು.

ಜನಾದೇಶದಿಂದ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ: ಸಿ.ಎಂ

ದಲಿತ ಸಮುದಾಯಕ್ಕೆ ಗುಜರಾತ್ ಬಿಜೆಪಿ ಸರ್ಕಾರ 2.38% ರಷ್ಟು, ಮಹಾರಾಷ್ಟ್ರ 3.6% ಹಾಗೂ ಕೇಂದ್ರ ಸರ್ಕಾರ ಕೇವಲ 2.87% ಮಾತ್ರ ಹಣ ಬಜೆಟ್ ನಲ್ಲಿ ತೆಗೆದಿಟ್ಟಿದೆ. ಆದರೆ ಕಾಂಗ್ರೆಸ್ ಸರ್ಕಾರ ಶೇ.7.46 ರಷ್ಟು ಹಣ ಮೀಸಲಿಟ್ಟು ಖರ್ಚು ಮಾಡಿದೆ ಎಂದು ಸಿ.ಎಂ ವಿವರಿಸಿದರು.

ಬಿಜೆಪಿ ಎಸ್.ಸಿ. ಪಿ / ಟಿ ಎಸ್ ಪಿ ಕಾಯ್ದೆಯಡಿ 5 ವರ್ಷಗಳಲ್ಲಿ 35,464 ಕೋಟಿ ಅನುದಾನ ಹಂಚಿಕೆ ಮಾಡಿ 22,480 ಕೋಟಿ ವೆಚ್ಚ ಮಾಡಿದ್ದಾರೆ. ಈ ಕಾಯ್ದೆ ಬಂದದ್ದಕ್ಕೆ ಜನಸಂಖ್ಯೆ ಅನುಸಾರವಾಗಿ ಹಣ ವೆಚ್ಚ ಮಾಡಬೇಕು. 17.15% ಪ.ಜಾತಿ, ಪ.ವರ್ಗ 6.95% ಎರಡೂ ಸೇರಿ 24.1% ಇದ್ದಾರೆ. ಯೋಜನೆಯ ಹಣದಲ್ಲಿ 24.1 % ಕೂಡಲೇಬೇಕು. ಮೊದಲು ಅಷ್ಟು ಖರ್ಚು ಮಾಡುತ್ತಿರಲಿಲ್ಲ. ಒಂದು ವೇಳೆ ಹಣವನ್ನು ಖರ್ಚು ಮಾಡದೆ ಹೋದರೆ ಅಧಿಕಾರಿಯ ಮೇಲೆ ಕ್ರಮ ತೆಗೆದುಕೊಳ್ಳಬಹುದು. ಈ ವರ್ಷ ಖರ್ಚು ಮಾಡಲು ಸಾಧ್ಯವಾಗದಿದ್ದರೆ ಮುಂದಿನ ವರ್ಷಕ್ಕೆ ಅದು ಸೇರಿಕೊಳ್ಳುತ್ತದೆ. 39,121 ಕೋಟಿ ಕಳೆದ ವರ್ಷ ಮೀಸಲಿಟ್ಟಿದ್ದು, ಈ ಸಾಲಿಗೆ 42,018 ಕೋಟಿ ಮೀಸಲಿಡಲಾಗಿದೆ. ಕಾಯ್ದೆಯನ್ನು ಸಂವಿಧಾನದ ಆಶಯಗಳನ್ನು ಈಡೇರಿಸಲೆಂದು ರೂಪಿಸಲಾಗಿದೆ” ಎಂದರು.

“ಕೇಂದ್ರ ಸರ್ಕಾರ ಇಂದಿನವರೆಗೆ ಎಸ್.ಸಿ. ಪಿ / ಟಿ ಎಸ್ ಪಿ ಕಾಯ್ದೆಯನ್ನು ಜಾರಿ ಮಾಡಿಲ್ಲ. ಕರ್ನಾಟಕ ಮಾದರಿಯಲ್ಲೇ ಕೇಂದ್ರ ಸರ್ಕಾರ ಎಸ್.ಸಿ. ಪಿ/ ಟಿ ಎಸ್ ಪಿ ಕಾಯ್ದೆ ಜಾರಿ ಮಾಡಲಿ ಎಂದು ಸರ್ವಾನುಮತದ ನಿರ್ಣಯ ಮಾಡೋಣ” ಎಂದು ಕರೆ ನೀಡಿದರು.

“2019-23 ಸಾಲಿನಲ್ಲಿ ಈವರೆಗೆ ಅದಿಕಾರದಲ್ಲಿದ್ದ ಬಿಜೆಪಿ ಡೀಮ್ಡ್ ವೆಚ್ಚದಲ್ಲಿ ಏಕೆ ವೆಚ್ಚ ಮಾಡಲಿಲ್ಲ? ದಲಿತ ಸಂಘಟನೆಗಳು ಮೊದಲಿನಿಂದಲೂ ಬೇಡಿಕೆ ಯಿಟ್ಟಿರುವಂತೆ ನಮ್ಮ ಅಧಿಕಾರಾವಧಿಯಲ್ಲಿ ಕಾಯ್ದೆಯಲ್ಲಿ 7ಡಿ ತೆಗೆದು ಹಾಕಲಾಯಿತು.
ಬಿಜೆಪಿಯವರು ಏಕೆ ತೆಗೆಯಲಿಲ್ಲ” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

“ಇಡೀ ದೇಶದಲ್ಲಿ ಎಸ್ ಸಿ/ ಎಸ್ ಟಿ ಗಳ ಜನಸಂಖ್ಯೆ 2011ರ ಜನಗಣತಿ ಪ್ರಕಾರ ಶೇ.16.6 ಎಸ್.ಸಿ ಹಾಗೂ ಶೇ.8.6 ಎಸ್.ಟಿ ಇದ್ದು, ಎರಡೂ ಸೇರಿ ಒಟ್ಟು ಶೇ.27.2 ಇದ್ದಾರೆ. ಇವರ ಜನಸಂಖ್ಯೆಗನುಗುಣವಾಗಿ ಬಿಜೆಪಿ ಯವರು ಖರ್ಚು ಮಾಡಲಿಲ್ಲ. ಕೇವಲ ಶೇ.2.87 ಖರ್ಚು ಮಾಡಿದ್ದಾರೆ. ದೇಶದಲ್ಲಿ ಪರಿ.ಜಾ ಶೇ.16.6, ಪಂ.ವರ್ಗ ಶೇ.8.6 ಸೇರಿ ಒಟ್ಟು ಶೇ.25.2 ಇದ್ದು ಕೇವಲ ಶೇ.2.87 ವೆಚ್ಚ ಮಾಡಿದ್ದಾರೆ. 7ಡಿ ಬಗ್ಗೆ ಬಹಳ ದಿನಗಳಿಂದ ಒತ್ತಾಯವಿತ್ತು. ಆದ್ದರಿಂದ ಕಳೆದ ವರ್ಷ ತಿದ್ದುಪಡಿ ತಂದು ತೆಗೆದುಹಾಕಿದೆವು
7ಸಿ ತೆಗೆದುಹಾಕಿಲ್ಲ” ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...