ಬೆಂಗಳೂರು ಉತ್ತರಕ್ಕೆ ಶೋಭಕ್ಕ ಬೇಡ: ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೆ ‘ಗೋ ಬ್ಯಾಕ್’ ಅಭಿಯಾನ ಆರಂಭ

Date:

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್ ಅಭಿಯಾನ, ಟಿಕೆಟ್ ಘೋಷಣೆಯಾದ ಮೇಲೂ ಮುಂದುವರಿದಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷೀಯರಿಂದಲೇ ಎದುರಾದ ಗೋ ಬ್ಯಾಕ್ ಅಭಿಯಾನದ ಫಲಾನುಭವಿಯಾಗುವ ನಿರೀಕ್ಷೆಯಲ್ಲಿದ್ದ ಸಿ ಟಿ ರವಿ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೀರು ಎರಚಿತ್ತು. ಆದರೆ ಇದು ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ವರದಾನವಾಗಿದೆ.

ಕಳೆದ ಕೆಲವು ತಿಂಗಳಿನಿಂದ ಶೋಭಾ ಕರಂದ್ಲಾಜೆ ಎಲ್ಲೇ ಹೋದರೂ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಎದುರಾಗಿತ್ತು. ಆದಾಗ್ಯೂ, ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಕೃಪಕಟಾಕ್ಷದಿಂದ ಬೆಂಗಳೂರು ಉತ್ತರದಿಂದ ಶೋಭಾ ಅವರಿಗೆ ಟಿಕೆಟ್ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಟಿಕೆಟ್ ಘೋಷಣೆ ಬೆನ್ನಲ್ಲೇ ರೊಚ್ಚಿಗೆದ್ದಿರುವ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಬೆಂಬಲಿಗರು, ನಮ್ಮ ಕ್ಷೇತ್ರಕ್ಕೆ ಶೋಭಕ್ಕ ಬೇಡ. ಬೇರೆ ಕ್ಷೇತ್ರದ ಕಸವನ್ನು ತಂದು ನಮ್ಮಲ್ಲಿ ಸುರಿಯಬೇಡಿ ಎನ್ನುತ್ತಾ ‘ಗೋ ಬ್ಯಾಕ್’ ಅಭಿಯಾನ ಆರಂಭಿಸಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ಬಿಜೆಪಿ 2ನೇ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಯಾರಿಗೆಲ್ಲ ಸಿಕ್ಕಿದೆ ಟಿಕೆಟ್?

ಈ ಬಗ್ಗೆ ಮಾತನಾಡಿರುವ ಸ್ಥಳೀಯ ಬಿಜೆಪಿ ಮುಖಂಡರೋರ್ವರು, ”ನಮ್ಮ ಕ್ಷೇತ್ರದ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಬೇಡ. ಅವರು ನಮ್ಮ ಕ್ಷೇತ್ರದವರೂ ಅಲ್ಲ. ಹಾಗಾಗಿ, ಸ್ಥಳೀಯ ಒಕ್ಕಲಿಗ ಸಮುದಾಯದ ಬಿಜೆಪಿ ಮುಖಂಡರಿಗೆ ಆದ್ಯತೆ ನೀಡಿ, ಟಿಕೆಟ್ ಕೊಡಿ. ಅಭ್ಯರ್ಥಿ ಬದಲಾಯಿಸಿ” ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.

“ಮೋದಿ ಗೆಲ್ತಾರೆ, ಬಿಜೆಪಿ ಗೆಲ್ಲಬೇಕು ಅಂದರೆ ಶೋಭಾ ಕರಂದ್ಲಾಜೆ ಹಠಾವೋ, ಬೆಂಗಳೂರು ಉತ್ತರ ಬಿಜೆಪಿ ಬಚಾವೋ” ಎಂಬಿತ್ಯಾದಿ ಪೋಸ್ಟರ್‌ಗಳನ್ನು ಹಿಡಿದುಕೊಂಡು, ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.

ಹಗ್ಗಜಗ್ಗಾಟದಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಶೋಭಾ ಕರಂದ್ಲಾಜೆ!

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ಬಾರಿ ಸಂಸದೆಯಾಗಿದ್ದರೂ, ಕಾರ್ಯ ವೈಖರಿಯಿಂದ ಅಸಮಾಧಾನಗೊಂಡಿದ್ದ ಬಿಜೆಪಿ ಕಾರ್ಯಕರ್ತರು, ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ‘ಗೋ ಬ್ಯಾಕ್ ಶೋಭಕ್ಕ’ ಅಭಿಯಾನ ಆರಂಭಿಸಿದ್ದರು. ಈ ಅಸಮಾಧಾನದ ಬೆನ್ನಲ್ಲೇ, ಡಿ ವಿ ಸದಾನಂದ ಗೌಡ ಎರಡು ಬಾರಿ ಪ್ರತಿನಿಧಿಸಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಿ ಟಿ ರವಿ ಹೆಸರು ಕೇಳಿ ಬಂದಿತ್ತಾದರೂ, ಕೊನೆಗೆ ವಿಧಾನ ಪರಿಷತ್‌ನ ವಿಪಕ್ಷ ನಾಯಕ, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದೆ. ಇದು ಅಚ್ಚರಿ ಮೂಡಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...