ಸಮಾಜದ ಗೌರವಕ್ಕಾಗಿ ದೇವೇಗೌಡರ ಅಪಮಾನ ಸಹಿಸಿಕೊಂಡಿದ್ದೇವೆ: ಮಾಜಿ ಸಂಸದ ಡಿ ಕೆ ಸುರೇಶ್‌

Date:

ದೇವೇಗೌಡರು ಬಾಲಗಂಗಾಧರನಾಥ ಸ್ವಾಮೀಜಿಗಳನ್ನೇ ಬಿಡಲಿಲ್ಲ, ಇನ್ನು ಈ ಸಮಾಜದ ಬೇರೆಯವರನ್ನು ಬಿಡುತ್ತಾರಾ. ಜೆಡಿಎಸ್ ಕಾರ್ಯಕರ್ತರೇ ಜಾತಿ ವ್ಯಾಮೋಹಕ್ಕೆ ಹೋಗಬೇಡಿ. ಯೋಗೇಶ್ವರ್ ಕೂಡ ಒಕ್ಕಲಿಗನೇ. ನಾನು ಒಕ್ಕಲಿಗನೇ. ಬಾಲಕೃಷ್ಣ ಅವರೂ ಒಕ್ಕಲಿಗರೇ. ದೇವೇಗೌಡರು, ಕುಮಾರಸ್ವಾಮಿ ಅವರು ನಮ್ಮನ್ನು ಕಳ್ಳರು, ಸುಳ್ಳರು ಎಂದು ಹೇಳುತ್ತಿದ್ದಾರೆ. ನಾವು ಅವರ ಅಪಮಾನವನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಉತ್ತರ ಕೊಡಬಲ್ಲೆ. ಆದರೆ ಈ ಸಮಾಜದ ಗೌರವಕ್ಕಾಗಿ ನನ್ನ ಮಾತನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಂಡಿದ್ದೇವೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್‌ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡಮಳೂರಿನಲ್ಲಿ ಸೋಮವಾರ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಡಿ.ಕೆ. ಸುರೇಶ್ ಅವರು ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಮತಯಾಚಿಸಿದರು.

“ಚನ್ನಪಟ್ಟಣ ಕ್ಷೇತ್ರದಲ್ಲಿ ನೆಂಟರಂತೆ ಬಂದು ಎಲ್ಲ ಅಧಿಕಾರ ಅನುಭವಿಸಿ, ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದವರು ನೆಂಟರಂತೆ ಹೋಗಲಿ. ನಿಮ್ಮ ಮನೆ ಮಕ್ಕಳಂತೆ ನಾನು, ಸಿ.ಪಿ ಯೋಗೇಶ್ವರ್, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸೇವೆ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ಕ್ಷೇತ್ರದ ಜನರ ಕಷ್ಟ ಕೇಳಲು ಒಂದೇ ಒಂದು ದಿನ ಬರಲಿಲ್ಲ. ಜನರ ಕಷ್ಟ ಕೇಳುವುದಿರಲಿ, ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಮಸ್ಯೆಯನ್ನು ಆಲಿಸಲಿಲ್ಲ. ಅವರು ಸಿಎಂ ಆಗಿದ್ದಾಗ ನಿಮ್ಮ ಕಷ್ಟ ಆಲಿಸಿದ್ದಾರಾ ಎಂದು ಆತ್ಮಸಾಕ್ಷಿಯಿಂದ ಹೇಳಿ ಎಂದು ಆ ಕಾರ್ಯಕರ್ತರಲ್ಲಿ ಕೇಳಲು ಬಯಸುತ್ತೇನೆ. ಅವರ ಬಗ್ಗೆ ನಿಮಗೆ ಇಷ್ಟು ಅಂಧ ಅಭಿಮಾನ ಯಾಕೆ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸುತ್ತಿರುವ ದೇವೇಗೌಡರು, ಪ್ರಜ್ವಲ್ ಕೃತ್ಯ ಖಂಡಿಸುವುದಿಲ್ಲವೇಕೆ?

“ಈ ಉಪಚುನಾವಣೆಗೆ ಬಂದಿರುವ ಕುಮಾರಸ್ವಾಮಿ ಅವರು ಎಲ್ಲಾದರೂ ಈ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರಾ? ಅವರಿಗೆ ಕನಸಲ್ಲೆಲ್ಲಾ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಯೋಗೇಶ್ವರ್, ಸಿದ್ದರಾಮಯ್ಯ ಅವರದ್ದೇ ಕನವರಿಕೆ. ಇವರ ಹೊರತಾಗಿ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದಾರಾ? ಯೋಗೇಶ್ವರ್ ಈ ತಾಲೂಕಿಗೆ ನೀರು ನೀಡಿದ್ದಾರೆ. ನಾವು ಈ ತಾಲೂಕಿಗೆ ವಿದ್ಯುತ್ ನೀಡಿದ್ದೇವೆ, ಗ್ಯಾರಂಟಿ ಯೋಜನೆ ನೀಡಿದ್ದೇವೆ ಎಂದು ಮತ ಕೇಳುತ್ತಿದ್ದೇವೆ” ಎಂದರು.

“ದೇವೇಗೌಡರೇ ನಾನು ಯಾವ ವಿಚಾರ ಮಾತನಾಡಲಿ, ನನಗೆ ಹೃದಯ ಇದೇಯೇ? ಇಲ್ಲವಲ್ಲ? ಕಣ್ಣೀರು ಹಾಕುವವರಿಗೆ ಹೃದಯ ಇರಬೇಕು ಎಂದಿದ್ದೀರಿ. ನಿಮ್ಮ ಹೃದಯ ಯಾವಾಗ ಕೆಲಸ ಮಾಡಬೇಕಿತ್ತು ಗೊತ್ತಾ? ನಿಮ್ಮನ್ನು ಸಾಕಿ ಸಲುಹಿ ರಾಜ್ಯ ಮಟ್ಟದಲ್ಲಿ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಧಾನಮಂತ್ರಿ ಸ್ಥಾನದವರೆಗೂ ಬೆಳೆಸಿದರಲ್ಲಾ ಅಂತಹ ತಾಯಂದಿರ ಮಾನವನ್ನು ನಿಮ್ಮ ಮೊಮ್ಮಕ್ಕಳು ಹಾರಾಜು ಹಾಕುವಾಗ ಕಣ್ಣೀರು ಹಾಕಬೇಕಿತ್ತು. ನನ್ನ ಮೊಮ್ಮಕ್ಕಳು ತಪ್ಪು ಮಾಡಿದ್ದಾರೆ. ನನ್ನನ್ನು ಕ್ಷಮಿಸಿ ಎಂದು ಕೇಳಬೇಕಿತ್ತು. ಆಗ ನಿಮ್ಮ ಆತ್ಮಗೌರವ ಉಳಿದು, ಘನತೆ ಹೆಚ್ಚುತ್ತಿತ್ತು” ಎಂದು ಕುಟುಕಿದರು.

“ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ನಿಮ್ಮ ಸೇವೆ ಮಾಡಲು ಶಕ್ತಿ ನೀಡಿ. ನಾವೆಲ್ಲರೂ ಈ ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡಿ ಈ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುತ್ತೇವೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ 500 ಕೋಟಿ ವಿಶೇಷ ಅನುದಾನ ತಂದು ಅಭಿವೃದ್ಧಿ ಕೆಲಸ ಆರಂಭಿಸಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...