ನ್ಯಾಷನಲ್ ಹೆರಾಲ್ಡ್‌ಗೆ ನಾವು ದುಡಿದ ಆಸ್ತಿಯಿಂದ ಹಣ ಕೊಟ್ಟಿದ್ದೇವೆ: ಡಿ ಕೆ ಶಿವಕುಮಾರ್

Date:

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿ ಕೆ ಸುರೇಶ್, ಡಿ ಕೆ ಶಿವಕುಮಾರ್ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಹೆಸರು ಕೇಳಿ ಬಂದಿರುವ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ” ನ್ಯಾಷನಲ್ ಹೆರಾಲ್ಡ್ ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ‌. ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ. ‌ನಮ್ಮ ಟ್ರಸ್ಟ್‌ ನಿಂದಲೂ ದೇಣಿಗೆ ನೀಡಿದ್ದೇವೆ. ನಾವು ದುಡಿದಂತಹ ಆಸ್ತಿಯಿಂದ ರಾಜಾರೋಷವಾಗಿ ಹಣ ನೀಡಿದ್ದೇವೆ. ನಾವು ಕದ್ದುಮುಚ್ಚಿ ಹಣ ನೀಡಿಲ್ಲ” ಎಂದು ಸ್ಪಷ್ಟಪಡಿಸಿದರು.

ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ನೀವೇ ನೀಡಿದ್ದೀರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಒಬ್ಬ ಮೆಂಟಲ್ ಅವರ ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು. ತಲೆ ಕೆಟ್ಟು ಹೋಗಿದೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಕುರಿತು ಕೇಳಿದಾಗ, “ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ. ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ‘ಬಲಿಷ್ಠರು’ ಬೆತ್ತಲಾಗುವ ಕಾಲ

“ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ ಏಕೆ ಚೆನ್ನೈ ಎಂದು ಕರೆದರು‌. ಗುಲ್ಬರ್ಗಾವನ್ನು ಕಲಬುರ್ಗಿ ಎಂದು ಮರುನಾಮಕರಣ ಮಾಡಲಾಗಿದೆ. ನಮಗೂ ನಮ್ಮದೇ ಆದಂತಹ ಆಸೆ ಇರುತ್ತದೆ. ಅವರಿಗೆ ಏನು ತೊಂದರೆಯಾಗಿದೆ?” ಎಂದು ಪ್ರಶ್ನಿಸಿದರು.

ರಿಯಲ್ ಎಸ್ಟೇಟ್ ಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಹೌದು, ನಮ್ಮ ಹಳ್ಳಿಯ ಜನ ಉದ್ದಾರವಾಗಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು. ನಮ್ಮ ಜನರ ಆಸ್ತಿ ಮೌಲ್ಯ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ಹೊರಗಡೆ ದೇಶದಿಂದ ಜನರು ಬಂದು ಬಂಡವಾಳ ಹೂಡಿಕೆ ಮಾಡಬೇಕು. ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಆಸೆ’ ಎಂದರು.

“ಸಂಸತ್ ಕ್ಷೇತ್ರವನ್ನು ಮೊದಲು ಕನಕಪುರ ಎಂದು ಕರೆಯಲಾಗುತ್ತಿತ್ತು. ಅದನ್ನು ಬೆಂಗಳೂರು ಗ್ರಾಮಾಂತರ ಎಂದು ಆನಂತರ ಏಕೆ ಮಾಡಿದರು? ರಾಮನಗರದ ಹೆಸರು ಬದಲಾವಣೆ ಮಾಡುತ್ತಿಲ್ಲ. ಜತೆಗೆ ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ. ನಾವು ಕೇವಲ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...