ಬಿಜೆಪಿ ವಿದ್ಯುತ್ ದುರುಪಯೋಗ ಮಾಡುವಂತೆ ಕುಮ್ಮಕ್ಕು ಕೊಡುತ್ತಿದೆ, ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲವೆಂಬ ಭರವಸೆ ಇದೆ : ಸಿಎಂ

Date:

  • ದುಂದುವೆಚ್ಚ ಪ್ರಕೃತಿ ವಿರೋಧಿ, ಜನ ವಿರೋಧಿ
  • ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ವಿಪಕ್ಷ ಬಿಜೆಪಿ ಜನರಿಗೆ ವಿದ್ಯುತ್ ದುಂದುವೆಚ್ಚ ಹಾಗೂ ದುರುಪಯೋಗ ಮಾಡುವಂತೆ ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು,ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ 2023ರ ಕಾರ್ಯಕ್ರಮ ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ರಾಜ್ಯದ ಜನ ನೀರು, ಗಾಳಿ, ಹಾಗೂ ವಿದ್ಯುತ್ ಬಳಕೆಯನ್ನು ಹಿತಮಿತವಾಗಿ ಬಳಕೆ ಮಾಡಬೇಕು. ಇವುಗಳ ದುರುಪಯೋಗ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರು, ಗಾಳಿ, ವಿದ್ಯುತ್ ಯಾವುದನ್ನೂ ದುಂದುವೆಚ್ಚ ಮಾಡಬಾರದು. ದುಂದುವೆಚ್ಚ ಎನ್ನುವುದು ಪ್ರಕೃತಿ ವಿರೋಧಿ, ಜನ ವಿರೋಧಿ ಮತ್ತು ಪರಿಸರ ವಿರೋಧಿಯಾದದ್ದು ಎಂದು ಅವರು ತಿಳಿಸಿದರು.

ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದ ಸಿಎಂ, ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ.

ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ ಎಂದರು.ಪರಿಸರ ಪ್ರಶಸ್ತಿ ವಿತರಣೆ

ಈ ಸುದ್ದಿ ಓದಿದ್ದೀರಾ?:ಮೊದಲ ಜಿಲ್ಲಾ ಪ್ರವಾಸ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ ಎಂದು ಕಿಡಿಕಾರಿದರು. ಬಿಜೆಪಿ ನಡೆ ಜನವಿರೋಧಿಯಾಗಿದೆ. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದರು.

ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...