ಯಾರ ಮುಂದೆಯೂ ತಲೆಬಾಗದೆ ಇರುವುದನ್ನು ಇರಾನ್‌ನಿಂದ ಕಲಿಯಬೇಕು: ಸಂಜಯ್ ರಾವತ್

Date:

ಸ್ವಾಭಿಮಾನ ಮತ್ತು ಧೈರ್ಯ ಎಂದರೆ ಏನು ಎಂಬುದನ್ನು ಇರಾನ್ ತೋರಿಸಿದೆ. ಯಾರ ಮುಂದೆಯೂ ತಲೆಬಾರದೆ ಇರುವುದನ್ನು ಭಾರತವು ಇರಾನ್‌ನಿಂದ ಕಲಿಯಬೇಕು ಎಂದು ಶಿವಸೇನೆ (ಉದ್ಧವ್ ಬಣ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಅಮೆರಿಕ ದಾಳಿಗೆ ಪ್ರತ್ಯುತ್ತರವಾಗಿ ಸೋಮವಾರ ರಾತ್ರಿ ಕತಾರ್‌ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ಇರಾನ್ ದಾಳಿ ಮಾಡಿತು. ಟ್ರಂಪ್ ಏಕಪಕ್ಷೀಯವಾಗಿ ಕದನ ವಿರಾಮ ಘೋಷಿಸಿದ್ದನ್ನು ಅಲ್ಲಗಳೆದು, ಇಸ್ರೇಲ್ ಮೇಲೆ ದಾಳಿ ಮಾಡಿ ಬಳಿಕ ಇರಾನ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿತು. ಇದೆಲ್ಲದರ ಬೆನ್ನಲ್ಲೇ, ಇರಾನ್ ಬಗ್ಗೆ ಸಂಜಯ್ ರಾವತ್ ಮಾತನಾಡಿದ್ದಾರೆ.

“ಕಾಶ್ಮೀರ ಸಮಸ್ಯೆಯಾಗಲಿ ಅಥವಾ ಪಾಕಿಸ್ತಾನದೊಂದಿಗಿನ ಸಂಘರ್ಷವಾಗಲಿ, ಇರಾನ್ ಯಾವಾಗಲೂ ಭಾರತದ ಪರವಾಗಿ ನಿಂತಿದೆ. ನಾವು ಯಾವುದೇ ತೊಂದರೆಯನ್ನು ಎದುರಿಸಿದಾಗ ಇರಾನ್ ಯಾವಾಗಲೂ ಭಾರತದ ಪರವಾಗಿ ನಿಂತ ದೇಶ. ಆ ದೇಶವು ಯಾರ ಮುಂದೆಯೂ ತಲೆಬಾಗಿಲ್ಲ. ನಾವು ಇರಾನ್‌ನಿಂದ ಕಲಿಯಬೇಕು” ಎಂದು ರಾವತ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ | ಭಾರತದ ಬಾಸ್ಮತಿ ಬೆಳೆವ ರೈತರು-ರಫ್ತುದಾರರಿಗೆ ಸಂಕಷ್ಟ

ಸದ್ಯ, ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆದಾಗ್ಯೂ, ಮಧ್ಯಪ್ರಾಚ್ಯ ರಾಷ್ಟ್ರಗಳು ತಮ್ಮ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ. ಪರಿಣಾಮ, ಮಧ್ಯಪ್ರಾಚ್ಯ ರಾಷ್ಟ್ರಗಳು ಮತ್ತು ಭಾರತದ ನಡುವೆ ಹಾರಾಟ ನಡೆಸಬೇಕಿದ್ದ 48 ವಿಮಾನಗಳು ರದ್ದಾಗಿವೆ. ಏತನ್ಮಧ್ಯೆ, ಮಂಗಳವಾರ, ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಶಾದ್‌ನಿಂದ ನವದೆಹಲಿಗೆ ಬಂದ ವಿಶೇಷ ವಿಮಾನದಲ್ಲಿ ಒಟ್ಟು 292 ಭಾರತೀಯ ಪ್ರಜೆಗಳು ಇರಾನ್‌ನಿಂದ ಭಾರತಕ್ಕೆ ಮರಳಿದ್ದಾರೆ.

ಈವರೆಗೆ, ಇರಾನ್‌ನಿಂದ 2,295 ಭಾರತೀಯರನ್ನು ಭಾರತಕ್ಕೆ ಕರೆತರಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...