ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣ | ಸರ್ಕಾರಕ್ಕೆ ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗ ಮೊರೆ ಹೋಗುತ್ತೇವೆ: ಬೊಮ್ಮಾಯಿ

Date:

ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ; ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ” ಎಂದು ಒತ್ತಾಯಿಸಿದರು.

“ಮೂವರ ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದು ಕೇಳಿದರು. ನಾಳೆ ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ” ಎಂದು ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಮಕ್ಕಳು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಹೆಣ್ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಂಗಳೂರು ಒಂದರಲ್ಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಶೇ 30ರಷ್ಟು ಹೆಚ್ಚಾಗಿವೆ” ಎಂದು ಆಕ್ಷೇಪಿಸಿದರು.

“ಅತ್ಯಾಚಾರ, ಕಿರುಕುಳ, ಹಿಂಸಾಚಾರ ಹೆಚ್ಚಾಗಿದೆ. ಗ್ರಾಮಾಂತರದಲ್ಲೂ ಮಹಿಳೆಯರು ಸುರಕ್ಷಿತವಾಗಿಲ್ಲ. ಇಂಥ ಹಲವಾರು ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡಿದರೆ ಅವರ ಮೇಲೆ ಸರಕಾರದ ವಕ್ರದೃಷ್ಟಿ ಕಾಡುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

“ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗಲೇ ವಿಧಾನಸೌಧದ ಅತ್ಯಂತ ಹತ್ತಿರ ಇರುವ ಒಬ್ಬ ಹೆಣ್ಮಗಳನ್ನು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ್ದು ಈ ಸರಕಾರದ ಮತ್ತು ಪೊಲೀಸ್ ಇಲಾಖೆ ಮೇಲೆ ಭಯ ಇಲ್ಲದ್ದನ್ನು ತೋರಿಸಿತ್ತು. ಸಾರ್ವಜನಿಕರು ತಮ್ಮ ರಕ್ಷಣೆ ಬಗ್ಗೆ ಭಯಪಡುವ ಸ್ಥಿತಿ ಉಂಟಾಗಿತ್ತು. ಕೇವಲ ಆಸ್ಪತ್ರೆಗೆ ಹೋಗಿ ನೋಡಿದರೆ ಮುಗಿಯಿತೇ? ಸರಿಯಾದ ತನಿಖೆ ಆಗಿಲ್ಲ. ಹಲವರ ಬಂಧನ ನಡೆದಿಲ್ಲ. ದಲಿತ ಮಹಿಳೆಗೆ ಹೀಗಾದರೂ ಮುಖ್ಯಮಂತ್ರಿಗಳಿಂದ ಕ್ರಮ ಇಲ್ಲ” ಎಂದು ದೂರಿದರು.

“ಸಮುದಾಯ ನೋಡಿ ಕೇಸು ಹಾಕುವಂತೆ ಸ್ಟಾಂಡರ್ಡ್ ಇನ್‍ಸ್ಟ್ರಕ್ಷನ್ ಕೊಟ್ಟಿದ್ದೀರಾ ಎಂದು ಗೃಹ ಸಚಿವರನ್ನು ಪ್ರಶ್ನಿಸಿದರು. ಹಾವೇರಿಯಲ್ಲಿ ನಮ್ಮನ್ನು ಯಾರೂ ಮುಟ್ಟುವುದಿಲ್ಲ ಎಂಬ ಪರಿಸ್ಥಿತಿ ಕೆಲವು ವರ್ಗದ್ದು. ಹಲವೆಡೆ ನೈತಿಕ ಪೊಲೀಸ್‍ಗಿರಿ ನಡೆದಿದೆ. ಶಿರಸಿಯ ಒಬ್ಬ ಹೆಣ್ಮಗಳು ಮತ್ತು ಬೇಕಾದವರು ಹಾನಗಲ್‍ನಲ್ಲಿ ಹೋಟೆಲ್‍ನಲ್ಲಿ ಇದ್ದರೆ ಅಕ್ಕಿಆಲೂರಿನ ಯುವಕರು ಇಬ್ಬರನ್ನೂ ಥಳಿಸಿ ಅವಳ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಇದನ್ನು ಮುಚ್ಚಿ ಹಾಕಲು ಮುಂದಾಗಿದ್ದರು” ಎಂದು ತಿಳಿಸಿದರು.

“ಗ್ರಾಮೀಣ ಪೊಲೀಸ್ ಸ್ಟೇಷನ್‍ಗಳು ಕಲೆಕ್ಷನ್ ಅಡ್ಡಾ ಆಗಿ ಪರಿವರ್ತನೆಗೊಂಡಿವೆ. ಕೆಲವೆಡೆ ಪೊಲೀಸ್ ಇನ್‍ಸ್ಪೆಕ್ಟರ್ ಗಳೇ ಇಸ್ಪೀಟ್, ಮದ್ಯದ ದಂಧೆಗೆ ಪ್ರೋತ್ಸಾಹ ಕೊಡುತ್ತಿದ್ದಾರೆ. ಕರ್ನಾಟಕವು ಜಂಗಲ್ ರಾಜ್ಯ ಆಗಿದೆ. ಕಾಂಗ್ರೆಸ್ ಸ್ಥಳೀಯ ನಾಯಕರ ಬೆಂಬಲದಿಂದ ಪುಡಿ ರೌಡಿಗಳು ಮತ್ತೆ ಇಸ್ಪೀಟ್ ಕ್ಲಬ್, ಜೂಜು ಆರಂಭಿಸಿದ್ದಾರೆ” ಎಂದರು.

“ರಾಜ್ಯದ ವಾಸ್ತವ ಸ್ಥಿತಿಯನ್ನು ಹಣಕಾಸು ಆಯೋಗದ ಮುಂದೆ ಹಿಂದಿನ ಸಿದ್ದರಾಮಯ್ಯರ ಸರಕಾರ ಇಟ್ಟಿರಲಿಲ್ಲ. ಈ ವಿಷಯದಲ್ಲಿ ಇವರ ವೈಫಲ್ಯವಿದೆ. 14ನೇ ಹಣಕಾಸಿಗಿಂತ ಇನ್ನೂ 1 ಲಕ್ಷ ಕೋಟಿ ಹೆಚ್ಚು ಹಣ ಬರಲಿದೆ. ನಿಗದಿತ ಕಾಲಾವಧಿ ಮುಗಿದಿಲ್ಲ. ಅಷ್ಟರೊಳಗೆ ಅನ್ಯಾಯ ಆಗಿದೆ ಎಂದರೆ ಹೇಗೆ?” ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...