ಸಿದ್ದೇಶ್ವರ ಶ್ರೀಗಳ ಪರಿಸರ-ಪ್ರಕೃತಿಯ ಹೆಗ್ಗುರುತಾಗಿ ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ: ಎಂ ಬಿ ಪಾಟೀಲ್

Date:

ಸಿದ್ದೇಶ್ವರ ಶ್ರೀಗಳ ಪರಿಸರ-ಪ್ರಕೃತಿ ಪ್ರೀತಿಯ ಹೆಗ್ಗುರುತಾಗಿ ಅವರ ನೆನಪಿನಲ್ಲಿ ವಿಜಯಪುರ, ಮಮದಾಪುರ ಅಥವಾ ಬಾಬಾನಗರದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ಬೆಳಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅಲ್ಲಿಯೇ ವಿಜ್ಞಾನ ಸಂಶೋಧನಾ ಕೇಂದ್ರ ಆರಂಭಿಸುವ ಉದ್ದೇಶ ಇದೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ವಿಜಯಪುರ ಜಿಲ್ಲಾಡಳಿತದಿಂದ ಇಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಮ್ಮ ಗಣತಂತ್ರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಾನ ಅವಕಾಶಗಳನ್ನು ಲಭ್ಯವಾಗಿಸುವ ಗುರಿಯೊಂದಿಗೆ ಜಿಲ್ಲೆಯಲ್ಲಿ ಕೈಗಾರಿಕೆ, ಕೃಷಿ ಆಧಾರಿತ ಉದ್ದಿಮೆ, ಪ್ರವಾಸೋದ್ಯಮ ಒಳಗೊಂಡಂತೆ ಸಮಗ್ರ ಅಭಿವೃದ್ಧಿಗೆ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಶುಕ್ರವಾರ ಹೇಳಿದರು.

“ಇಲ್ಲಿನ ಪಾರಂಪರಿಕ ಸ್ಥಳಗಳ ಮಹತ್ವ ಗಮನದಲ್ಲಿರಿಸಿಕೊಂಡು ಜಿಲ್ಲೆಯನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು. ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ತೆಲಂಗಾಣ ಮಾದರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ/ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐತಿಹಾಸಿಕ ಕೋಟೆ ಗೋಡೆಗಳು ಹಾಗೂ ಸುತ್ತಲಿನ ಸ್ಥಳಗಳ ಅಭಿವೃದ್ಧಿಪಡಿಸುವ ಜೊತೆಗೆ ಕಾರ್ಯಾರಂಭವಾಗಲಿರುವ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಲಭ್ಯವಾಗಿಸುವ ಬಗ್ಗೆ ಕ್ರಮ ವಹಿಸಲಾಗುವುದು” ಎಂದು ವಿವರಿಸಿದರು.

“ನಗರ ಸಂಚಾರ ದಟ್ಟಣೆ ತಪ್ಪಿಸಲು ಗಾಂಧಿ ಚೌಕಿಯಲ್ಲಿ ಪ್ರೈ ಓವರ್ ನಿರ್ಮಾಣ, ಸೈಕ್ಲಿಂಗ್ ವೆಲೋಡೋಮ್ ಹಾಗೂ ಸೈಕ್ಲಿಂಗ್ ಹಾಸ್ಟೇಲ್ ಉನ್ನತೀಕರಣ. ಜಿಲ್ಲಾ ಕೇಂದ್ರದಲ್ಲಿ ವಿಮಾನಯಾನ ತರಬೇತಿ ಸಂಸ್ಥೆ ಪ್ರಾರಂಭಿಸಲು ಯೋಜನೆ ಕಾರ್ಯಗತಗೊಳಿಸಲು ಗಮನ ಕೇಂದ್ರೀಕರಿಸಲಾಗುತ್ತದೆ” ಎಂದು ತಿಳಿಸಿದರು.

“ಸಾರ್ವಜನಿಕ ಶಾಲಾ ಶಿಕ್ಷಣ ಗುಣಮಟ್ಟ ಹೆಚ್ಚಿಸುವುದು, ಖಾಸಗಿ ಸಹಯೋಗದಲ್ಲಿ ಉತ್ಕೃಷ್ಟ ದರ್ಜೆಯ ಬಿಸಿಯೂಟ ಒದಗಿಸುವುದು. ವಿಜಯಪುರ ನಗರ ಹಾಗೂ ಪಟ್ಟಣಗಳಲ್ಲಿ ಅತ್ಯುತ್ತಮ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಆಧುನೀಕರಣ, ಗ್ರಾಮೀಣ ವೈದ್ಯಕೀಯ ಸೇವೆಗೆ ಒತ್ತು. ಆಯುಷ್ ಪದ್ಧತಿ, ನಿಸರ್ಗ ಚಿಕಿತ್ಸೆಗೆ ಪ್ರೋತ್ಸಾಹ ಜನರ ಗುಣಮಟ್ಟದ ಬದುಕಿಗೆ ಒತ್ತಾಸೆಯಾಗುವಂತೆ ಮಾಡಲಾಗುವುದು” ಎಂದು ಪಾಟೀಲ್ ವಿವರಿಸಿದರು.

“ನಗರ ಹಾಗೂ ಪಟ್ಟಣಗಳಲ್ಲಿ ಉಚಿತ ವೈಫೈ ವ್ಯವಸ್ಥೆ, ಕ್ರೀಡೆಗೆ ಉತ್ತೇಜನ,‌ ಸಮುದಾಯ ರೇಡಿಯೋ ಕೇಂದ್ರಗಳ ಸ್ಥಾಪನೆ, ಮೀನುಗಾರಿಕೆ ಕಾಲೇಜು ಹಾಗೂ ಬೃಹತ್ ಮೀನು ಸಂಗ್ರಹಾಲಯ ಪ್ರಾರಂಭ ಆದ್ಯತೆಗಳ ಪಟ್ಟಿಯಲ್ಲಿದೆ” ಎಂದು ಗಮನ ಸೆಳೆದರು.

ಸಂಸದ ರಮೇಶ ಜಿಗಜಿಣಗಿ, ಮೇಯರ್ ಮಹೆಜಬೀನ್ ಹೊರ್ತಿ, ಉಪ ಮೇಯರ್ ದಿನೇಶ್ ಹಳ್ಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ್‌ ಇದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...