ಸಾಮಾಜಿಕ‌ ಸಮಸ್ಯೆಗೆ ಪರಿಹಾರ ದೊರಕುವ ರೀತಿ ಪ್ರಣಾಳಿಕೆ ರೂಪಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Date:

ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮಾತನಾಡಿದರು.

“ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ, ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು” ಎಂದು ಮುಖ್ಯಮಂತ್ರಿಗಳು ಪಟ್ಟಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನಗಳನ್ನು ನಾವು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ.98ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಉಳಿದ ಭರವಸೆಗಳನ್ನು ಯಶಸ್ವಿಯಾಗಿ ಜಾರಿ ಮಾಡುತ್ತಿದ್ದೇವೆ” ಎಂದರು.

ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಡಿ ಕೆ ಶಿವಕುಮಾರ್ ಮಾತು

“ನಮ್ಮದು ಪ್ರಗತಿಪರ ರಾಜ್ಯವಾದರೂ ನಮ್ಮ ಶೇ.61ರಷ್ಟು ಜನಸಂಖ್ಯೆ ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಇನ್ನು ನಮ್ಮ ರಾಜ್ಯದ ತೆರಿಗೆ ವಿಚಾರದಲ್ಲಿ ಶೇ.96ರಷ್ಟು ನಗರ ಪ್ರದೇಶಗಳಿಂದ ಬಂದರೆ, ಕೇವಲ ಶೇ.4ರಷ್ಟು ಮಾತ್ರ ಗ್ರಾಮೀಣ ಪ್ರದೇಶದಿಂದ ಬರುತ್ತಿವೆ. ನಮ್ಮ ರೈತರ ಕೃಷಿ, ತೋಟಗಾರಿಕೆ ಬೆಳೆಗಳಿಂದ ನಮಗೆ ಹೆಚ್ಚಿನ ಶಕ್ತಿ ಇದೆ. ಇವುಗಳ ಹೊರತಾಗಿ ನಾವು ಮುನ್ನಡೆಯಲು ಅಸಾಧ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ಬಡವರಿಗೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಉತ್ತೇಜನ ನೀಡುವ ಯಾವುದೇ ಕಾರ್ಯಕ್ರಮಗಳಿದ್ದರೂ ಅವುಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ನಾವು ಕಳೆದ ಚುನಾವಣೆ ಸಮಯದಲ್ಲಿ ನ್ಯಾಯ್ ಯೋಜನೆ ಪರಿಚಯಿಸಿದ್ದರು. ನಾವು ಅದರ ಆಧಾರದ ಮೇಲೆ ಕೆಲವು ಕಾರ್ಯಕ್ರಮ ರೂಪಿಸಿದೆವು” ಎಂದು ಹೇಳಿದರು.

“ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರು ಈಗ ಮೋದಿ ಗ್ಯಾರಂಟಿ ಎಂದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಆರ್ಥಿಕತೆ ಹಾಳಾಗಲಿದೆ ಎಂದು ಹೇಳುತ್ತಿದ್ದವರು ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಪ್ರಕಟಿಸಿದರು. ನಾವು ನಮ್ಮ ಜನರ ಬದುಕಿನಲ್ಲಿ ಬದಲಾವಣೆ ತರುವುದು ಮುಖ್ಯ” ಎಂದರು.

“ನಮ್ಮ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವಾಸ್ತವಾಂಶಕ್ಕೆ ಹತ್ತಿರವಾಗುವಂತೆ ಸಲಹೆ ನೀಡಬೇಕು. ಇಂದು ನಮಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತಿದ್ದೇವೆ. ನಾವು ಲೆಕ್ಕಾಚಾರ ಹಾಕಲು ಆರಂಭಿಸಿದ ನಂತರ ಬೇರೆ ರಾಜ್ಯಗಳು ತಮಗಾಗಿರುವ ಅನ್ಯಾಯ ಪ್ರಶ್ನಿಸುತ್ತಿದ್ದಾರೆ. ನಿರ್ಮಲಾ ಸೀತರಾಮನ್ ಅವರು ಹಣಕಾಸು ಆಯೋಗದ ಕಡೆ ಬೆಟ್ಟು ಮಾಡಿ ತೋರುತ್ತಿದ್ದಾರೆ. ಹಣಕಾಸು ಆಯೋಗ ಬಜೆಟ್ ಮಂಡನೆ ಮಾಡುವುದಿಲ್ಲ ಅಲ್ಲವೇ? ಸರ್ಕಾರ ಬಜೆಟ್ ಮಂಡನೆ ಮಾಡುವಾಗ, ರಾಜ್ಯಕ್ಕೆ ಆಗುವ ಅನ್ಯಾಯ ಸರಿಪಡಿಸಬಹುದಲ್ಲವೇ” ಎಂದು ಪ್ರಶ್ನಿಸಿದರು.

“ನಮ್ಮ ರಾಜ್ಯದಲ್ಲಿ ನಾಗ್ಪುರ ಶಿಕ್ಷಣ ನೀತಿಯನ್ನು ತೆಗೆದುಹಾಕಲು ಮುಂದಾಗಿದ್ದೇವೆ. ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಬಿಜೆಪಿ ಸ್ನೇಹಿತರ ಬಳಿಯೇ ನಾನು ಚರ್ಚೆ ಮಾಡಿದ್ದೇನೆ. ಈ ಎನ್ಇಪಿ ಜಾರಿ ಅಸಾಧ್ಯ ಎಂದು ಅವರೇ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ರಾಜ್ಯಗಳಲ್ಲಿ ಜಾರಿ ಮಾಡಲಾಗದನ್ನು ನಮ್ಮ ರಾಜ್ಯದಲ್ಲಿ ಆತುರದಲ್ಲಿ ಜಾರಿ ಮಾಡಲು ಮುಂದಾದರು. ಇದನ್ನು ಸರಿಪಡಿಸಲು ಸಮಿತಿ ರಚಿಸಲಾಗಿದೆ. ಇದೆಲ್ಲದರ ಜವಾಬ್ದಾರಿಯನ್ನು ಸಚಿವ ಸುಧಾಕರ್ ಅವರ ಹೆಗಲಿಗೆ ನೀಡಲಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆ ವಿಶ್ವದಾದ್ಯಂತ ಪ್ರಶಂಸೆ ಪಡೆದಿದೆ. ಈ ಕಾರಣಕ್ಕೆ ಪ್ರಪಂಚದ ಪ್ರಮುಖ 500 ಕಂಪನಿಗಳಲ್ಲಿ ಭಾರತೀಯರೇ ಹೆಚ್ಚು ನಿಯಂತ್ರಣ ಹೊಂದಿದ್ದಾರೆ” ಎಂದರು.

ಎಐಸಿಸಿ ಮುಖಂಡರೂ, ಪ್ರಣಾಳಿಕೆ ಸಮಿತಿ ಸದಸ್ಯರೂ ಆದ ರಾಜಾ, ನೀತಿ ಆಯೋಗದ ಉಪಾಧ್ಯಕ್ಷರಾದ ರಾಜೀವ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾದ ಮೆಹರೂಜ್ ಖಾನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...