ವಾಲ್ಮೀಕಿ ನಿಗಮ, ಮುಡಾ ಹಗರಣ |‌ ಸದನದಲ್ಲಿ ಗಂಭೀರ ಚರ್ಚೆ ಮಾಡುತ್ತೇವೆ: ಆರ್‌ ಅಶೋಕ್

Date:

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರು‌ದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದರು.

ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಜುಲೈ 15 ರಿಂದ ನಡೆಯಲಿರುವ ಸದನವನ್ನುಇನ್ನೂ ಒಂದು ವಾರ ವಿಸ್ತರಣೆ ಮಾಡಬೇಕೆಂದು” ಆಗ್ರಹಿಸಲಾಗುವುದು ಎಂದರು.

“ಝೀಕಾ ವೈರಸ್‌, ಡೆಂಘೀ ರೋಗಗಳು ಹೆಚ್ಚಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಆಗ್ರಹಿಸಿದ್ದರೂ ಅದರ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ದರಗಳ ಏರಿಕೆಯಿಂದಾಗಿ ರೈತರ ಆತ್ಮಹತ್ಯೆ ಹೆಚ್ಚಿದೆ. ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿದೆ. ಇಲಾಖೆಗಳ ಅನುದಾನ ಕಡಿತ, 700 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಾಕಿ ಮೊದಲಾದ ಸಮಸ್ಯೆಗಳು ಕಂಡುಬಂದಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್‌ ಶಿಶುಪಾಲನಂತೆ ನೂರು ತಪ್ಪುಗಳನ್ನು ಮಾಡಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಯಾರೂ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಆದರೀಗ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಎಸ್‌ಐಟಿ ಮೂಲಕ ಎಲ್ಲರಿಗೂ ಕ್ಲೀನ್‌ ಚಿಟ್‌ ನೀಡುವ ಪ್ರಯತ್ನ ನಡೆದಿದೆ. ಇದರಲ್ಲಿ ಇನ್ನೂ ಮೂವರು ಸಚಿವರು ಶಾಮೀಲಾಗಿದ್ದಾರೆ. ನಿಗಮದ ಅಧ್ಯಕ್ಷರೇ ಶಾಂಗ್ರೀಲಾ ಹೋಟೆಲ್‌ನಲ್ಲಿ ಸಭೆ ಸೇರಿದ್ದರ ಬಗ್ಗೆ ಹೇಳಿದ್ದಾರೆ. ಈ ಕುರಿತು ಬಿಡುಗಡೆಯಾದ ಆಡಿಯೋದಲ್ಲಿ ಎಲ್ಲವೂ ಹೊರಬಂದಿದೆ” ಎಂದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ 187 ಕೋಟಿ ರೂ. ಹಣ ದಲಿತ ಕಾಲೋನಿಗೆ ರಸ್ತೆ ನಿರ್ಮಿಸಲು, ಮನೆ ನಿರ್ಮಿಸಲು ಮೀಸಲಾಗಿತ್ತು. ಜೊತೆಗೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದು, ಇದು ದೊಡ್ಡ ಲೂಟಿಯ ಪ್ರಯತ್ನ. ಇದರ ವಿರು‌ದ್ಧವೂ ಹೋರಾಟ ನಡೆಸಲಾಗುವುದು” ಎಂದು ಹೇಳಿದರು.

ಕಾಂಗ್ರೆಸ್‌ಗೆ ಹೆಸರು ಬದಲಿಸುವ ಹಕ್ಕಿಲ್ಲ

“ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ. ಈ ಹೆಸರನ್ನು ಕಾಂಗ್ರೆಸ್‌ ನಾಯಕರು ಇಟ್ಟಿಲ್ಲ ಅಂದ ಮೇಲೆ ಅದನ್ನು ತೆಗೆಯಲು ಅವರಿಗೆ ಯಾವುದೇ ಹಕ್ಕು ಇಲ್ಲ. ಕರ್ನಾಟಕದಲ್ಲಿ ರಾಮ-ಕೃಷ್ಣ ಎಂದಿರುವ ಊರುಗಳ ಹೆಸರುಗಳನ್ನು ಬದಲಾಯಿಸುತ್ತಾರಾ? ಶೋಲೆ ಸಿನಿಮಾ ಚಿತ್ರೀಕರಣವಾದಾಗಲೂ ಅಲ್ಲಿ ರಾಮಗಢ ಎಂಬ ಹೆಸರನ್ನೇ ಇಟ್ಟಿದ್ದರು. ಹೆಸರು ಬದಲಾಯಿಸುವ ಬದಲು ಬೆಂಗಳೂರು ನಗರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ. ರಾಮನ ಮೇಲೆ ದ್ವೇಷ ಇದ್ದರೆ ಬೇರೆ ದಾರಿ ನೋಡಿಕೊಳ್ಳಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...