ನಮಗೆ ಮತ ಹಾಕಿದರೆ ಬಿಹಾರದಲ್ಲಿ ಮದ್ಯ ಮಾರಾಟ ನಿಷೇಧ ರದ್ದು: ಜನ ಸುರಾಜ್ ಪಕ್ಷ

Date:

ಈ ಹಿಂದಿನ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಅಧಿಕಾರಕ್ಕೆ ಬಂದರೆ ಸದ್ಯ ನಿತೀಶ್ ಕುಮಾರ್ ಸರ್ಕಾರ ಬಿಹಾರದಲ್ಲಿ ವಿಧಿಸಿರುವ ಮದ್ಯ ಮಾರಾಟ ಮತ್ತು ಸೇವನೆ ಮೇಲೆ ನಿಷೇಧವನ್ನು ರದ್ದುಗೊಳಿಸಲಾಗುವುದು ಎಂದು ಜನ ಸುರಾಜ್ ಪಕ್ಷ ಭಾನುವಾರ ಪುನರುಚ್ಚರಿಸಿದೆ.

ಎಲ್‌ಜೆವಿ (ಆರ್‌ವಿ) ನಾಯಕ ಕುಮಾರ್ ಸೌರವ್ ಅವರನ್ನು ಜನ ಸುರಾಜ್ ಪಕ್ಷಕ್ಕೆ ಸ್ವಾಗತಿಸುತ್ತಾ ಮಾಧ್ಯಮದೊಂದಿಗೆ ಮಾತನಾಡಿದ ಜನ ಸುರಾಜ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಉದಯ್ ಸಿಂಗ್, “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಜನ ಸುರಾಜ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮದ್ಯ ನಿಷೇಧವನ್ನು ಕೂಡಲೇ ತೆಗೆದುಹಾಕಲಾಗುವುದು ಎಂದು ನಾವು ಹೇಳುತ್ತಲೇ ಇದ್ದೇವೆ. ಇದರಿಂದಾಗಿ ರಾಜ್ಯವು ಸುಮಾರು 28,000 ಕೋಟಿ ರೂ.ಗಳ ಆದಾಯ ನಷ್ಟವನ್ನು ಉಳಿಸಲು ಸಾಧ್ಯವಾಗುತ್ತದೆ. ಈ ಹಣವನ್ನು ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ(ಐಎಂಎಫ್‌) 5ರಿಂದ 6 ಲಕ್ಷ ಕೋಟಿ ರೂ.ಗಳ ಸಾಲವನ್ನು ಸಂಗ್ರಹಿಸಲು ಬಳಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಮದ್ಯ ನಿಷೇಧ ಮಾಡಿ; ಇಲ್ಲವೇ ನೀರಾ, ಸಾರಾಯಿ ಜಾರಿಗೆ ತನ್ನಿ: ಕಸವನಹಳ್ಳಿ ರಮೇಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೌರವ್ ಹಣಕಾಸು ಮತ್ತು ಕಾನೂನಿನಲ್ಲಿ ಪರಿಣತಿ ಹೊಂದಿದ್ದಾರೆ. ಅವರು ಭಾರತದ ಖಾಸಗಿ ಬ್ಯಾಂಕಿನಲ್ಲಿ ಸೆಕ್ಯುರಿಟೈಸೇಶನ್ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಬಿಹಾರದಲ್ಲಿ ಮದ್ಯ ನಿಷೇಧವನ್ನು ತೆಗೆದುಹಾಕಿದ ನಂತರ ಉಳಿತಾಯವಾಗುವ ಹಣದ ಮೂಲಕ ಸಾಲ ಸಂಗ್ರಹಿಸಲು ನಾವು ಉದಯ್ ಅವರ ಪರಿಣತಿಯನ್ನು ಬಳಸುತ್ತೇವೆ” ಎಂದು ಸಿಂಗ್ ಹೇಳಿದರು.

2016ರ ಏಪ್ರಿಲ್‌ನಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ. ಆದರೆ ತಮ್ಮ ಜನ ಸುರಾಜ್ ಪಕ್ಷ ಬಿಹಾರದಲ್ಲಿ ಸರ್ಕಾರವನ್ನು ರಚಿಸಿದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ರದ್ದುಗೊಳಿಸಲಾಗುವುದು ಎಂದು ಈ ಹಿಂದೆಯೇ ಪ್ರಶಾಂತ್ ಕಿಶೋರ್ ಅವರು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...