ಬಿಹಾರ ಚುನಾವಣೆ ಬಳಿಕ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಭಾನುವಾರ ಭರವಸೆಯನ್ನು ಪುನರುಚ್ಚರಿಸಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಗಳಾದ ಕತಿಹಾರ್ ಮತ್ತು ಕಿಶನ್ಗಂಜ್ನಲ್ಲಿ ಬೃಹತ್ ರ್ಯಾಲಿ ಉದ್ದೇಶಿಸಿ ತೇಜಸ್ವಿ ಯಾದವ್ ಈ ಹೇಳಿಕೆ ನೀಡಿದ್ದಾರೆ.
ತಮ್ಮ ತಂದೆ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ದಾಖಲೆಯನ್ನು ಉಲ್ಲೇಖಿಸಿದ ತೇಜಸ್ವಿ, “ಹಿಂದಿನ ಲಾಲು-ರಾಬ್ರಿ ಆಡಳಿತಗಳು ಆರ್ಎಸ್ಎಸ್ ಮತ್ತು ಕೋಮು ಶಕ್ತಿಗಳ ವಿರುದ್ಧ ದೃಢವಾಗಿ ನಿಂತಿದ್ದವು. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಂತಹ ಶಕ್ತಿಗಳನ್ನು ಬೆಂಬಲಿಸುತ್ತಿದ್ದಾರೆ. ರಾಜ್ಯ ಮತ್ತು ದೇಶಾದ್ಯಂತ ಕೋಮು ದ್ವೇಷವನ್ನು ಹರಡಿದ ಬಿಜೆಪಿ ‘ಭಾರತ್ ಜಲೋ ಪಾರ್ಟಿ’ ಆಗಿದೆ” ಎಂದು ಟೀಕಿಸಿದರು.
ಇದನ್ನು ಓದಿದ್ದೀರಾ? 9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ
ಹಾಗೆಯೇ, ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಕೋಮು ಸಾಮರಸ್ಯದ ವಿಶಾಲ ರಕ್ಷಣೆಯ ಭಾಗವಾಗಿ ವಕ್ಫ್ ಕಾಯ್ದೆಯನ್ನು ರದ್ದುಗೊಳಿಸುವ ಭರವಸೆಯನ್ನು ತೇಜಸ್ವಿ ನೀಡಿದರು. “ನಮ್ಮ ಒಕ್ಕೂಟವು ಸರ್ಕಾರ ರಚಿಸಿದರೆ ಸೀಮಾಂಚಲ್ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು. ವಿಶ್ವ ದರ್ಜೆಯ ವಿಶ್ವವಿದ್ಯಾಲಯ, ಸೂಪರ್ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಾಪಿಸಲಾಗುವುದು” ಎಂದೂ ಈ ಭರವಸೆ ನೀಡಿದರು.
बिहार बदलाव के लिए बेसब्र है। यह नया बिहार बनाने का चुनाव है। जैसे एक जगह खड़ा पानी सड़ जाता है। 𝟐𝟎 बरस तक एक ही खेत में एक ही बीज बोने से खेत और फसल दोनों ख़राब हो जाते हैं। वैसे ही दो दशक की इस सरकार ने बिहार की दो पीढ़ियों को बर्बाद कर दिया है।
— Tejashwi Yadav (@yadavtejashwi) October 26, 2025
तेजस्वी ने कभी किसी का कुछ… pic.twitter.com/b48AY36vDb
ಹಲವು ವಿರೋಧ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳ ಬಿಸಿ ಚರ್ಚೆ ಮತ್ತು ಆಕ್ಷೇಪಣೆಗಳ ನಡುವೆಯೇ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು 2025ರ ಏಪ್ರಿಲ್ ತಿಂಗಳಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಆದರೆ ಈ ಈ ಕಾಯ್ದೆಯು ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಾಂಸ್ಕೃತಿಕ ಹಕ್ಕುಗಳಿಗೆ ಧಕ್ಕೆ ತರುತ್ತದೆ ಎಂದು ವಿಪಕ್ಷಗಳು ಆರೋಪಿಸಿದೆ.





