ಬಿಹಾರ ಚುನಾವಣೆ | ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ: ತೇಜಸ್ವಿ ಯಾದವ್

Date:

ಬಿಹಾರ ಚುನಾವಣೆ ಬಳಿಕ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಭಾನುವಾರ ಭರವಸೆಯನ್ನು ಪುನರುಚ್ಚರಿಸಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಗಳಾದ ಕತಿಹಾರ್ ಮತ್ತು ಕಿಶನ್‌ಗಂಜ್‌ನಲ್ಲಿ ಬೃಹತ್ ರ‍್ಯಾಲಿ ಉದ್ದೇಶಿಸಿ ತೇಜಸ್ವಿ ಯಾದವ್ ಈ ಹೇಳಿಕೆ ನೀಡಿದ್ದಾರೆ.

ತಮ್ಮ ತಂದೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ದಾಖಲೆಯನ್ನು ಉಲ್ಲೇಖಿಸಿದ ತೇಜಸ್ವಿ, “ಹಿಂದಿನ ಲಾಲು-ರಾಬ್ರಿ ಆಡಳಿತಗಳು ಆರ್‌ಎಸ್‌ಎಸ್ ಮತ್ತು ಕೋಮು ಶಕ್ತಿಗಳ ವಿರುದ್ಧ ದೃಢವಾಗಿ ನಿಂತಿದ್ದವು. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಂತಹ ಶಕ್ತಿಗಳನ್ನು ಬೆಂಬಲಿಸುತ್ತಿದ್ದಾರೆ. ರಾಜ್ಯ ಮತ್ತು ದೇಶಾದ್ಯಂತ ಕೋಮು ದ್ವೇಷವನ್ನು ಹರಡಿದ ಬಿಜೆಪಿ ‘ಭಾರತ್ ಜಲೋ ಪಾರ್ಟಿ’ ಆಗಿದೆ” ಎಂದು ಟೀಕಿಸಿದರು.

ಇದನ್ನು ಓದಿದ್ದೀರಾ? 9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಕೋಮು ಸಾಮರಸ್ಯದ ವಿಶಾಲ ರಕ್ಷಣೆಯ ಭಾಗವಾಗಿ ವಕ್ಫ್ ಕಾಯ್ದೆಯನ್ನು ರದ್ದುಗೊಳಿಸುವ ಭರವಸೆಯನ್ನು ತೇಜಸ್ವಿ ನೀಡಿದರು. “ನಮ್ಮ ಒಕ್ಕೂಟವು ಸರ್ಕಾರ ರಚಿಸಿದರೆ ಸೀಮಾಂಚಲ್ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು. ವಿಶ್ವ ದರ್ಜೆಯ ವಿಶ್ವವಿದ್ಯಾಲಯ, ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಾಪಿಸಲಾಗುವುದು” ಎಂದೂ ಈ ಭರವಸೆ ನೀಡಿದರು.

ಹಲವು ವಿರೋಧ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳ ಬಿಸಿ ಚರ್ಚೆ ಮತ್ತು ಆಕ್ಷೇಪಣೆಗಳ ನಡುವೆಯೇ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು 2025ರ ಏಪ್ರಿಲ್ ತಿಂಗಳಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಆದರೆ ಈ ಈ ಕಾಯ್ದೆಯು ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಾಂಸ್ಕೃತಿಕ ಹಕ್ಕುಗಳಿಗೆ ಧಕ್ಕೆ ತರುತ್ತದೆ ಎಂದು ವಿಪಕ್ಷಗಳು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...