ರಾಜ್ಯದ ಪಾಲಿನ‌ ಹಣ ಕೇಂದ್ರ ಕೊಟ್ಟಿದ್ದರೆ ನಾವು ಇಂಧನ ತೆರಿಗೆ ಹೆಚ್ಚಿಸುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Date:

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ (ಜೂ.17) ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿದೆ” ಎಂದರು.

“2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಜಾನೆಗೆ ಸಂದಾಯವಾಗುತ್ತದೆ. ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು ನಮ್ಮ ಜೇಬಿಗೆ ಹೋಗುವುದಿಲ್ಲ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ. ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ” ಎಂದು ಪ್ರಶ್ನಿಸಿದರು.

“ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ” ಎಂದು ಲೇವಡಿ ಮಾಡಿದರು.

“ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಡೀಕರಣದ ಉದ್ದೇಶದೊಂದಿಗೆ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ” ಎಂದು ವಿವರಿಸಿದರು.

“ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ? ಡಾ ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್‌ ಇತ್ತು. 2015ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿಯವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು” ಎಂದು ಪ್ರಶ್ನಿಸಿದರು?

ಕರ್ನಾಟಕಕ್ಕೆ ನಿರಂತರ ಅನ್ಯಾಯ

“ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತ ಶಿಫಾರಸು ಮಾಡಿದ್ದರೂ, ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್‌ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ, ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ? ಬಿಜೆಪಿಯು ಬಡವರು, ದಲಿತರ ವಿರೋಧಿ ಧೋರಣೆ ಹೊಂದಿದೆ” ಎಂದು ಹರಿಹಾಯ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...