ತುಮಕೂರು ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡಲು ಪತ್ರ ಬರೆದಿದ್ದೆವು: ಸಿಎಂ ಸಿದ್ದರಾಮಯ್ಯ

Date:

“ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆವು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಹಿರಿಯ ಬಿಜೆಪಿ ಮುಖಂಡ ಎಲ್‌ ಕೆ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರವು ‘ಭಾರತ ರತ್ನ’ಕ್ಕೆ ಆಯ್ಕೆ ಮಾಡಿದ ಬಗ್ಗೆ ಪತ್ರಕರ್ತರು ಕೇಳಿದ ವೇಳೆ ದಾವಣಗೆರೆಯ ಎಂ.ಬಿ.ಎ. ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

“ಎಲ್ ಕೆ ಅಡ್ವಾಣಿಯವರಿಗೆ ಕೊಟ್ಟಿರುವುದಕ್ಕೆ ನಾವೇನೂ ಬೇಡ ಅನ್ನುವುದಿಲ್ಲ. ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ನೀಡುವಂತೆ ಆಗ್ರಹಿಸಿ ಪತ್ರ ಬರೆದಿದ್ದೆವು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆದ ವಿಚಾರದ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಏನೂ ಮಾಹಿತಿ ಬಂದಿಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಗೊತ್ತಿಲ್ಲದ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಗುತ್ತಿಗೆದಾರರ ಬಿಲ್ ಪಾಸು ಮಾಡಲು ತೊಂದರೆ: ದೂರು ನೀಡಿದರೆ ತನಿಖೆ

ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ  ಪ್ರತಿಕ್ರಿಯೆ ನೀಡಿದ ಸಿಎಂ, “ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ. ಸಮೀಕ್ಷೆ ನಡೆಯುತ್ತಿದೆ ಎಂದರು.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡುವ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, “ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...