ವಕ್ಫ್ ಮಸೂದೆಗೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ; ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಸಜ್ಜು

Date:

ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿರುವುದನ್ನು ವೆಲ್ಫೇರ್ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂವಿಧಾನಬಾಹಿರ ತಿದ್ದುಪಡಿಯ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೇಂದ್ರ ಸಮಿತಿಯು ದೇಶವ್ಯಾಪಿ ಹೋರಾಟಕ್ಕೆ ಕರೆ ನೀಡಿದ್ದು, ಇದರ ಅಂಗವಾಗಿ ರಾಜ್ಯದ್ಲಲಿ ವಕ್ಫ್ ಸಂರಕ್ಷಣೆ -ನಮ್ಮ ಹೊಣೆ ಎಂಬ ಶೀರ್ಷಿಕೆ ಅಡಿಯಲ್ಲಿ ಏಪ್ರಿಲ್ 20ರಿಂದ ಏಪ್ರಿಲ್ 27ರವರೆಗೆ ರಾಜ್ಯವ್ಯಾಪಿ ಚಳುವಳಿ ಹಮ್ಮಿಕೊಂಡಿದೆ.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ | ಮುರ್ಶಿದಾಬಾದ್‌ ಕೋಮುಗಲಭೆ: ಊರು ಬಿಡುವುದೊಂದೇ ಜನರಿಗೆ ಕಂಡ ದಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಚಳುವಳಿಯ ಭಾಗವಾಗಿ ರಾಜ್ಯಾದ್ಯಂತ ಪತ್ರಿಕಾಗೋಷ್ಠಿ, ಬಿತ್ತಿ ಪತ್ರ , ವಿಚಾರಗೋಷ್ಠಿಗಳು, ಪ್ರತಿಭಟನೆ, ಧರಣಿ ಸತ್ಯಾಗ್ರಹ, ಪಾದಯಾತ್ರೆ, ಸಹಿ ಸಂಗ್ರಹಣೆ, ಕರಪತ್ರ ಹಂಚಿಕೆ, ಹೀಗೆ ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದೆ.

“ವಕ್ಫ್ ತಿದ್ದುಪಡಿ ಕಾಯ್ದೆಯು ಸಂವಿಧಾನಿಕ ಚೌಕಟ್ಟಿನ ವಿರುದ್ಧವಾಗಿದೆ. ವಿಧಿ 14ರ ಪ್ರಕಾರ ಇದು ತಾರತಮ್ಯವೆಂದು ಪರಿಗಣಿಸಲಾಗುವುದು. ಏಕೆಂದರೆ ಇದು ಮುಸ್ಲಿಂ ದತ್ತಿಗಳಿಗೆ ಮಾತ್ರ ಅಸಮಾನವಾಗಿ ಪರಿಣಾಮ ಬಿರುತ್ತದೆ. ಅದೇರೀತಿ ವಿಧಿ 25 ಮತ್ತು 28ರ ಪ್ರಕಾರ ಈ ಕಾಯ್ದೆಯು ಮುಸ್ಲಿಂ ನಾಗರಿಕರ ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕು ಮತ್ತು ಸ್ವಾತಂತ್ರವನ್ನು ಉಲಂಘಿಸುತ್ತದೆ. ವಿಧಿ 30ರ ಪ್ರಕಾರ ಮುಸ್ಲಿಂ ನಾಗರಿಕರಿಗೆ ತಮ್ಮ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆಮಾಡುವ ಮತ್ತು ನಿರ್ವಹಣೆ ಮಾಡುವ ಹಕ್ಕಿನಲ್ಲು ಕೂಡ ಹಸ್ತಕ್ಷೇಪ ಮಾಡುತ್ತದೆ. ಈ ಕಾಯ್ದೆ ವಕ್ಫ್ ಆಸ್ತಿಗಳ ಮೂಲ ಉದ್ದೇಶವನ್ನು ಬದಲಾಯಿಸಲು ಅವಕಾಶ ನೀಡುತ್ತದೆ, ಇದು ವಕ್ಫ್ ಆಸ್ತಿಯ ಶಾಶ್ವತ ಸಮರ್ಪಣೆಯ ಇಸ್ಲಾಮಿ ತತ್ವಕ್ಕೆ ವಿರುದ್ಧವಾಗಿದೆ” ಎಂದು ವೆಲ್ಫೇರ್ ಪಾರ್ಟಿ ಪತ್ರಿಕಾಗೋಷ್ಠಿಯಲ್ಲಿ ಮುಖಂಡ ತಾಹೇರ್ ಹುಸೇನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ದಾವಣಗೆರೆ | ವಕ್ಫ್ ತಿದ್ದುಪಡಿ ವಿರುದ್ಧ ಪ್ರಚೋದನಕಾರಿ ಹೇಳಿಕೆ, ಪಾಲಿಕೆ ಮಾಜಿ ಸದಸ್ಯ ಕಬೀರ್ ಬಂಧನ.

“ವಕ್ಫ್ ತಿದ್ದುಪಡಿ ಕಾಯ್ದೆಯ ಮೂಲ ಉದ್ದೇಶ ವಕ್ಫ್ ಆಸ್ತಿಗಳ ಮೇಲೆ ಸರಕಾರದ ನಿಯಂತ್ರಣ ಹೆಚ್ಚಿಸುವುದು ಮತ್ತು ವಕ್ಫ್ ಸಂಸ್ಥೆಯ ಸ್ವಾಯತ್ತತ್ತೆಯನ್ನು ದುರ್ಬಲಗೊಳಿಸುತ್ತದೆ. ವಕ್ಫ್ ಕಾಯ್ದೆ 1995 ರ ಸೆಕ್ಷನ್ 3(ಆರ್) ರಲ್ಲಿ 5 ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಆಚರಿಸುವ ಸ್ಥಿತಿಯನ್ನು ಸೇರಿಸುವುದು, ವಕ್ಫ್ ರಚಿಸಲು ಅರ್ಹತಾ ಮಾನದಂಡವಾಗಿ 5 ವರ್ಷಗಳ ಪೂರ್ವಾಪೇಕ್ಷಿತ ಷರತ್ತು ವಿಚಿತ್ರ ಮತ್ತು ಅಸಂಬದ್ಧವಾಗಿದೆ. ಈ ತಿದ್ದುಪಡಿಯ ಮೂಲಕ ಅವನು/ ಅವಳು ಮುಸ್ಲಿಂ ಎಂದು ನಿರ್ಧರಿಸುವ ಅಧಿಕಾರ ಯಾರಿಗೆ ಇರುತ್ತದೆ ಎಂಬ ಬಗ್ಗೆ ಅನುಮಾನವಿದೆ ಎಂದು ತಿಳಿಸಿದೆ.

ವಕ್ಫ್ ಕಾಯ್ದೆ 2025ರ ಈ ನಿಬಂಧನೆಯು ಸಂವಿಧಾನಬಾಹಿರ ಮತ್ತು ಸಂಸತ್ತಿನ ಸಾಮರ್ಥ್ಯವನ್ನು ಮೀರಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಈ ಕಾಯ್ದೆಯನ್ನು ಒಪ್ಪಲಾಗದು ಸರಕಾರ ಈ ಕಾಯ್ದೆ ವಾಪಸ್ ಪಡೆಯವವರೆಗೂ ಹೋರಾಟ ನಡೆಸಲಾಗುವುದು, ಇದು ಕೇವಲ ಒಂದು ಸಮುದಾಯದ ವಿಷವಲ್ಲದೆ ಸಂವಿಧಾನ ವಿರೋಧಿ ನಡೆಯಾಗಿದ್ದು ರಾಜ್ಯದ ಎಲ್ಲಾ ನಾಗರಿಕರು ಈ ಹೋರಾಟಕ್ಕೆ ಬೆಂಬಲಿಸಬೇಕೆಂದು ವೆಲ್ಫೇರ್ ಪಾರ್ಟಿ ಒತ್ತಾಯಿಸಿದೆ.

ಕೇಂದ್ರ ಸರ್ಕಾರದ ನಡೆ ದ್ವೇಷದಿಂದ ಕೂಡಿದೆ. ಇಂತಹ ಸೂಕ್ಷ್ಮ ವಿಷಯದಲ್ಲಿ ದ್ವೇಷ ಸಾಧಿಸುವಂಥದ್ದು ಸರಿಯಲ್ಲ. ಕೇಂದ್ರವು ಸಂಯಮದಿಂದ ನಡೆದುಕೊಳ್ಳಬೇಕಿತ್ತು. ಹಿಂದೂ ಧರ್ಮದ ಟ್ರಸ್ಟ್‌ಗಳು, ವಕ್ಫ್ ಮಂಡಳಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದೆ. ಭೂಮಿ ಮೇಲೆ ಹಕ್ಕು ಇರುವುದು ರಾಜ್ಯಕ್ಕೆ. ರಾಜ್ಯದ ಹಕ್ಕನ್ನು ಕಿತ್ತುಕೊಳ್ಳುವ ಯತ್ನವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್, ರಾಜ್ಯ ಉಪಾಧ್ಯಕ್ಷ ಇಂಜಿನಿಯರ್ ಹಬಿಬುಲ್ಲಾಹ್ ಖಾನ್ ಹಾಗೂ ಮಾಧ್ಯಮ ಸಂಚಾಲಕ ರಿಜ್ವಾನ್ ಹುಮನಾಬಾದ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...