ಬಿ ಆರ್ ಪಾಟೀಲ್ ಮಾಡಿರುವುದು ಗಂಭೀರ ಆರೋಪವಲ್ಲ: ಗೃಹ ಸಚಿವ ಜಿ ಪರಮೇಶ್ವರ್‌

Date:

ಬಿ ಆರ್ ಪಾಟೀಲ್ ಅವರು ಮಾಡಿರುವುದು ಗಂಭೀರ ಆರೋಪವಲ್ಲ. ಅವರು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿ, ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಚ್ ಕೆ ಪಾಟೀಲ್ ಅವರು ಗಣಿ ಅಕ್ರಮದ ಪತ್ರ ಬರೆದಿದ್ದಾರೆ. ಗಣಿ ಅಕ್ರಮದಲ್ಲಿ 1.5 ಲಕ್ಷ ಕೋಟಿ ರೂ. ದುರುಪಯೋಗವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳಲು ಹೇಳಿದ್ದಾರೆ. ಲೂಟಿ ಮಾಡಿದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಲಹೆ ನೀಡಿ ಈ ಪತ್ರ ಬರೆದಿದ್ದಾರೆ. ನಾವು ಕೂಡ ಇದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಪೊಲೀಸರಿಗೆ ಮುಕ್ತವಾಗಿ ಕೆಲಸ ಮಾಡಲು ಹೇಳಿದ್ದೇವೆ, ನಾನು ಎಂದಿಗೂ ಯಾರ ಮೇಲೂ ಉತ್ತಡ ಹೇರಿಲ್ಲ. ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಹೊರಟಿದ್ದೇವೆ. ಆನೆಗೊಂದಿ ಭಾಗದಲ್ಲಿ ಡ್ರಗ್ಸ್ ತಡೆಯುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಮತ್ತು ಆನೆಗೊಂದಿ ಭಾಗದಲ್ಲಿ ಅವಶ್ಯಕತೆ ಇದ್ದರೆ, ಪೊಲೀಸ್‌ ಠಾಣೆ ಸ್ಥಾಪಿಸುತ್ತೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

ನಾವು ರಾಜ್ಯದಲ್ಲಿ ಎರಡು ವರ್ಷದಿಂದ ಜನಪರ ಕೆಲಸ ಮಾಡುತ್ತಿದ್ದೇವೆ. ಕೊಟ್ಟ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ಲಕ್ಷ ಕೋಟಿ ರೂ. ಖರ್ಚು ಮಾಡಿದ್ದೇವೆ. ಆದರೆ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿಲ್ಲ, ಸಬ್ ಇನ್ಸ್‌ಪೆಕ್ಟರ್‌ ಹಗರಣದ ನಂತರ ನೇಮಕಾತಿಯಾಗಿಲ್ಲ, ರಾಜ್ಯದಲ್ಲಿ ಸಾವಿರಾರು ಪಿಎಸ್ಐಗಳ ಸ್ಥಾನಗಳು ಖಾಲಿಯಾಗಿವೆ. ಶೀಘ್ರ ನೇಮಕ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಭೋಸರಾಜು, ಸಂಸದ ರಾಜಶೇಖರ್ ಹಿಟ್ನಾಳ್‌, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಬಸವರಾಜ್ ಹಿಟ್ನಾಳ್‌, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕೃಷ್ಣ ಇಟ್ಟಂಗಿ ಮತ್ತು ನಗರ ಸಭೆ ಸ್ಥಾಯಿ ಸಮಿತಿ ಸದಸ್ಯ ಅಕ್ಬರ್ ಪಾಷ ಪಲ್ಟನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...