ಕಾಂಗ್ರೆಸ್‌ಗೆ ಬೇಕಾಗಿರುವುದು ದಲಿತರ ಏಳಿಗೆಯಲ್ಲ, ನಮ್ಮ ವೋಟು ಮಾತ್ರ: ಕೋಟಿಗಾನಹಳ್ಳಿ ರಾಮಯ್ಯ

Date:

ʼಕಾಂಗ್ರೆಸ್‌ಗೆ ಬೇಕಾಗಿರುವುದು ದಲಿತರ ಅಧಿಕಾರ ಅಲ್ಲ, ಏಳಿಗೆಯಲ್ಲ ಬದಲಿಗೆ ನಮ್ಮ ವೋಟು ಮಾತ್ರ. ನಮಗಿರುವ ಆದ್ಯತೆ ಏನು ಎಂಬುದನ್ನು ನಾವು ಯೋಚನೆ ಮಾಡಬೇಕು. ನಮ್ಮ ತಟ್ಟೆಗೆ ಕೈ ಹಾಕಿದ್ದಾರೆ. ನಮ್ಮ ನೆಲ ಭೂಮಿಗಳು ವಿಧಾನಸೌಧದ ನೆಲಗಳ್ಳರ ಬಳಿ ಸೇರಿಕೊಂಡಿದೆ. ಈಗ ನಮ್ಮಲಿರುವ ಶಕ್ತಿ ಒಂದೇ ಅದು ಮತ. ಅದನ್ನು ಉಪಯೋಗಿಸಿ ಬದಲಾವಣೆ ತರಬೇಕಾಗಿದೆʼ ಎಂದು ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.

ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಇಂದು ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ʻಕಾಂಗ್ರೆಸ್‌ ಹಟಾವೋ ದಲಿತ್‌ ಬಚಾವೋʼ ಸಮಾವೇಶದಲ್ಲಿ ಅವರು ಮಾತನಾಡಿದರು.

ʻಕಾಂಗ್ರೆಸ್ ಒಂದು ಉರಿಯುವ ಮನೆʼ ಪ್ರವೇಶಿಸಬೇಡಿ ಎಂದು ಬಾಬಾ ಸಾಹೇಬರು ಹೇಳಿದ್ದರು. ಆದರೆ, ಅದು ಉರಿಯುತ್ತಿದೆಯೇ ಗೊತ್ತಿಲ್ಲ. ಆದರೆ ಇಂದು ನಮ್ಮ ದಲಿತರ ಮನೆಗಳು ಉರಿಯುತ್ತಿವೆ. ಅದು ಬೂದಿಯಾಗುವುದಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕು. ಅದು ಹೇಗೆ ಏನು ಎಂಬುದರ ಬಗ್ಗೆ ನಾವು ಆಲೋಚನೆ ಮಾಡಬೇಕಾಗುತ್ತದೆ. ಮತದ ಶಕ್ತಿಯನ್ನು ಬಾಬಾ ಸಾಹೇಬರು ಅರ್ಥ ಮಾಡಿಕೊಂಡಂತೆ ನಾವು ಅರ್ಥ ಮಾಡಿಕೊಳ್ಳಬೇಕಿದೆ. ಹಾಗಾಗಿ ಈ ಸರ್ಕಾರವನ್ನು ಕಿತ್ತೊಗೆಯಬೇಕಾಗಿದೆ. ಅದಕ್ಕಾಗಿ ಪ್ರತ್ಯೇಕ ಪಕ್ಷ ಸ್ಥಾಪನೆ ಮಾಡುವ ಅಗತ್ಯವಿದೆ. ನಾವು ರಾಜಕೀಯ ಶಕ್ತಿಯಾಗಬೇಕಿದೆ. ಒಂದು ಪ್ರಾದೇಶಿಕ ಪಕ್ಷ ಕಟ್ಟಲೇಬೇಕಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಒಂದೊಂದು ದೀಪದ ರೀತಿ ಇದ್ದೇನೆ. ನಮ್ಮ ಮನೆಗಳನ್ನು ಬೆಳಗುತ್ತಿದ್ದೇವೆ. ಆದರೆ, ಲೋಕಕ್ಕೆ ಬೆಳಕು ತರುವ ಶಕ್ತಿ ನಮಗಿದೆ. ಹಿಂದೆ ದುರಹಂಕಾರ ತೋರಿದ ಗುಂಡೂರಾವ್‌ ಅವರ ಸರ್ಕಾರವನ್ನು ನಾವು ಕೆಡವಿದ್ದೇವೆ. ಈಗಲೂ ಅದನ್ನು ಮಾಡುತ್ತೇವೆ. ಭೂಮಿ ನೆಲಗಳ್ಳರ ಪಾಲಾಗಿದೆ. ನಾವು ಭೂಮಿ ನಮಗೆ ಬೇಕು ಕೊಡಿ ಎಂಬ ಬೇಡಿಕೆ ಇಡುವುದಿಲ್ಲ. ಈಗ ಆಕಾಶದ ತರಂಗಗಳ ದರೋಡೆ ನಡೆಯುತ್ತಿದೆ. ನೀವು ಮಲ್ಟಿ ನ್ಯಾಷನಲ್‌ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದೀರಿ. ಅಲ್ಲಿ ನಮ್ಮ ಪಾಲನ್ನು ನಮಗೆ ಕೊಡಿ ಎಂದು ಕೇಳುತ್ತೇವೆ ಎಂದು ಎಚ್ಚರಿಸಿದರು.

ಹಿರಿಯ ನ್ಯಾಯವಾದಿ ಬಾಲನ್‌ ಅವರು ಮಾತನಾಡಿ, ಕರ್ನಾಟಕದಲ್ಲಿ ಎಸ್ಸಿ 20%, ಎಸ್‌ಟಿ 7%. ಒಟ್ಟು 27% ಇದ್ದೇವೆ. ಹಳ್ಳಿಯಲ್ಲಿ ಕೇರಿಯಲ್ಲಿದ್ದೇವೆ, ಸಿಟಿಯಲ್ಲಿ ಕೊಳಗೇರಿನಲ್ಲಿದ್ದೇವೆ. ಅಗ್ರಹಾರ ಬೇರೆ, ಊರು ಬೇರೆ, ಗಿರಿಜನರ ಕಾಲನಿ ಬೇರೆ, ದಲಿತರ ಕಾಲನಿ ಬೇರೆ, ಕುರುಬರ ಕಾಲನಿ ಬೇರೆ. ಬೆಂಗಳೂರಿನಲ್ಲಿ ಏರ್ಪೋರ್ಟ್‌ ಇದೆ. ಅಲ್ಲಿ ನಾವು ಪೈಲೆಟ್‌ ಆಗಿಲ್ಲ. ಅಲ್ಲಿ ನಾವು ಕಸ ಎತ್ತುವ ಕೆಲಸ ಮಾಡುತ್ತಿದ್ದೇವೆ. ಹತ್ತು ಹನ್ನೆರಡು ಸಾವಿರ ಸಂಬಳ ಕೊಡುತ್ತಿದ್ದಾರೆ. ಅದರಲ್ಲಿ ಬದುಕೋದು ಸಾಧ್ಯವೇ ಎಂದು ಸಿದ್ದರಾಮಯ್ಯ ಅವರನ್ನು ಕೇಳಬೇಕು ಎಂದರು.

ಮಣಿಪಾಲ, ಮಲ್ಯ, ಪೋರ್ಟಿಸ್‌ ಮುಂತಾದ ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ ವೈದ್ಯರಾಗಿ ನಾವು ಕೆಲಸ ಮಾಡುತ್ತಿಲ್ಲ. ಕಸ, ಮಲ ಬಾಚುವ ಕೆಲಸ ಮಾಡುತ್ತಿದ್ದೇವೆ. ದಿನಕ್ಕೆ ಕನಿಷ್ಠ ಒಂದು ಸಾವಿರ ರೂಪಾಯಿ ಖರ್ಚಿದೆ. 30 ಸಾವಿರ ಕನಿಷ್ಠ ವೇತನ ಕೊಡಿ, ನಿಮ್ಮ ಗಂಟು ಹೋಗಲ್ಲ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಎಂದು ಪ್ರಶ್ನೆ ಮಾಡಿದರು.

ಫೈವ್‌ ಸ್ಟಾರ್‌ ಹೋಟೆಲು ಮೆಟ್ರೋ, ಯುನಿವರ್ಸಿಟಿ ಎಲ್ಲ ಕಡೆಯೂ ಹತ್ತು ಸಾವಿರಕ್ಕೆ ದುಡಿತಿದ್ದಾರೆ. ಬಿಬಿಎಂಪಿಯಲ್ಲಿ ಇಪ್ಪತ್ತು ವರ್ಷದಿಂದ ಪರ್ಮನೆಂಟ್‌ ಮಾಡದೇ ಹದಿನೈದು ಸಾವಿರಕ್ಕೆ ಕಸ ಎತ್ತುತ್ತಿದ್ದಾರೆ. ಕೆಲಸದ ಭದ್ರತೆ, ಕಾನೂನಿನ ಭದ್ರತೆ ಇಲ್ಲ. ಅವರನ್ನೆಲ್ಲ ಖಾಯಂ ಮಾಡಿ. ಕಾಂಗ್ರೆಸ್‌ ಸರ್ಕಾರ ಬಂದು ಒಂದೂವರೆ ವರ್ಷದಿಂದ ಈ ವಿಷಯದಲ್ಲಿ ಒಂದೇ ಒಂದು ಕಾನೂನು ಮಾಡಿಲ್ಲ. ಇದು ದಲಿತರ ವಿರೋಧಿ ಸರ್ಕಾರ ಎಂದು ಹೇಳಿದರು.

ನಟ ಚೇತನ್‌ ಮಾತನಾಡಿ, ನಿಜವಾದ ಅಹಿಂದ ನಾಯಕರು ಕೃಷ್ಣ, ಕಾವೇರಿಯಲ್ಲಿ ಕೂತು ಮಾತನಾಡುವವರಲ್ಲ, ಈ ವೇದಿಕೆಯಲ್ಲಿರುವವರು. ನಿನ್ನೆ ಇಲ್ಲೇ ಪ್ರತಿಭಟನೆ ಮಾಡಿದವರು ಚಮಚಾಗಳು. ಅಸಮಾನತೆಯ ವ್ಯವಸ್ಥೆಗೆ ಸಿದ್ದರಾಮಯ್ಯ ಸರ್ಕಾರ ತುಪ್ಪ ಸುರಿಯುತ್ತಿದೆ. ಸಿದ್ದರಾಮಯ್ಯ ಅವರದ್ದು ಆಧುನಿಕ ಮನುವಾದ ಎಂದು ಟೀಕಿಸಿದರು.

ಒಕ್ಕೂಟದ ಸಂಚಾಲಕ ಭಾಸ್ಕರ ಪ್ರಸಾದ್‌, ಆಪ್‌ ಮುಖಂಡ ಮೋಹನ ದಾಸರಿ, ದಲಿತ ಮುಖಂಡ ಮೋಹನ್‌ ರಾಜ್‌, ಪ್ರಸನ್ನ ಚಕ್ರವರ್ತಿ, ಸಿದ್ದಾಪುರ ಮಂಜುನಾಥ್‌, ಪ್ರೊ ಹರಿರಾಮ್‌, ಎಸ್‌ಡಿಪಿಐ ಮುಖಂಡ ವಾಸಿಂ ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...