ಮಂಗಳೂರಿನ ಸೈಂಟ್ ಜೆರೋಸಾ ಶಾಲೆಯಲ್ಲಿ ನಡೆದದ್ದೇನು? ಇಲ್ಲಿದೆ ವಿವರ!

Date:

ನಮ್ಮ ನೆಚ್ಚಿನ ನೊಬೆಲ್ ಪ್ರಶಸ್ತಿ ವಿಜೇತ ಕವಿಯಾದ ರಬೀಂದ್ರನಾಥ ಟಾಗೋರ್ ಅವರ ‘Work is worship’ ಎಂಬ ಕವಿತೆಯನ್ನು ಇಂಗ್ಲಿಷ್ ಪಠ್ಯಪುಸ್ತಕದಲ್ಲಿ ಸರ್ಕಾರದ ಶಿಕ್ಷಣ ಇಲಾಖೆ ಸೇರಿಸಿತ್ತು. ಈ ಪಠ್ಯವನ್ನು ಸೈಂಟ್ ಜೆರೋಸಾ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕಿ ಇಂಗ್ಲಿಷ್‌ನಲ್ಲಿ ಬೋಧಿಸುತ್ತಿದ್ದರು. ಕವಿತೆಯಲ್ಲಿ ಕವಿ ರಬೀಂದ್ರನಾಥ್ ಟಾಗೋರ್ ಅವರು ದೇವರನ್ನು ಕಾಣುವ ಬಗೆ ಹೇಗೆ ಮತ್ತು ದೇವರನ್ನು ಪೂಜಿಸುವವ ಹೇಗೆ ಇರಬೇಕು ಎಂಬುದನ್ನು ವಿವರಿಸುತ್ತಾರೆ.

‘ತೊರೆದು ಬಿಡು ಆ ನಿನ್ನ ಮಂತ್ರ ಪಠಣಗಳನ್ನು
ಸುಮ್ಮನೆ ಕುಳಿತುಕೊಳ್ಳಬೇಡ
ದೇವರು ಗುಡಿ ಚರ್ಚು ಮಸೀದಿಗಳಲ್ಲಿ ಇಲ್ಲ
ಕಣ್ಣನ್ನು ತೆರೆದು ನೋಡು, ಇಲ್ಲಿ ಇದ್ದಾನೆ
ನೇಗಿಲ ಯೋಗಿಯೊಳಗೆ ಇದ್ದಾನೆ
ಕಠಿಣ ಪರಿಶ್ರಮಿಯಲ್ಲಿ ಇದ್ದಾನೆ
ಶುದ್ಧತೆಯ ಹೆಸರಲ್ಲಿ ಮೈಗೆ ಸ್ನಾನ ಮಾಡುವವನಲ್ಲಿ ಇಲ್ಲ
ಮೂಢ ಮಡಿವಂತಿಕೆಯಲ್ಲಿ ಇಲ್ಲ
ಮೂಢ ಸಂಪ್ರದಾಯದಲ್ಲಿ ಇಲ್ಲ
ಇಳಿದು ಬಾ ಈ ದೂಳಿನ ಮಣ್ಣಿಗೆ
ಪರಿಶ್ರಮ ಪಟ್ಟು ದುಡಿದು ಕೆಲಸ ಮಾಡಿದರೆ ನೀನು ದೇವರ ಕೃಪೆಗೆ ಪಾತ್ರನಾಗುತ್ತಿ’

ಈ ಭಾವಾರ್ಥ ಉಳ್ಳ ಕವಿತೆಯನ್ನು ಭೋದಿಸುವಾಗ ಶಿಕ್ಷಕಿಯೊಬ್ಬರಿಗೆ ಅದನ್ನು ಮಕ್ಕಳಿಗೆ ಅರ್ಥಮಾಡಿಸಲು ಅವರ ಪ್ರಾಯಕ್ಕೆ ಅನುಗುಣವಾಗಿ ಉದಾಹರಣೆ ಸಹಿತ ವಿವರಿಸುವ ಸ್ವಾತಂತ್ರ್ಯ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗೆ ವಿವರಿಸುವಾಗ ಶಿಕ್ಷಕಿ, “ದೇವರು ನಮ್ಮ ಹೃದಯದಲ್ಲಿ ಇದ್ದಾನೆ. ನಾವು ಇನ್ನೊಬ್ಬರನ್ನು. ಗೌರವಿಸಬೇಕು. ಇನ್ನೊಬ್ನರ ಬಗ್ಗೆ ಅಸೂಯೆ ಪಡಬಾರದು. ಇನ್ನೊಬ್ಬರನ್ನು ಕೊಲ್ಲುವುದರಿಂದ ನಮಗೆ ದೇವರ ಕೃಪೆ ದೊರೆಯುವುದಿಲ್ಲ” ಎಂದು ಹೇಳಿದರು. ಮಕ್ಕಳು ಅವರವರ ಮನೆಗೆ ಹೋದರು. ಮರುದಿವಸ ನಾಲ್ಕು ಮಂದಿ ತಾಯಂದಿರು ಶಾಲೆಗೆ ಬಂದರು.

ಆಗ ಶಿಕ್ಷಕಿ ಬೇರೊಂದು ಕೆಲಸದಲ್ಲಿ ಹೊರಗೆ ಹೋಗಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕಿಯನ್ನು ಕರೆದು ವಿಚಾರಿಸುತ್ತೇನೆ ಎಂದರು. ಶಿಕ್ಷಕಿ ಬಂದಾಗ, ಶಾಲಾ ಮುಖ್ಯೋಪಾದ್ಯಾಯಿನಿ ಮಕ್ಕಳ ತಾಯಿಯಂದಿರ ಆಕ್ಷೇಪಣೆಗಳನ್ನು ಅವರ ಗಮನಕ್ಕೆ ತಂದರು. ತಾನು ತರಗತಿಯಲ್ಲಿ ಹೇಳದ ವಿಚಾರಗಳನ್ನು ತಾಯಂದಿರು ಹೇಳಿದ್ದಾರೆ ಎಂದು ತಿಳಿದಾಗ ಶಿಕ್ಷಕಿಗೆ ಆಘಾತವಾಯಿತು. ಕೂಡಲೇ, ಶಾಲೆಗೆ ಬಂದಿದ್ದ ತಾಯಿಯಂದಿರ ಮೊಬೈಲ್‌ಗೆ ಶಿಕ್ಷಕಿ ಫೋನ್ ಮಾಡುತ್ತಾರೆ. ಆ ತಾಯಿ ನಾನು ಸ್ವಲ್ಪ ಬ್ಯುಸಿ ಇದ್ದೇನೆ ಎಂದು ಹೇಳುತ್ತಾರೆ.

ಶಿಕ್ಷಕಿ ಮತ್ತೂ ಒತ್ತಾಯ ಮಾಡುತ್ತಾರೆ. ”ನೀವು ಹತ್ತು ನಿಮಿಷ ಪುರುಸೊತ್ತು ಮಾಡಿಕೊಂಡು ಬನ್ನಿ. ನಾನು ತರಗತಿಯಲ್ಲಿ ಯಾವ ಅರ್ಥದಲ್ಲಿ ಪಾಠ ಮಾಡಿದ್ದೇನೆ ಎಂದು ತಿಳಿಸುತ್ತೇನೆ. ದಯವಿಟ್ಟು ಬನ್ನಿ” ಎಂದು ಹೇಳುತ್ತಾರೆ. ಆತಾಯಿ ನಾಳೆ ಬರುತ್ತೇನೆ ಎಂದು ಫೋನ್ ಕಟ್ ಮಾಡುತ್ತಾರೆ. ಶಿಕ್ಷಕಿ ಬೇರೆ ಕೆಲಸಕ್ಕೆ ಹೋಗುತ್ತಾರೆ.

ಅದಾಗಲೇ ಸಂಘಟನೆಯೊಂದರ ವ್ಯಕ್ತಿಯೊಂದಿಗೆ ಮಹಿಳೆಯೊಬ್ಬರು ಸೇಂಟ್ ಜೆರೋಜಾ ಶಾಲೆಯ ಶಿಕ್ಷಕಿಯ ಬಗ್ಗೆ ಹೇಳಿದ್ದಾರೆ ಎನ್ನಲಾದ ಸಂಭಾಷಣೆಯ ತುಣುಕು ವೈರಲ್ ಆಗುತ್ತದೆ. ಕೂಡಲೇ, ಕೆಲವು ಸಂಘಟನೆಗಳ ಕಾರ್ಯಕರ್ತರ ಜೊತೆ ಆ ನಾಲ್ಕು ತಾಯಂದಿರು ಬರುತ್ತಾರೆ. ನಮ್ಮ ಶಾಸಕ ವೇದವ್ಯಾಸ್ ಕಾಮತ್ ಶಾಲೆಯೊಳಗೆ ನುಗ್ಗುತ್ತಾರೆ. ಅಲ್ಲಿಯ ಶಿಕ್ಷಕಿಗೆ, ಮೇಲಾಗಿ ಅಲ್ಲಿಯ ಆಡಳಿತ ನಡೆಸುವ ರೆವರೆಂಡ್ ಫಾದರ್‌ಗೆ ಸೊಂಟಕ್ಕಿಂತ ಕೆಳಗಿನ ಭಾಷೆಯಲ್ಲಿ ಬೈಯುತ್ತಾರೆ.

ಪೊಲೀಸ್ ಕಮಿಷನರ್ ಮತ್ತು ಡಿಸಿ ಬರುತ್ತಾರೆ. ಡಿಡಿಪಿಐ ಅವರನ್ನು ಕರೆಸುತ್ತಾರೆ. ಶಿಕ್ಷಕಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಡಿಸಿ ಮತ್ತು ಕಮಿಷನರ್ ಶಾಲಾ ಆಡಳಿತ ಮಂಡಳಿಗೆ ಆದೇಶಿಸುತ್ತಾರೆ.

ಯಾವುದೇ ವಿಚಾರಣೆ ನಡೆಸದೆ ಉದ್ಯೋಗಿಯೊಬ್ಬರ ಅಮಾನತು ಮಾಡಲು ಆಗುವುದಿಲ್ಲ ಎಂದು ಆಡಳಿತ ಮಂಡಳಿ ಡಿಸಿ ಮತ್ತು ಕಮಿಷನರ್ ರವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತಾರೆ.

ಆಗ ಕಮಿಷನರ್ ಮತ್ತು ಡಿಸಿ ಯವರು ಹೊರಗಡೆ ಜನ ಆಕ್ರೋಶಿತರಾಗಿದ್ದಾರೆ. ನೀವು ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶವನ್ನು ಹೊರಗಡೆ ಇರುವ ಜನರಿಗೆ ಓದಿ ಹೇಳಬೇಕು. ನಮಗೆ ಇಲ್ಲಿ ಲಾ ಅಂಡ್ ಆರ್ಡರ್ ಸಮಸ್ಯೆ ಉಂಟಾಗಿದೆ. ಹಿಂಸೆ ಉಂಟಾದರೆ ನೀವೇ ಜವಾಬ್ದಾರಿ ಅನ್ನುತ್ತಾರೆ.

ಬೇರೆ ವಿಧಿ ಇಲ್ಲದೆ ಶಾಲಾ ಆಡಳಿತ ಮಂಡಳಿ ಶಿಕ್ಷಕಿಯನ್ನು ಅಮಾನತು ಮಾಡಿ ಆ ಆದೇಶವನ್ನು ಹೊರಗಡೆ ಸೇರಿದ್ದ ಜನರ ಎದುರು ಓದುತ್ತಾರೆ. ಅದಾಗ್ಯೂ ಈವರೆಗೂ ಯಾವುದೇ ಮಕ್ಕಳಾಗಲಿ, ಪೋಷಕರಾಗಲಿ ತರಗತಿಯಲ್ಲಿ ಶಿಕ್ಷಕಿಯ ಯಾವ ಶಬ್ದಗಳನ್ನು ಹೇಳಿ ಧರ್ಮದ ಅವಹೇಳನ ಮಾಡಿದ್ದಾರೆ ಎಂದು ಹೇಳಿ ಶಾಲಾ ಆಡಳಿತ ಮಂಡಳಿಗೆ ದೂರು ಸಲ್ಲಿಸಿಲ್ಲ.

ದೂರು ಇಲ್ಲದೇ, ವಿಚಾರಣೆ ಇಲ್ಲದೇ ಅಮಾಯಕ ಶಿಕ್ಷಕಿಯೊಬ್ಬರ ಅಮಾನತು ನಡೆದಿರುವುದು, ಯಾವುದೇ ತಪ್ಪು ಮಾಡದ ಶಿಕ್ಷಕಿಗೆ ಶಿಕ್ಷೆ ನೀಡಿರುವುದು ನಮ್ಮನಾಗರಿಕ ಸಮಾಜ ತಲೆತಾಗಿಸುವಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...