ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ : ಡಿ ಕೆ ಶಿವಕುಮಾರ್

Date:

  • ‘ಪೊಲೀಸರು ಬಿಜೆಪಿ ಏಜೆಂಟ್‌ ಆಗಿದ್ದಾರೆ’
  • ‘ಅತಿಕ್ರಮಣ ತಡೆಯಲು ಬಿಜೆಪಿಗೆ ಆಗುತ್ತಿಲ್ಲ’

ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್‌ಗೆ ಏನು ಕಡಿಮೆಯಾಗಿದೆ? ಗುಜರಾತಿನಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದೇಕೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಅಮುಲ್ ವಿವಾದದ ಕುರಿತು ಮಾತನಾಡಿದ್ದಾರೆ.

“ನಂದಿನಿ ನಮ್ಮ ರೈತರ ಸಂಸ್ಥೆ. ರಾಜ್ಯದ 80 ಲಕ್ಷ ರೈತರು ಅಧಿಕೃತವಾಗಿ ಸಹಕಾರ ಸಂಸ್ಥೆ ಸದಸ್ಯತ್ವ ಪಡೆದು ಹಾಲು ಉತ್ಪಾದನೆ ಮಾಡುತ್ತಿದ್ದಾರೆ. ಈಗ ಅವರಿಗೆ ಕಡಿಮೆ ಬೆಲೆ ನೀಡುತ್ತಿದ್ದಾರೆ. ಜಾನುವಾರುಗಳ ಮೇವಿನ ಬೆಲೆ ಹೆಚ್ಚಾಗಿದ್ದರೂ ಹಾಲಿನ ದರ ಹೆಚ್ಚಳ ಮಾಡಿ ಅವರಿಗೆ ನೆರವು ನೀಡಲು ಆಗಿಲ್ಲ” ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಹೇಳಿದ್ದ ಬಿಜೆಪಿ ಅದನ್ನು ಮಾಡುತ್ತಿಲ್ಲ. ನಮ್ಮ ನಂದಿನಿ ಸಂಸ್ಥೆಯ ಬ್ಯ್ರಾಂಡ್ ಗೆ ಏನು ಕಡಿಮೆಯಾಗಿದೆ? ಗುಜರಾತಿನಿಂದ ಇಲ್ಲಿಗೆ ತಂದು ಮಾರಾಟ ಮಾಡುತ್ತಿರುವುದೇಕೆ?” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ರೈತರಿಗೆ ನಾವು ಬೆಂಬಲ ಬೆಲೆ ನೀಡಿ ಅವರ ರಕ್ಷಣೆ ಮಾಡಬೇಕಾಗಿದೆ. ಇದೇ ಕಾರಣಕ್ಕೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಬಿಜೆಪಿ ಸರ್ಕಾರ, ಸಹಕಾರಿ ಸಚಿವರಿಗೆ ಈ ಅಮುಲ್‌ ಉತ್ಪನ್ನಗಳ ಅತಿಕ್ರಮಣವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯವರು ಈ ವಿಚಾರವಾಗಿ ಕೈಗೆ ಬಳೆ ತೊಟ್ಟುಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಣದಲ್ಲಿ ‘ಕಲಿ’ಗಳು – ಜಾಲತಾಣದಲ್ಲಿ ‘ಸೈಬರ್ ವಾರಿಯರ್‌’ಗಳ ಸಮರ

“ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರ ಪಕ್ಷದ ನಾಯಕರಿಗೇ ಅರಿವಾಗಿದೆ. ಇದೇ ಕಾರಣಕ್ಕೆ ಪದೆ ಪದೇ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೇಲೆ ಇಡಿ ದುರ್ಬಳಕೆ ಮಾಡಿಕೊಳ್ಳಲು ಪಿತೂರಿ ನಡೆಯುತ್ತಿದೆ. ಚುನಾವಣೆ ಸಮಯದಲ್ಲಿ ನೇಮಕ ಮಾಡಿರುವ ಪೊಲೀಸ್ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಸತ್ಯಮೇವ ಜಯತೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, “ಪಕ್ಷದ ಅಭ್ಯರ್ಥಿ ತೀರ್ಮಾನ ವಿಚಾರವಾಗಿ ನಮಗೆ ಸ್ವಲ್ಪ ಕಾಲಾವಕಾಶ ಬೇಕಾಗಿದೆ. ದೆಹಲಿ ನಾಯಕರು ನಮಗೆ ದಿನಾಂಕ ತಿಳಿಸಿದ ನಂತರ ನಾವು ಕಾರ್ಯಕ್ರಮ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...