ನೋಟಾ ಎಂದರೇನು?; ಚುನಾವಣಾ ಫಲಿತಾಂಶಗಳ ಮೇಲೆ ಅದರ ಪರಿಣಾಮವೇನು? ಡೀಟೇಲ್ಸ್‌

Date:

‘ಮೇಲಿನ ಯಾವುದೂ ಅಲ್ಲ’ ಎಂಬುದನ್ನು ಸಂಕ್ಷಿಪ್ತ ರೂಪದಲ್ಲಿ ನೋಟಾ (NOTA – None of the above) ಎನ್ನಲಾಗುತ್ತದೆ. ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ಕಂಡುಬರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಕೂಡ ಇರುತ್ತದೆ. ಇದು ಮತದಾರರು ತಮ್ಮ ಕ್ಷೇತ್ರದ ಯಾವುದೇ ಚುನಾವಣಾ ಅಭ್ಯರ್ಥಿಗೆ ಮತ ಚಲಾಯಿಸಲು ಬಯಸದಿದ್ದರೆ, ಅವರು ನೋಟಾಗೆ ಮತ ಚಲಾಯಿಸಬಹುದು. ಇದು ತಮ್ಮ ಮತವನ್ನು ಪರಿಗಣಿಸುತ್ತದೆ ಮತ್ತು ಅಭ್ಯರ್ಥಿಗಳ ವಿರುದ್ಧದ ತಮ್ಮ ವಿರೋಧವನ್ನೂ ಪ್ರತಿಬಿಂಬಿಸುತ್ತದೆ. ಆದರೂ, ನೋಟಾವನ್ನು ಭಾರತದಲ್ಲಿ ಪರಿಚಯಿಸಿದ ಸಮಯದಿಂದಲೂ ಚುನಾವಣಾ ಫಲಿತಾಂಶಗಳ ಮೇಲೆ ಅದರ ಪರಿಣಾಮವೇನು ಎಂಬುದರ ಬಗ್ಗೆ ರಾಜಕೀಯ ಚರ್ಚೆಗಳು ನಡೆಯುತ್ತಲೇ ಇವೆ. ಆದರೆ, ಈವರೆಗೆ ಚರ್ಚೆಗೆ ಉತ್ತರ ದೊರೆತಿಲ್ಲ.

ನೋಟಾ ಎಂದರೇನು?
ಚುನಾವಣೆಯ ಸಮಯದಲ್ಲಿ ತಮ್ಮ ಕ್ಷೇತ್ರದ ಯಾವುದೇ ಅಭ್ಯರ್ಥಿಗೆ ಮತ ಹಾಕಲು ಇಚ್ಛಿಸದ ಮತದಾರರಿಗೆ ನೋಟಾ ಆಯ್ಕೆ ಲಭ್ಯವಿರುತ್ತದೆ. ಮತದಾರರು ಎಲ್ಲ ಅಭ್ಯರ್ಥಿಗಳನ್ನು ಅಧಿಕೃತವಾಗಿ ತಿರಸ್ಕರಿಸಿ, ತಮ್ಮ ಮತವನ್ನು ನೋಂದಾಯಿಸಲು ಅನುವು ಮಾಡಿಕೊಡುತ್ತದೆ.

ನೋಟಾ ಮೊದಲ ಬಾರಿಗೆ ಬಳಸಿದ್ದ ಯಾವಾಗ?
ನೋಟಾ ಆಯ್ಕೆಯನ್ನು ಮೊದಲ ಬಾರಿಗೆ 2013ರಲ್ಲಿ ನಡೆದ ಐದು ರಾಜ್ಯಗಳ – ಛತ್ತೀಸ್‌ಗಢ, ಮಿಜೋರಾಂ, ರಾಜಸ್ಥಾನ, ದೆಹಲಿ ಮತ್ತು ಮಧ್ಯಪ್ರದೇಶ – ವಿಧಾನಸಭಾ ಚುನಾವಣೆಯ ಸಮಯದಲ್ಲಿ ಇವಿಎಂಗಳಲ್ಲಿ ಅಳವಡಿಸಲಾಯಿತು. ಪಿಯುಸಿಎಲ್‌ ಮತ್ತು ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ 2013ರಲ್ಲಿ ನೀಡಿದ ತೀರ್ಪಿನ ಬಳಿಕ, ನೋಟಾವನ್ನು ಅಳವಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೋಟಾವನ್ನು ಯಾಕೆ ಪರಿಚಯಿಸಲಾಯಿತು?
ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರು ತಮ್ಮ ಕ್ಷೇತ್ರದ ಅಭ್ಯರ್ಥಿಗಳ ವಿರುದ್ಧ ಅಸಮಾಧಾನವಿದ್ದರೆ, ಅವರು ಮತದಾನದಿಂದಲೇ ದೂರ ಉಳಿಯುತ್ತಿದ್ದರು. ಹೀಗಾಗಿ, ಮತದಾರರು ತಮ್ಮ ಮತ ಚಲಾಯಿಸುವ ಹಕ್ಕನ್ನು ಅಸಮಾಧಾನದ ಕಾರಣಕ್ಕಾಗಿ ಚಲಾಯಿಸುತ್ತಿರಲಿಲ್ಲ. ನೋಟಾ ಅಳವಡಿಸಿದ ಬಳಿಕ, ಅಭ್ಯರ್ಥಿಗಳ ವಿರುದ್ಧದ ಅತೃಪ್ತಿಯನ್ನು ಮತದಾರರು ಅಧಿಕೃತವಾಗಿ ನೋಟಾ ಮೂಲಕ ದಾಖಲಿಸಬಹುದು ಮತ್ತು ಮತದಾನ ಪ್ರಕ್ರಿಯೆಯನ್ನು ಭಾಗವಹಿಸಲು ನೋಟಾ ಪ್ರೇರೇಪಿಸುತ್ತಿದೆ.

ಚುನಾವಣಾ ಫಲಿತಾಂಶದಲ್ಲಿ ನೋಟಾ ಪರಿಣಾಮವೇನು? 
ಅಂದಹಾಗೆ, 2013ರಲ್ಲಿ ನೋಟಾ ಆಯ್ಕೆಯ ಅಳವಡಿಕೆಗೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್‌, ‘ರಾಜಕೀಯ ಪಕ್ಷಗಳು ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಮಾಡಲು ನೋಟಾ ಪರಿಣಾಮ ಬೀರುತ್ತದೆ’ ಎಂದು ಹೇಳಿತ್ತು. ಆದರೆ, ಭಾರತದಲ್ಲಿ ನೋಟಾ ಮತವು ಶೂನ್ಯ ಪ್ರಾಮುಖ್ಯತೆಯನ್ನು ಹೊಂದಿದೆ. ಇದು, ಫಲಿತಾಂಶದ ಮೇಲೆ ಯಾವುದೇ ಪರಿಣಾಮವನ್ನು ಬೀರುವುದಿಲ್ಲ.

ನೋಟಾ ಪರವಾಗಿ ಗರಿಷ್ಠ ಮತಗಳನ್ನು ನೀಡಿದ್ದರೂ ಸಹ, ಹೆಚ್ಚಿನ ಸಂಖ್ಯೆಯ ಮತಗಳನ್ನು ಪಡೆಯುವ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಲಾಗುತ್ತದೆ. ನೋಟಾ – ಕೇವಲ ಅತೃಪ್ತಿಯನ್ನು ಮಾತ್ರವೇ ಪ್ರತಿಬಿಂಬಿಸುತ್ತದೆ.

ಅದಾಗ್ಯೂ, ನೋಟಾ – ರಾಜಕೀಯ ಪಕ್ಷಗಳ ಮತಗಳನ್ನು ಕಡಿತಗೊಳಿಸುತ್ತದೆ. ಆದ್ದರಿಂದ ಗೆಲುವಿನ ಅಂತರದ ಮೇಲೆ ಕೊಂಚ ಪರಿಣಾಮ ಬೀರುತ್ತದೆ ಎಂದು ಕೆಲವರು ಸಮರ್ಥಿಸಿಕೊಳ್ಳುತ್ತಾರೆ.

ಮುಖ್ಯವಿಚಾರ ಏನೆಂದರೆ, ಇಂಡೋನೇಷ್ಯಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಅಭ್ಯರ್ಥಿಗಳಿಗಿಂತ ಹೆಚ್ಚಿನ ಮತ ನೋಟಾಗೆ ಬಂದಲ್ಲಿ, ಆ ಕ್ಷೇತ್ರದ ಅಭ್ಯರ್ಥಿಗಳನ್ನು ಬದಲಿಸಲಾಗುತ್ತದೆ. ಮತ್ತೊಮ್ಮೆ ಚುನಾವಣೆಯನ್ನು ನಡೆಸಲಾಗುತ್ತದೆ. ಆದರೆ, ಭಾರತದಲ್ಲಿ ಅಂತಹ ವ್ಯವಸ್ಥೆ ಇಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...