ಚುನಾವಣಾ ಬಾಂಡ್ | ಪ್ರಧಾನಿ ಮೋದಿಯವರಿಗೆ ಅಷ್ಟೊಂದು ಭಯ ಯಾಕೆ: ಜೈರಾಮ್ ರಮೇಶ್ ಪ್ರಶ್ನೆ

Date:

ಚುನಾವಣಾ ಬಾಂಡ್‌ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮತ್ತೆ ಮುಗಿಬಿದ್ದಿರುವ ಕಾಂಗ್ರೆಸ್‌, ಅವರ ಮೌನವನ್ನು ಪ್ರಶ್ನಿಸಿದೆ.

ಬುಧವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದು, “ಆಶ್ಚರ್ಯಕರ ಎಂಬಂತೆ ಪ್ರಧಾನಿಯವರು ಬುಧವಾರ ನವದೆಹಲಿಯಲ್ಲೇ ನೆಲೆಸಿದ್ದಾರೆ. ಆದರೆ ಹೊಸ ಉದ್ಘಾಟನೆಗಳಿಗೆ, ಮರುಬ್ರಾಂಡಿಂಗ್‌ಗೆ ಅಥವಾ ಹಿಂದಿನ ಕೆಲಸಕ್ಕಾಗಿ ಕ್ರೆಡಿಟ್ ಪಡೆಯಲು ಮೋದಿಯವರು ದೇಶಾದ್ಯಂತ ಪ್ರವಾಸ ಮಾಡುತ್ತಿಲ್ಲ ಯಾಕೆ? ಎಂದು ಕೇಳಿದ್ದಾರೆ.

ಈಗ ರದ್ದಾಗಿರುವ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಸಂಸ್ಥೆಗಳು ಮತ್ತು ಅವುಗಳನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ವಿವರಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಒಂದು ದಿನದ ನಂತರ ಸರ್ಕಾರದ ವಿರುದ್ಧ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ವೀಟ್‌ನಲ್ಲಿ ಸರಣಿ ಪ್ರಶ್ನೆ ಕೇಳಿರುವ ಜೈರಾಮ್ ರಮೇಶ್, ಯಾವ ರಾಜಕೀಯ ಪಕ್ಷಕ್ಕೆ ಯಾರು ಎಷ್ಟು ದೇಣಿಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸುವುದನ್ನು ತಡೆಯಲು ಅಥವಾ ವಿಳಂಬ ಮಾಡಲು ಮೋದಿ ಸರ್ಕಾರವು ಎಸ್‌ಬಿಐ ಮೂಲಕ ಸತತವಾಗಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದು, ಪ್ರಧಾನ ಮಂತ್ರಿಗಳು ಯಾಕಾಗಿ ಹೆದರುತ್ತಿದ್ದಾರೆ? ಚುನಾವಣಾ ಬಾಂಡ್‌ಗಳ ಅಂಕಿ-ಅಂಶಗಳು ಯಾವ ಹೊಸ ಹಗರಣವನ್ನು ಬಹಿರಂಗಪಡಿಸುತ್ತವೆ ಎಂದೋ? ಅವರು ಕೇಳಿದ್ದು, ತಮ್ಮ ಸರ್ಕಾರವು ಮೂಲಭೂತ ಜವಾಬ್ದಾರಿಗಳ ಬಗ್ಗೆಯೂ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

“ಇಡಿ, ಸಿಬಿಐ ಅಥವಾ ಐಟಿ ಇಲಾಖೆಯಿಂದ ದಾಳಿ ಅಥವಾ ತನಿಖೆ ನಡೆಸಿದ ಬಳಿಕ 30 ಕಂಪನಿಗಳಿಂದ 335 ಕೋಟಿ ದೇಣಿಗೆಗಳು ಬಂದಿದೆ. ಇವುಗಳು ಬಿಜೆಪಿಗೆ ಏಕೆ ದೇಣಿಗೆ ನೀಡಿವೆ? ಇಡಿ-ಸಿಬಿಐ-ಐಟಿ ತನಿಖೆಯ ಬೆದರಿಕೆಯ ಮೂಲಕ ಬಿಜೆಪಿ ಈ ಸಂಸ್ಥೆಗಳನ್ನು ಬೆದರಿಸಿ ಅವರಿಂದ ದೇಣಿಗೆ ವಸೂಲಿ ಮಾಡುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸೆಬಿಯು ನಾಲ್ಕು ಕಂಪೆನಿಗಳನ್ನು ಶೆಲ್ ಕಂಪೆನಿ ಎಂದು ಘೋಷಿಸಿತ್ತು. ಈ ನಾಲ್ಕು ಶೆಲ್ ಕಂಪನಿಗಳಿಂದ 4.9 ಕೋಟಿ ರೂಪಾಯಿಗಳನ್ನು ಬಿಜೆಪಿ ಏಕೆ ಸ್ವೀಕರಿಸಿದೆ. ಈ ಕಂಪನಿಗಳ ಮೂಲಕ ಯಾರ ಕಪ್ಪುಹಣವನ್ನು ಬಿಜೆಪಿಗೆ ತಲುಪಿಸಲಾಗಿದೆ? ಎಂದು ಜೈರಾಮ್ ರಮೇಶ್ ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ ಸರ್ಕಾರವು ನಿಯಮಗಳನ್ನು ತಿಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಮೇಶ್, ಸಂಸದೀಯ ವ್ಯವಹಾರಗಳ ಕೈಪಿಡಿ ಮತ್ತು ಸರ್ಕಾರದ ಎಲ್ಲ ಸ್ಥಾಪಿತ ಮಾನದಂಡಗಳ ಪ್ರಕಾರ ಯಾವುದೇ ಕಾಯ್ದೆಗೆ ನಿಯಮಗಳಿವೆ. ಅದರ ಅಂಗೀಕಾರದ ಆರು ತಿಂಗಳೊಳಗೆ ರೂಪಿಸಬೇಕಿತ್ತು. ಪೌರತ್ವ ತಿದ್ದುಪಡಿ ಕಾಯ್ದೆಗೆ ನಿಯಮಗಳನ್ನು ರೂಪಿಸಲು ಮೋದಿ ಸರ್ಕಾರವು ನಾಲ್ಕು ವರ್ಷ ಮತ್ತು ಮೂರು ತಿಂಗಳು ಏಕೆ ತೆಗೆದುಕೊಂಡಿತು? ಲೋಕಸಭೆ ಚುನಾವಣೆಗೂ ಕೆಲವು ದಿನಗಳು ಇರುವಾಗ ನಿಯಮಗಳು ಏಕೆ ಅನುಕೂಲಕರವಾಗಿ ಹೊರಬಂದಿವೆ? ರಮೇಶ್ ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ಸಂಸ್ಥೆಗಳ ಸುಗಮ ಕಾರ್ಯನಿರ್ವಹಣೆಯು ಸರ್ಕಾರದ ಮೊದಲ ಮತ್ತು ಪ್ರಮುಖ ಆದ್ಯತೆ. ಆದರೆ, ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಕೇವಲ ಒಬ್ಬನೇ ಚುನಾವಣಾ ಆಯುಕ್ತರನ್ನು ಹೊಂದುವ ಹಂತಕ್ಕೆ ಚುನಾವಣಾ ಆಯೋಗ ತಲುಪಿದ್ದು ಹೇಗೆ? ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಏಕಾಏಕಿ ರಾಜೀನಾಮೆ ನೀಡಿದ್ದು ಏಕೆ? ಎಂದು ಸುದೀರ್ಘ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...