ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ: ಕುಮಾರಸ್ವಾಮಿ ಪ್ರಶ್ನೆ

Date:

ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು; “ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ ‘ಗ್ಯಾರಂಟಿ ಸ್ವಯಂ ಸೇವಕರು’ ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕುಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು” ಎಂದು ಪ್ರಶ್ನೆ ಮಾಡಿದ್ದಾರೆ.

“ಹೆಚ್.ಎಂ.ರೇವಣ್ಣ ಅವರಿಗೆ ಸಂಪುಟದರ್ಜೆ ಕೊಟ್ಟು ರಚಿಸಲಾಗಿರುವ ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ? ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಮೀಕ್ಷೆ ಮಾಡುತ್ತಿಲ್ಲವೇ? ಗ್ಯಾರಂಟಿ ಅನುಷ್ಠಾನ ನಿರ್ವಹಣೆಗೆ ವಾರ್ಷಿಕ ₹16 ಕೋಟಿ ವೆಚ್ಚಿಸುತ್ತೇವೆ ಎಂದಿದ್ದಾರೆ ಸಿಎಂ. ಹಾಗಾದರೆ, ಇದಕ್ಕೆ ಹೋಗುತ್ತಿರುವ ವೇತನ, ಭತ್ಯೆಗಳೆಲ್ಲ ವ್ಯರ್ಥವೇ?” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪೋಲಿಯೋ ಲಸಿಕೆ ಹಾಕುವುದರ ಜತೆಗೆ ಈ ಸುಡುಬಿಸಿಲಿನಲ್ಲಿ ಹಳ್ಳಿಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ಮಾಡುತ್ತಿದ್ದಾರೆ. ಅದೂ ಒತ್ತಾಯಪೂರ್ವಕವಾಗಿ. ಹಾಗಾದರೆ, ಅವರೂ ಈ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತಾರೆಯೆ” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

“ಒಬ್ಬ ಕಾರ್ಯಕರ್ತೆಗೆ 120ರಿಂದ 150 ಮನೆ ಹಂಚಿಕೆ ಮಾಡಿದ್ದು, 10–15 ದಿನದಲ್ಲಿ ಸಮೀಕ್ಷೆ ಮುಗಿಸಬೇಕಿದೆ. ಬೆಳಗ್ಗೆ 9ರಿಂದ ಸಂಜೆ 4ರವರೆಗೂ ಉರಿಬಿಸಿಲಿನಲ್ಲಿ ಮಾಡುವ ಈ ಕೆಲಸಕ್ಕೆ ಅವರಿಗೆ ಸಿಗುವ ಗೌರವಧನ ಕೇವಲ ₹1,000!ಅದೇ ‘ಎಸಿ ರೂಂ ಸಮೀಕ್ಷೆ ಗಿರಾಕಿ’ಗಳಿಗೆ ಕೋಟಿ ಕೋಟಿ ಹಣ ಹೋಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಜನರ ತೆರಿಗೆ ಹಣದಿಂದಲೇ ಗ್ಯಾರಂಟಿ ಸಮಾವೇಶಗಳನ್ನು (ಇವು ಚುನಾವಣಾ ಪ್ರಚಾರ ಸಭೆಗಳು) ಸಾಲು ಸಾಲಾಗಿ ನಡೆಸುತ್ತಿರುವ ಸರಕಾರಕ್ಕೆ ಸಮೀಕ್ಷೆಗಳ ಮೂಲಕವೂ ದುಡ್ಡು ಹೊಡೆಯುವ ಹಪಾಹಪಿ! ‘ಪಟ್ಟು-ಮಟ್ಟು-ಒಳಗುಟ್ಟು’ ಕಂಪನಿ ಸೇರಿ ಅಂತಹ ಹಲವಾರು ನಿಗೂಢ ಕಂಪನಿಗಳಿಗೆ ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿಯೇ ಕೋಟಿ ಕೋಟಿಯಷ್ಟು ಜನರ ತೆರಿಗೆ ಹಣ ಸುರಿಯುತ್ತಿದೆ ಸರಕಾರ” ಎಂದು ಟೀಕಾಪ್ರಹಾರ ನಡೆಸಿದ್ದಾರೆ.

“ಗ್ಯಾರಂಟಿ ಸಮಾವೇಶಗಳಿಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರೇ ಬರಬೇಕು, ಪಲ್ಸ್ ಪೋಲಿಯೋ ಲಸಿಕೆಯನ್ನೂ ಇವರೇ ಹಾಕಬೇಕು, ಗ್ಯಾರಂಟಿ ಸಮೀಕ್ಷೆಯನ್ನೂ ನಡೆಸಬೇಕು ಹಾಗೂ ತಮ್ಮ ನಿತ್ಯದ ನಿಗದಿತ ಕರ್ತವ್ಯವನ್ನೂ ನಿಭಾಯಿಸಬೇಕು. ಹಾಗಾದರೆ, ಸರಕಾರ ತೆರಿಗೆ ಹಣ ಸುರಿದು ಮಾಡಿಸುತ್ತಿರುವ ‘ಎಸಿ ರೂಂ ಸಮೀಕ್ಷೆ’ಗಳ ಕಥೆ ಏನು? ಸಮೀಕ್ಷೆ ಕಷ್ಟ ಈ ಹೆಣ್ಣುಮಕ್ಕಳದು, ಜನರ ತೆರಿಗೆ ಹಣ ‘ಎಸಿ ರೂಂ ಗಿರಾಕಿ’ಗಳದು! ಬವಣೆ ಒಬ್ಬರದು, ಭರ್ಜರಿ ಲಾಭ ಇನ್ನೊಬ್ಬರದು” ಎಂದು ಆರೋಪ ಮಾಡಿದ್ದಾರೆ.

ಪ್ರಚಾರಕ್ಕೆ ಬರವಿಲ್ಲ

“ಸಿದ್ದರಾಮಯ್ಯ ಅವರ ಸರಕಾರ ಮಾಡಿಕೊಂಡಿರುವ ಇಡೀ ಗ್ಯಾರಂಟಿ ಸೆಟಪ್ ಏನು ಮಾಡುತ್ತಿದೆ? ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬಣ್ಣಬಣ್ಣದ ಜಾಹೀರಾತು ನೀಡುವುದಕ್ಕೆ ಮಾತ್ರ ಸೀಮಿತವಾಗಿದೆಯೇ? ಜನರ ತೆರಿಗೆ ದುಡ್ಡು, ಯಲ್ಲಮನ ಜಾತ್ರೆ ಎನ್ನುವಂತಾಗಿದೆ. ಬರ, ಕುಡಿಯುವ ನೀರಿನ ಹಾಹಾಕಾರದ ನಡುವೆಯೂ ಇವರ ಗ್ಯಾರಂಟಿ ರಾಜಕೀಯಕ್ಕೆ ಬರವಿಲ್ಲ, ಪ್ರಚಾರಕ್ಕೂ ಬರವಿಲ್ಲ” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...