ಅಮುಲ್ ರಾಜ್ಯದಲ್ಲಿ ವ್ಯಾಪಾರ ಮಾಡಿದರೆ ತೊಂದರೆ ಏನು : ಸಿ ಟಿ ರವಿ

Date:

  • ಇದೆಂತ ಮುಟ್ಟಾಳರ ಗುಂಪೋ ಎಂದ ಸಿ ಟಿ ರವಿ
  • ಅಮುಲ್ ಸಮರ್ಥಿಸಿಕೊಂಡ ಸಚಿವ ಸುಧಾಕರ್

ಗುಜರಾತ್ ಮೂಲದ ಅಮುಲ್ ಕಂಪನಿ ತನ್ನ ವ್ಯಾಪಾರವನ್ನು ಕರ್ನಾಟಕದಲ್ಲಿ ವಿಸ್ತರಿಸುತ್ತಿದೆ. ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸುವ ಹುನ್ನಾರದಿಂದಲೇ ಅಮುಲ್ ರಾಜ್ಯಕ್ಕೆ ಬರುತ್ತಿದೆ ಎನ್ನುವ ಚರ್ಚೆಗಳು ಬಿಸಿಯಾಗಿರುವ ಹೊತ್ತಲ್ಲೇ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ‘ಅಮುಲ್ ರಾಜ್ಯದಲ್ಲಿ ಮಾರಾಟವಾದರೆ ತೊಂದರೆ ಏನೀಗ’ ಎನ್ನುವ ಧಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಅಮುಲ್ ಮಾರಾಟದ ಹಿಂದಿನ ಹುನ್ನಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಕೆಲ ದಿನಗಳಿಂದ ನಂದಿನಿ ಹಾಲು ಉತ್ಪನ್ನಗಳ ಅಭಾವವೂ ಕಾಡುತ್ತಿದೆ. ಸಾಮಾನ್ಯವಾಗಿ ವಿಪಕ್ಷಗಳು ರಾಜ್ಯ ರೈತರ ಪರವಾಗಿ ನಿಂತಿವೆ. ವಿಪಕ್ಷಗಳನ್ನು ಗುರಿಯಾಗಿಸುವ ಬರದಲ್ಲಿ ಸಿ ಟಿ ರವಿ, ಅಮುಲ್ ವ್ಯಾಪಾರ ರಾಜ್ಯಕ್ಕೆ ಬಂದರೆ ತೊಂದರೆ ಏನು ಎಂದು ಹೇಳಿಕೆ ನೀಡಿದ್ದಾರೆ

ಈ ಕುರಿತು ಟ್ವೀಟ್ ಮಾಡಿರುವ ಸಿ ಟಿ ರವಿ, “ಇಟಲಿಯನ್ನರು ದೇಶವನ್ನು ಆಳಿದರೆ ಗುಲಾಮರಿಗೆ ಯಾವ ತೊಂದರೆಯೂ ಇಲ್ಲ. ಆದರೆ, ಭಾರತದ್ದೆ ಆದ ಅಮುಲ್ ಇತರೆ ಕಂಪನಿಗಳಂತೆ ಕರ್ನಾಟಕದಲ್ಲಿ ಮಾರಾಟ ಮಾಡಿದರೆ ಇವರಿಗೆ ಸಮಸ್ಯೆ ಎನಿಸುತ್ತದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೆಂತ ಮುಟ್ಟಾಳರ ಗುಂಪೋ” ಎಂದು ಸಿ ಟಿ ರವಿ ಲೇವಡಿ ಮಾಡಿದ್ದಾರೆ.

ಕೆಎಂಎಫ್‌ ಅನ್ನು ತಮ್ಮ ಜೀವನಾಡಿ ಆಗಿಸಿಕೊಂಡವರಿಗೆ ಅಮುಲ್ ವ್ಯಾಪಾರ ವಿಸ್ತರಣೆ ಆತಂಕಕ್ಕೀಡು ಮಾಡಿದೆ. ಈ ನಡುವೆ, ಬಿಜೆಪಿ ನಾಯಕರು ‘ಅದೇನು ಮಹಾ’ ಎನ್ನುವಂತೆ ವರ್ತಿಸುತ್ತಿರುವುದು ವಿಪರ್ಯಾಸವೇ ಸರಿ.

ಈ ಸುದ್ದಿ ಓದಿದ್ದೀರಾ? ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ

ಅಮುಲ್ ಬರುವಿಕೆಯನ್ನು ಸಮರ್ಥಿಸಿಕೊಂಡ ಸಚಿವ ಕೆ ಸುಧಾಕರ್, “ಅಮುಲ್ ಅಂದ್ರೆ ಬಿಜೆಪಿ, ನಂದಿನಿ ಅಂದ್ರೆ ಕಾಂಗ್ರೆಸ್ಸಾ..? ಕಾಂಗ್ರೆಸ್ಸಿಗರು ಅಪಹಾಸ್ಯಕ್ಕೆ ಒಳಗಾಗಬೇಡಿ. ಕಾಮಾಲೆ ಕಣ್ಣಿನಿಂದ ನೋಡೋದನ್ನ ಬಿಡಿ” ಎಂದು ಹೇಳಿದ್ದಾರೆ.

“ನಂದಿನಿ ಹಾಲನ್ನು ರಾಜ್ಯಕ್ಕೆ  ಸೀಮಿತ ಮಾಡಬೇಡಿ ನಂದಿನಿ ಹಾಲನ್ನ ಬೇರೆ ರಾಜ್ಯಗಳಿಗೂ ಕಳಿಸುತ್ತಿದ್ದೇವೆ. ಸೇನೆ, ತಿರುಪತಿ, ದೆಹಲಿಗೂ ಕಳಿಸುತ್ತಿದ್ದೇವೆ. ಬೇರೆ ಬ್ರ್ಯಾಂಡ್ ಹಾಲನ್ನೂ ಇಲ್ಲಿ ಮಾರಲಾಗುತ್ತಿದೆ” ಎಂದು ಸುಧಾಕರ್ ಬಲವಾಗಿ ಅಮುಲ್‌ಗೆ ಸ್ವಾಗತ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...