ರೈತರ ಅರ್ಜಿ ಕಸಕ್ಕೆ ಎಸೆದ ಸಿಎಂ ಸಿದ್ದರಾಮಯ್ಯಗೆ ಯಾವ ಶಿಕ್ಷೆ: ಜೆಡಿಎಸ್‌ ಪ್ರಶ್ನೆ

Date:

ಪಂಚೆ ಧರಿಸಿದ್ದ ರೈತನಿಗೆ ಪ್ರವೇಶ ನಿರಾಕರಿಸಿದ್ದ ಜಿ ಟಿ ಮಾಲ್ ಅನ್ನು 7 ದಿನ ಬಂದ್ ಮಾಡಿಸಿದ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಮಾಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಜನತಾದಳ ಪಕ್ಷವೂ ಆಗ್ರಹಿಸಿತ್ತು. ಆದರೆ, ರೈತರ ಅರ್ಜಿ ಕಸಕ್ಕೆ ಎಸೆದ ಸಿಎಂಗೆ ಯಾವ ಶಿಕ್ಷೆ? ಸಿದ್ದರಾಮಯ್ಯ ವಿರುದ್ಧ ಕ್ರಮ ಯಾವಾಗ ಎಂದು ಜೆಡಿಎಸ್‌ ಪ್ರಶ್ನಿಸಿದೆ.

ಎಕ್ಸ್‌ ತಾಣದಲ್ಲಿ ಶುಕ್ರವಾರ ಪೋಸ್ಟ್‌ ಮಾಡಿರುವ ಜೆಡಿಎಸ್‌, “ಚಾಮರಾಜನಗರದಲ್ಲಿ ನಡೆದಿದ್ದ ಕೃತಜ್ಞತಾ ಸಮಾವೇಶದಲ್ಲಿ ರೈತರು ಸಮಸ್ಯೆಗಳನ್ನು ಪರಿಹರಿಸಲು ನೀಡಿದ್ದ ಮನವಿ ಪತ್ರಗಳನ್ನು ಸಿಎಂ ಸಿದ್ದರಾಮಯ್ಯ ಅವರೇ ಕಸದ ಬುಟ್ಟಿಗೆ ಎಸೆದಿದ್ದರಲ್ಲಾ? ಅದು ಅನ್ನದಾತನಿಗೆ ಮಾಡಿದ ಅಪಮಾನವಲ್ಲವೇ?” ಎಂದು ಕೇಳಿದ್ದಾರೆ.

ರೈತರ ಅರ್ಜಿಯನ್ನು ಕಾಲ ಕಸದಂತೆ ಬಿಸಾಕಿದ ಮುಖ್ಯಮಂತ್ರಿಗಳ ಮಹಾಪರಾಧಕ್ಕೆ ಯಾವ ರೀತಿಯ ಕಠಿಣ ಕ್ರಮ ಜರುಗಿಸಬೇಕು? ರೈತ ದೇಶದ ಬೆನ್ನೆಲುಬು. ದೇಶಕ್ಕೆ ಅನ್ನ ಕೊಡುವ ಅನ್ನದಾತರನ್ನು ತುಚ್ಚವಾಗಿ ಕಂಡಿರುವ ನೀವು, ನಾಡಿನ ರೈತರ ಕ್ಷಮೆ ಕೇಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದೇ ಲೇಸು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...